ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

Date:

ಬೈಕ್ ಕದ್ದಿರಬೇಕು ಎಂಬ ಶಂಕೆಯಿಂದ ದಲಿತ ವ್ಯಕ್ತಿಯೊಬ್ಬರನ್ನು ತಲೆ ಕೆಳಗಾಗಿ ನೇತಾಡಿಸಿ, ಅಮಾನುಷವಾಗಿ ಥಳಿಸಿದ ಘಟನೆ ರಾಜಸ್ಥಾನದ ಬರ್ಮೆರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಗುಡಮಲಾನಿ ಪ್ರದೇಶದ ಭಕ್ರಾಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದ ಶ್ರವಣ್ ಕುಮಾರ್ ಎಂಬ ದಲಿತ ವ್ಯಕ್ತಿ ಸಂತ್ರಸ್ತ ಯುವಕ. ಸ್ಥಳೀಯ ಮೇಳವೊಂದರಲ್ಲಿ ಬೈಕ್ ಕದ್ದ ಆರೋಪದಲ್ಲಿ ಡಿಸೆಂಬರ್ 29ರಂದು ಶ್ರವಣ್ ಕುಮಾರ್ ನನ್ನು ಬಂಧಿಸಲಾಗಿತ್ತು ಎಂದು ಬರ್ಮೆರ್ ಎಸ್ಪಿ ನರೇಂದ್ರ ಸಿಂಗ್ ಮೀನಾ ಹೇಳಿದ್ದಾರೆ.

ಕೆಲ ದಿನಗಳ ಬಳಿಕ ಅತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಆತ ಮತ್ತೊಂದು ಬೈಕ್ ಕದ್ದಿದ್ದಾನೆ ಎನ್ನುವುದು ಗ್ರಾಮಸ್ಥರ ಆರೋಪ. ಆದರೆ ಈ ಆರೋಪವನ್ನು ಕುಮಾರ್ ನಿರಾಕರಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಶುಕ್ರವಾರ ಗ್ರಾಮಸ್ಥರು ಕುಮಾರ್ ನನ್ನು ಹಿಡಿದು ಕೈಗಳನ್ನು ಕಟ್ಟಿ ತಲೆ ಕೆಳಗಾಗಿ ಮರಕ್ಕೆ ನೇತು ಹಾಕಿ ನಿರ್ದಯವಾಗಿ ಥಳಿಸಿದ್ದಾರೆ. ಈ ಹಲ್ಲೆಯ ವಿಡಿಯೊ ಚಿತ್ರೀಕರಣವನ್ನೂ ಮಾಡಲಾಗಿದ್ದು ಇದು ವೈರಲ್ ಆಗಿದೆ ಎಂದು ಮೂಲಗಳು ಹೇಳಿವೆ.

ಸಂತ್ರಸ್ತ ವ್ಯಕ್ತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮತ್ತು 53 ಸೆಕೆಂಡಿನ ವಿಡಿಯೊ ತುಣುಕನ್ನು ಪೊಲೀಸರು ಪರಿಶೀಲಿಸಿದ ಬಳಿಕ ಪ್ರಕರಣ ದಾಖಲಿಸಲಾಗಿದೆ ಎಂದು ಗುಡಮಲಾನಿ ಡಿವೈಎಸ್ಪಿ ಸುಖರಾಂ ಬಿಷ್ಣೋಯಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...