ದಾವಣಗೆರೆ | ದರಏರಿಕೆಯ ಮೂಲಕ ರೈಲ್ವೇ ಖಾಸಗೀಕರಣ ಪರ ಮೋದಿ: ಕಾರ್ಮಿಕ ಮುಖಂಡ ಮಂಜುನಾಥ ಕೈದಾಳೆ

Date:

“ಕೇಂದ್ರ ಸರ್ಕಾರ ಜನವಿರೋಧಿಯಾಗಿದ್ದು ಬಂಡವಾಳಶಾಹಿಗಳ ಪರ ನಿಂತಿದ್ದು ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸಿ ಮಾರಾಟ ಮಾಡುತ್ತಿದ್ದಾರೆ. ಇದರ ಅಂಗವಾಗಿ ರೈಲ್ವೆಯನ್ನು ಕೂಡ ದರ ಏರಿಕೆಯ ಮೂಲಕ ಖಾಸಗಿಯವರಿಗೆ ಕೊಡಲು ಹೊರಟಿದ್ದಾರೆ” ಎಂದು ದಾವಣಗೆರೆಯ ಎಸ್ ಯುಸಿಐ, ಕಮ್ಯುನಿಸ್ಟ್ ಪಕ್ಷದ ಮುಖಂಡ ಮಂಜುನಾಥ್ ಕೈದಾಳೆ ಆರೋಪಿಸಿದರು.

1003387654

ಕೇಂದ್ರ ಸರ್ಕಾರದ ರೈಲ್ವೆ ಪ್ರಯಾಣದ ದರವನ್ನು ಏರಿಸಿರುವ ನಿರ್ಣಯವನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ, ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ದಾವಣಗೆರೆಯ ರೈಲ್ವೆ ನಿಲ್ದಾಣದ ಮುಂಭಾಗದಿಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು
“ನಾವು ಸರ್ಕಾರವನ್ನು ಖಾಸಗೀಕರಣವನ್ನು 1947ರ ಸ್ವಾತಂತ್ರ್ಯದ ಸಮಯದಲ್ಲಿಯೇ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸುತ್ತೇವೆ. ಅಂದೇ ಅಂಬಾನಿ, ಅದಾನಿ, ಬಜಾಜ್, ಟಾಟಾ, ಗೋಯಂಕ ಇತರರಿಗೆ ರೈಲ್ವೆ ಸೇರಿ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸಲು ಹೇಳಬಹುದಿತ್ತು. ಇಂಟರ್ನೆಟ್, ಮೊಬೈಲ್, ರಸ್ತೆ, ಸಾರಿಗೆ ರೈಲ್ವೆ ಸೇರಿ ಮೂಲಭೂತ ಸೌಕರ್ಯಗಳನ್ನು ಕೊಡಿ ಎಂದು ನೀವು ಯಾಕೆ ಹೇಳಲಿಲ್ಲ?” ಎಂದು ಪ್ರಶ್ನಿಸಿದರು.

“ಅಂದು ಇವರ ಹತ್ತಿರ ಲಕ್ಷಾಂತರ ಕೋಟಿ ಇರಲಿಲ್ಲ, ಇಂದು ಕಾಂಗ್ರೆಸ್, ಬಿಜೆಪಿ, ಜನತಾದಳ ಸೇರಿದಂತೆ ಎಲ್ಲಾ ಪಕ್ಷದ ಸರ್ಕಾರದ ಯೋಜನೆಗಳ ದುರ್ಬಳಕೆಯಿಂದ ಲಕ್ಷಾಂತರ ಕೋಟಿ ಗಳಿಸಿ ಇಂದು ಸಾರ್ವಜನಿಕ ವಲಯಗಳನ್ನು ಕಬಳಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಅದನ್ನು ಮತ್ತಷ್ಟು ದುರ್ಬಳಕೆ ಮಾಡಿಕೊಂಡು ಹಣ ಗಳಿಸುವ ಸಲುವಾಗಿ ರೈಲ್ವೆ, ರಸ್ತೆ, ಸಾರಿಗೆ, ವಿಮಾನ, ಕೈಗಾರಿಕೆಗಳು ಎಲ್ಲಾ ಸೇರಿದಂತೆ ರೈತರನ್ನು, ಕಾರ್ಮಿಕರು, ಜನಸಾಮಾನ್ಯರನ್ನು ಶೋಷಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.‌

“ಸಾರ್ವಜನಿಕ ಉದ್ದಿಮೆಗಳೆಂದರೆ ಲಾಭವಿಲ್ಲ, ನಷ್ಟವೂ ಇಲ್ಲಾ ಎನ್ನುವಂತಹ ಆಧಾರದ ಮೇಲೆ ಅಂದು ಸಾರ್ವಜನಿಕ ವಲಯದ ಉದ್ಯಮಗಳನ್ನು ಸರ್ಕಾರ ಪ್ರಾರಂಭಿಸಿದೆ. ಇದು ಜನಸಾಮಾನ್ಯರ ಸೇವೆಗಷ್ಟೇ ಮೀಸಲು, ಇದರಲ್ಲಿ ಲಾಭಗಳಿಸುವ ಉದ್ದೇಶವಿರಲಿಲ್ಲ. ಆದರೆ ಇಂದು ಕೇವಲ ಲಾಭ ಗಳಿಸುವ ಉದ್ದೇಶದಿಂದ ವ್ಯವಹಾರಗಳನ್ನಾಗಿ ರೂಪಿಸಿ ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಇದು ಬೆಲೆ ಏರಿಕೆಗೆ ಕಾರಣವಾಗುತ್ತಿದೆ.‌ ಇದನ್ನು ನಾವು ಜನಸಾಮಾನ್ಯರು ಪ್ರಶ್ನಿಸಿ, ಖಂಡಿಸಬೇಕಿದೆ, ಹೋರಾಟ ನಡೆಸಬೇಕಿದೆ” ಎಂದು ಆಗ್ರಹಿಸಿದರು.

“ಇಂದು ರೈಲ್ವೆ ದರ ಏರಿಕೆ ಮಾಡಿದ್ದೀರಿ. ಸಾರ್ವಜನಿಕರ ಹಣದಿಂದ ಕಟ್ಟಿರುವಂತಹ ರೈಲ್ವೆ ಇಲಾಖೆಯನ್ನು ನೀವು ಖಾಸಗಿಯವರಿಗೆ ಹಂತ ಹಂತವಾಗಿ ಮಾರಾಟ ಮಾಡಲು ಖಾಸಗೀಕರಣಗೊಳಿಸಲು ಹೊರಟಿದ್ದೀರಿ. ಖಾಸಗೀಕರಣಗೊಳಿಸುವ ಮೊದಲು ಜನಸಾಮಾನ್ಯರನ್ನು ನೀವು ಕೇಳಬೇಕಲ್ಲವೇ. ಜನಸಾಮಾನ್ಯರೊಂದಿಗೆ ಚರ್ಚಿಸದೇ ಖಾಸಗೀಕರಣ ಮಾಡಲು ಏಕೆ ಹೊರಟಿದ್ದೀರಿ? ಎಂದು ಪ್ರಶ್ನಿಸಿದರು.

1003387655

“ಚುನಾವಣೆಗೆ ಮುಂಚೆ ನೀವು ನಿಮ್ಮ ಭರವಸೆಗಳಲ್ಲಿ ಉದ್ದಿಮೆಗಳನ್ನು ನಾನು ಖಾಸಗೀಕರಣ ಮಾಡುತ್ತೇನೆ ಎಂದು ತಿಳಿಸಬೇಕಿತ್ತಲ್ಲವೇ? ಹಾಗೆ ಏಕೆ ಮಾಡಲಿಲ್ಲ. ಖಾಸಗೀಕರಣ ಮಾಡುತ್ತೇವೆ ಎಂದು ಹೊರಟಿದ್ದರೆ ಈ ದೇಶದ ಮತದಾರರು ನಿಮ್ಮನ್ನು ಅಧಿಕಾರದಿಂದ ದೂರ ಇಡುತ್ತಿದ್ದರು” ಎಂದು ವ್ಯಂಗ್ಯವಾಡಿದರು.

ಎಐಕೆಕೆಎಂಎಸ್ ಮುಖಂಡ ಮಂಜುನಾಥ್ ಕುಕ್ಕುವಾಡ ಮಾತನಾಡಿ “ಕೇಂದ್ರ ಸರ್ಕಾರ ರೈಲ್ವೆ ಸೇರಿದಂತೆ ಇಲಾಖೆಗಳನ್ನು ಖಾಸಗೀಕರಣ ಮಾಡಿ ಬೆಲೆ ಏರಿಕೆ ಮಾಡುತ್ತಾ ಖಾಸಗೀಕರಣ ಮಾಡಲು ಹೊರಟಿದೆ. ಇದರ ವಿರುದ್ಧ ನಾಗರಿಕರು ಸಂಘಟನೆಗಳು ಎಚ್ಚೆತ್ತುಕೊಂಡು ಪ್ರತಿಭಟಿಸಬೇಕು. ಇಲ್ಲವಾದಲ್ಲಿ ಬೆಲೆ ಏರಿಕೆ, ಶೋಷಣೆಗಳಿಂದ ಜನಸಾಮಾನ್ಯರು, ಕಾರ್ಮಿಕರು, ರೈತರು ಪರಿತಪಿಸಬೇಕಾಗುತ್ತದೆ. ಕೂಡಲೇ ಎಚ್ಚೆತ್ತುಕೊಂಡು ಬೆಲೆ ಏರಿಕೆ ಮತ್ತು ಖಾಸಗಿಕರಣ, ಬಂಡವಾಳಶಾಹಿ ನಿಲುವುಗಳನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟವನ್ನು ರಾಷ್ಟ್ರಾದ್ಯಂತ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದಿಂದ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಗರವನ್ನು ವಿದ್ಯಾಕಾಶಿ ಮಾಡಿದ ಜಾತ್ಯತೀತ ನಾಯಕ ಶಾಮನೂರು ಶಿವಶಂಕರಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ (SUCI) ಪಕ್ಷದ ರಾಜ್ಯ ಸೇಕ್ರೆಟ್ರಿಯೇಟ್‌ ಸದಸ್ಯರು ಡಾ ಟಿ ಎಸ್ ಸುನಿತ್ ಕುಮಾ‌ರ್, ಟಿ ವಿ ಎಸ್ ರಾಜು, ತಿಪ್ಪೇಸ್ವಾಮಿ, ಮಧು ತೊಗಲೇರಿ, ಭಾರತಿ, ಪರಶುರಾಮ್, ಅನಿಲ್, ಶಿವಾಜಿ ರಾವ್, ನಾಗಸ್ಮಿತಾ, ಹಿರೇಮರ್, ರಾಘವೇಂದ್ರ, ರಾಜು ಟಿ, ಕವಿತ, ಬೀರಲಿಂಗಪ್ಪ, ಯತೀಶ್‌, ಉಪಸ್ಥಿತರಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...