ದಲಿತ ಬಾಲಕಿ ಮೇಲೆ 2 ವರ್ಷ ನಿರಂತರ ಸಾಮೂಹಿಕ ಅತ್ಯಾಚಾರ: 13 ಮಂದಿ ಕಾಮುಕರ ಬಂಧನ

Date:

ಆಂಧ್ರ ಪ್ರದೇಶದ ಶ್ರೀ ಸತ್ಯ ಜಿಲ್ಲೆಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಎರಡು ವರ್ಷಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಕ್ಕೆ ಸಂಬಂಧಿಸಿದಂತೆ 13 ಮಂದಿ ಕಾಮುಕರನ್ನು ಬಂಧಿಸಲಾಗಿದೆ.

ಬಾಲಕಿ ಎಂಟು ತಿಂಗಳ ಗರ್ಭಿಣಿಯಾದ ಬಳಿಕವೇ ಈ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಜೂನ್ 9 ರಂದು ದೂರು ನೀಡಿದ್ದು, ಸದ್ಯ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಬಿಎನ್‌ಎಸ್ ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ದಲಿತ ಬಾಲಕಿ ಮೇಲೆ 14 ಜನರಿಂದ 2 ವರ್ಷ ನಿರಂತರ ಅತ್ಯಾಚಾರ: ಎಂಟು ತಿಂಗಳ ಗರ್ಭಿಣಿಯಾದಾಗ ಪ್ರಕರಣ ಬೆಳಕಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಪ್ರಕಾರ, ಅಚಂಪಲ್ಲಿ ವರ್ಧನ್ (21), ತಲಾರಿ ಮುರಳಿ (25), ಬಡಗೋರ್ಲ ನಂದವರ್ಧನ್ ರಾಜ್ (23), ಅರೆಂಚೆರು ನಾಗರಾಜು (51), ಬೋಯ ಸಂಜೀವ್ (40) ಮತ್ತು ಬುಡಿದ ರಾಜಣ್ಣ (49) ಎಂಬ ಆರೋಪಿಗಳನ್ನು ಜೂನ್ 9ರಂದು ಬಂಧಿಸಲಾಗಿದೆ. ಜೂನ್ 10ರಂದು ಇತರ ಏಳು ಮಂದಿಯನ್ನು ಬಂಧಿಸಲಾಗಿದೆ. ಹಲವು ಪ್ರಮುಖ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ?

ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಅದರ ವಿಡಿಯೋವನ್ನು ಇಟ್ಟುಕೊಂಡು ನಿರಂತರ ಎರಡು ವರ್ಷಗಳ ಕಾಲ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಎಂಟು ತಿಂಗಳ ಗರ್ಭಿಣಿಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಅನಂತಪುರ ಜಿಲ್ಲೆಯ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸದ್ಯ ಬಾಲಕಿಯು ಗರ್ಭಪಾತ ಮಾಡಲಾಗದ ಸ್ಥಿತಿಯಲ್ಲಿದ್ದಾಳೆ. ಹೆರಿಗೆಯ ಬಳಿಕ ಬಾಲಕಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಕಾನೂನು ಕ್ರಮಗಳಿಗೆ ಅಗತ್ಯವಾದ ಕಾರಣ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ ಕೋರಲಾಗಿದೆ.

ಇದನ್ನು ಓದಿದ್ದೀರಾ? ಕೋಲಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದರೂ ಯಾವುದೇ ಸ್ಥಳೀಯರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಕೆಲವು ಗ್ರಾಮಸ್ಥರು ಬಾಲಕಿಯ ಮೇಲೆ ಆರೋಪಿಗಳಲ್ಲಿ ಒಬ್ಬನನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.

ಸದ್ಯ ಈ ಪ್ರಕರಣವು ದೇಶದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಬಗ್ಗೆ ಅದರಲ್ಲೂ ಮುಖ್ಯವಾಗಿ ದಲಿತ ಬಾಲಕಿಯರ ಸುರಕ್ಷತೆಯ ಬಗ್ಗೆ ಪ್ರಶ್ನೆ ಎತ್ತಿದೆ. ಸ್ಥಳೀಯರಿಗೆ ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದಿರುವುದರಿಂದ ಈ ಕೃತ್ಯದ ಹಿಂದೆ ಬಲಾಢ್ಯರ ಕೈ ಇರುವ ಅನುಮಾನ ಹುಟ್ಟುಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...