300 ವರ್ಷಗಳ ಬಳಿಕ ದೇವಾಲಯ ಪ್ರವೇಶಿಸಿದ ದಲಿತರು

Date:

ಶತಮಾನಗಳಿಂದ ಅಸ್ತಿತ್ವದಲ್ಲಿದ್ದ ಜಾತಿ ಸಂಕೋಲೆಯನ್ನು ದಲಿತರು ಮುರಿದಿದ್ದು, ಬರೋಬ್ಬರಿ 300 ವರ್ಷಗಳ ಬಳಿಕ ಶಿವನ ದೇವಾಲಯವನ್ನು ಪ್ರವೇಶಿಸಿದ್ದಾರೆ. ಪಶ್ಚಿಮ ಬಂಗಾಳದ ಪುರ್ಬ ಬರ್ಧಮಾನ್ ಜಿಲ್ಲೆಯ ಗಿಧೇಶ್ವರ ಶಿವ ದೇವಾಲಯಕ್ಕೆ 3 ಶತಮಾನಗಳ ಬಳಿಕ ಮೊದಲ ಬಾರಿಗೆ ದಲಿತರು ಪ್ರವೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುರ್ಬ ಬರ್ಧಮಾನ್ ಜಿಲ್ಲೆಯ ಗಿಧಗ್ರಾಮ್ ಗ್ರಾಮದಲ್ಲಿ ಗಿಧೇಶ್ವರ ಶಿವ ದೇವಾಲಯವಿದೆ. ಆದರೆ, 300 ವರ್ಷಗಳಿಂದ ದೇವಾಲಯಕ್ಕೆ ದಲಿತರಿಗೆ ಪ್ರವೇಶವಿರಲಿಲ್ಲ. ಗ್ರಾಮದಲ್ಲಿ ಸುಮಾರು 130 ದಲಿತ ‘ದಾಸ್‌’ ಸಮುದಾಯದ ಕುಟುಂಬಗಳಿದ್ದು, ಅವರ ಐದು ಮಂದಿ ಪ್ರತಿನಿಧಿಗಳು ಬುಧವಾರ ದೇವಾಲಯವನ್ನು ಪ್ರವೇಶಿಸಿದ್ದಾರೆ.

ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷ ದೇವಾಲಯದ ಮೆಟ್ಟಿಲುಗಳನ್ನು ಹತ್ತಿ, ದೇವಾಲಯವನ್ನು ಪ್ರವೇಶಿಸಿ, ಶಿವಲಿಂಗದ ಮೇಲೆ ಹಾಲು ಮತ್ತು ನೀರನ್ನು ಸುರಿದು ಅಭಿಷೇಕ ಮಾಡಿದ್ದಾರೆ. ಈ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲು ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸರನ್ನು ನಿಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 300 ವರ್ಷಗಳ ಹಿಂದೆ ಸ್ಥಾಪಿತವಾದ ಗಿಧೇಶ್ವರ ಶಿವ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಗ್ರಾಮದಲ್ಲಿರುವ ‘ದಾಸ’ ಉಪನಾಮಗಳನ್ನು ಹೊಂದಿರುವ ಚಮ್ಮಾರಿಕೆ ಮತ್ತು ನೇಕಾರರಿಕೆ ಕೆಲಸ ಮಾಡುವ ದಲಿತ ಕುಟುಂಬಗಳು ದೇವಾಲಯದಲ್ಲಿ ಪೂಜೆ ಸಲ್ಲಿಸುವ ತಮ್ಮ ಮೂಲಭೂತ ಹಕ್ಕಿಗಾಗಿ ಹೋರಟ ನಡೆಸುತ್ತಿದ್ದರು.

ಈ ವರದಿ ಓದಿದ್ದೀರಾ?: ತುಳುನಾಡ ಸಂಸ್ಕೃತಿಯಂತೆ ‘ದೈವ’ ಆಗಬೇಕಾಗಿದ್ದ ಸೌಜನ್ಯ ದೇವಿಯಾದಳು; ವೈದಿಕೀಕರಣದ ಹೊಸ ಮಗ್ಗಲು

ಫೆಬ್ರವರಿ 26ರಂದು ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ದಲಿತರು ಯೋಜಿಸಿದ್ದರು. ಆದರೆ, ‘ತಳ ಸಮುದಾಯ’ದವರು ಎಂಬ ಕಾರಣಕ್ಕೆ ಅವರನ್ನು ದೇವಾಲಯದ ಆವರಣದಿಂದ ಓಡಿಸಲಾಗಿತ್ತು. ಮಾತ್ರವಲ್ಲದೆ, ಬೆದರಿಕೆಯನ್ನೂ ಹಾಕಲಾಗಿತ್ತು.

ಇದೀಗ, ಆಡಳಿತ ಮತ್ತು ಪೊಲೀಸರ ‘ಸಕ್ರಿಯ ಹಸ್ತಕ್ಷೇಪ ಮತ್ತು ಸಹಕಾರ’ದಿಂದ ದೇವಾಲಯ ಪ್ರವೇಶಿಸಿದ್ದಾರೆ. ಶಿವನ ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ. “ದೇವಾಲಯದಲ್ಲಿ ಪೂಜೆ ಸಲ್ಲಿಸುವ ಹಕ್ಕು ನಮಗೆ ದೊರೆತಿರುವುದಕ್ಕೆ ನಾವು ಸಂತೋಷಗೊಂಡಿದ್ದೇವೆ. ಎಲ್ಲರ ಯೋಗಕ್ಷೇಮಕ್ಕಾಗಿ ನಾನು ದೇವರನ್ನು ಪ್ರಾರ್ಥಿಸಿದೆ” ಎಂದು ದೇವಾಲಯದ ಪ್ರವೇಶಿಸಿದ ಗ್ರಾಮದ ದಲಿತ ಮುಖಂಡ ಸಂತೋಷ್ ದಾಸ್ ಹೇಳಿದರು.

“ನಾವು ಈ ಹಿಂದೆಯೇ ಧ್ವನಿ ಎತ್ತಬೇಕಿತ್ತು. ಆಡಳಿತಾತ್ಮಕ ಒತ್ತಡದಿಂದಾಗಿ ದಲಿತರು ದೇವಾಲಯ ಪ್ರವೇಶಕ್ಕೆ ಗ್ರಾಮದ ಮುಖ್ಯಸ್ಥರು ಒಪ್ಪಿಕೊಂಡಿದ್ದಾರೆ. ಪೊಲೀಸ್ ನಿಯೋಜನೆಯನ್ನು ತೆಗೆದುಹಾಕಿದ ನಂತರವೂ ದೇವಾಲಯದ ಬಾಗಿಲುಗಳು ನಮಗಾಗಿ ತೆರೆದಿರುತ್ತವೆಯೇ ಎಂಬುದನ್ನು ಕಾದು ನೋಡಬೇಕು” ಎಂದಿದ್ದಾರೆ..

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...