ಬಿಹಾರ | ದಲಿತ ಮಹಿಳೆಯನ್ನು ನಗ್ನಗೊಳಿಸಿ ಆಕೆಯ ಮೇಲೆ ಮೂತ್ರ ವಿಸರ್ಜಿಸಿದ ಲೇವಾದೇವಿಗಾರ

Date:

ಸಾಲದ ಸಂಪೂರ್ಣ ಮರುಪಾವತಿಯ ನಂತರವೂ ಹೆಚ್ಚಿನ ಹಣಕ್ಕಾಗಿ “ನ್ಯಾಯಹೀನ” ಬೇಡಿಕೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಕ್ಕಾಗಿ ದಲಿತ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಲ್ಲದೆ ಆಕೆಯ ಬಾಯಿಗೆ ಮೂತ್ರ ವಿಸರ್ಜಿಸಿದ ಅಮಾನವೀಯ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಖುಸ್ರುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಇವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಸಂತ್ರಸ್ತೆ, ಸಾಲದ ಹಣವನ್ನು ಬಡ್ಡಿ ಸಮೇತ ಪಾವತಿಸಿದರೂ ಈ ಹಿಂಸೆಯನ್ನು ಅನುಭವಿಸಬೇಕಾಯಿತು ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಪತಿ ಕೆಲವು ತಿಂಗಳ ಹಿಂದೆ ಪ್ರಮೋದ್ ಸಿಂಗ್ ಅವರಿಂದ 1,500 ರೂ.ಗಳನ್ನು ಸಾಲವಾಗಿ ಪಡೆದಿದ್ದರು ಮತ್ತು ಹಣವನ್ನು ಬಡ್ಡಿಯೊಂದಿಗೆ ಹಿಂದಿರುಗಿಸಿದ್ದರು. ಆದರೆ, ಅವರು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದರು. ನಾವು ಪ್ರಮೋದ್ ಸಿಂಗ್ ಬೇಡಿಕೆಯನ್ನು ತಿರಸ್ಕರಿಸಿದ್ದಕ್ಕೆ ಈ ರೀತಿ ಮಾಡಲಾಗಿದೆ” ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ

ಸಂತ್ರಸ್ತೆಗೆ ಹೆಚ್ಚಿನ ಹಣ ನೀಡದಿದ್ದರೆ ಗ್ರಾಮದಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತೇವೆ ಎಂದು ಪ್ರಮೋದ್ ಸಿಂಗ್ ಫೋನ್ ಮೂಲಕ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ತನ್ನ ಮೊಬೈಲ್‌ನಲ್ಲಿ ಪೊಲೀಸರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ.

ಸಂತ್ರಸ್ತೆಯ ಕುಟುಂಬದ ಸದಸ್ಯರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ”ದೂರಿನ ಬಗ್ಗೆ ವಿಚಾರಣೆ ನಡೆಸಲು ಪೊಲೀಸ್ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ್ದು, ಇದರಿಂದ ಕೋಪಗೊಂಡ ಪ್ರಮೋದ್ ಮತ್ತು ಆತನ ಸಹಚರರು ಶನಿವಾರ ರಾತ್ರಿ 10 ಗಂಟೆಗೆ ಸಂತ್ರಸ್ತೆಯ ಮನೆಗೆ ಹೋಗಿ ಆಕೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ಪ್ರಮೋದ್ ಅವರ ಪುತ್ರ ಮೂತ್ರ ವಿಸರ್ಜಿಸಿದ್ದಾನೆ” ಎಂದು ತಿಳಿಸಿದ್ದಾರೆ.

“ದಲಿತ ಸಮುದಾಯದ ಮಹಿಳೆಯ ಮೇಲೆ ಅಮಾನುಷ ಕೃತ್ಯವೆಸಗಿದ ಆರೋಪಿಗಳ ಪತ್ತೆಗಾಗಿ ನಾವು ಐದು ಪೊಲೀಸ್ ತಂಡಗಳನ್ನು ರಚಿಸಿದ್ದೇವೆ ಮತ್ತು ಹುಡುಕಾಟ ನಡೆಸುತ್ತಿದ್ದೇವೆ. ಈ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...