ದಲಿತ ಪ್ರಾಧ್ಯಾಪಕಿ ಮೇಲೆ ಸಹೋದ್ಯೋಗಿ ಮತ್ತು ವಿದ್ಯಾರ್ಥಿಗಳಿಂದ ಹಲ್ಲೆ- ಜಾತಿ ದೌರ್ಜನ್ಯ; ಆರೋಪ

Date:

ತಮ್ಮ ಇಬ್ಬರು ಸಹೋದ್ಯೋಗಿ ಪ್ರಾಧ್ಯಾಪಕರು ಮತ್ತು ಇಬ್ಬರು ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿದ್ದಾರೆ ಎಂದು ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದಲಿತ ಸಹಾಯಕ ಪ್ರಾಧ್ಯಾಪಕಿ ಒಬ್ಬರು ಆರೋಪಿಸಿದ್ದಾರೆ.

ಮೂರು ತಿಂಗಳ ಹಿಂದೆಯೇ ಘಟನೆ ನಡೆದಿದೆ. ಅಂದೇ ಪ್ರಾಧ್ಯಾಪಕಿಯು ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಬರೋಬ್ಬರಿ ಮೂರು ತಿಂಗಳ ನಂತರ ಆಗಸ್ಟ್‌ 27ರಂದು ಎಫ್‌ಐಆರ್‌ ದಾಖಲಾಗಿದೆ. ಆದೂ, ಆಕೆ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದೂರುದಾರ ಪ್ರಾಧ್ಯಾಪಕಿ ಆರೋಪಿಸಿದ್ದಾರೆ.

“ನಾನು ದಲಿತೆ ಎಂಬ ಕಾರಣಕ್ಕೆ ಆರೋಪಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದರು. ನನ್ನನ್ನು ಹುದ್ದೆಯಿಂದ ತೆಗೆದು ಹಾಕುವಂತೆ ಒತ್ತಡ ಹಾಕಿದ್ದರು. ಅವರ ಒತ್ತದ ಹೊರತಾಗಿಯೂ ನಾನು ನನ್ನ ಹುದ್ದೆಯನ್ನು ಉಳಿಸಿಕೊಂಡಿದ್ದೇನೆ. ಆಗಿನಿಂದ, ನನ್ನ ಮೇಲೆ ಆರೋಪಿಗಳು ವೈಷಮ್ಯ ಹೆಚ್ಚಿಕೊಂಡು, ಹಲ್ಲೆ ಮಾಡಿದ್ದರು” ಎಂದು ದೂರುದಾರರು ತಿಳಿಸಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಶ್ವವಿದ್ಯಾಲಯದ ಸುತ್ತ ಸುತ್ತವಂತೆ ಮಾಡಬೇಕೆಂದು ಮಾತಾನಾಡಿಕೊಂಡಿದ್ದರು. ಮೇ 22ರಂದು ಆರೋಪಿಗಳಲ್ಲಿ ಒಬ್ಬರು ಆಕೆಯ ಬೇಂಬರ್‌ಗೆ ನುಗ್ಗಿ, ಹುದ್ದೆಯಿಂದ ತೆಗೆದು ಹಾಕಿಸುವುದಾಗಿ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಅಂದು ಆರೋಪಿಯೊಬ್ಬ ನನ್ನ ಚೇಂಬರ್‌ನಲ್ಲಿ ಗಲಾಟೆ ಮಾಡಿದ್ದರಿಂದ ನಾನು ಕೊಠಡಿಯಿಂದ ಹೊರ ಬಂದೆ. ಅಲ್ಲಿ ಇತರ ಆರೋಪಿಗಳು ಕೊಠಡಿಯ ಬಾಗಿಲು ಮುಚ್ಚಿದರು. ಒಬ್ಬ ನನ್ನನ್ನು ಹಿಡಿದುಕೊಂಡು ನನ್ನ ಬಟ್ಟೆಗಳನ್ನು ಹರಿದು ಹಾಕಿದ. ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದ” ಎಂದು ಪ್ರಾಧ್ಯಾಪಕಿ ಅರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉ. ಪ್ರದೇಶ | ಮುಸ್ಲಿಂ ಪ್ರಯಾಣಿಕರ ನಮಾಝ್‌ಗೆ ಅವಕಾಶ ನೀಡಿ ಅಮಾನತಾಗಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ

ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 342 (ತಪ್ಪಾದ ಬಂಧನ), 354-ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಆರೋಪಗಳು ಆಧಾರರಹಿತವೆಂದು ಹೇಳಿದ್ದಾರೆ. “ಆಕೆ ಇತರರ ವಿರುದ್ಧವೂ ಇದೇ ರೀತಿಯ ದೂರುಗಳನ್ನು ದಾಖಲಿಸಿದ್ದಾರೆ” ಎಂದು ಆರೋಪಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...