ದಾವಣಗೆರೆ | ಸರ್ದಾರ್ ವಲ್ಲಭಬಾಯ್ ಪಟೇಲ್ ಮಹಾನ್ ದೇಶಭಕ್ತ: ಚಿತ್ರದುರ್ಗ ಸಂಸದ ಕಾರಜೋಳ

Date:

ಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ” ಎಂದು ದಾವಣಗೆರೆ ನಗರದ ಯುಬಿಡಿಟಿ ಕಾಲೇಜು ಆವರಣದ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಸಂಸದ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ದಾವಣಗೆರೆ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯ್ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಏಕತಾ ನಡಿಗೆ ಪಾದಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಭಾರತದ ಏಕೀಕರಣಕ್ಕೆ ಕಾರಣವಾದ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನಾಚರಣೆ ಪ್ರಯುಕ್ತ ದೇಶಾದ್ಯಂತ ಪಾದಯಾತ್ರೆಯನ್ನು ಆಯೋಜಿಸಲಾಗಿದೆ. ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಪಾದಯಾತ್ರೆ ದೇಶಾದ್ಯಂತ ಆಯೋಜಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 2047ಕ್ಕೆ ವಿಕಸಿತ ಭಾರತ ಕಟ್ಟುವ ಪರಿಣಾಮವಾಗಿ ದೇಶದ ಯುವಕರನ್ನು ದೇಶದ ಪ್ರಗತಿಯೊಂದಿಗೆ ದೇಶದ ಗೌರವದೊಂದಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಪಾದಯಾತ್ರೆ ಆಯೋಜಿಸಲಾಗಿದೆ. ಭಾರತ ದೇಶವು ವಿಶ್ವದ ಹಿರಿಯಣ್ಣನಾಗುವ ನಿಟ್ಟಿನಲ್ಲಿ ಯುವಕರು ಶ್ರಮಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

“ಅಕ್ಟೋಬರ್ 6ರಿಂದ ದೇಶದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ನಾನು ಭಾರತದ ಸೇವಕ ಎನ್ನುವ ಮನೋಭಾವದೊಂದಿಗೆ ವಿದ್ಯಾರ್ಥಿಗಳು ಎಂಸಿಸಿ, ಎನ್ಎಸ್ಎಸ್, ನಿವೃತ್ತ ಸೇನಾಧಿಕಾರಿಗಳು ಸೇರಿದಂತೆ ಎಲ್ಲಾ ಸ್ವಯಂಸೇವಕರು ಈ ಏಕತಾ ನಡಿಗೆಯಲ್ಲಿ ಸುಮಾರು 6 ರಿಂದ 8 ಕಿ.ಮೀ ಉದ್ದದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ” ಎಂದರು.

“ಸ್ವಾತಂತ್ರದ ನಂತರ ಹರಿದು ಹಂಚಿ ಹೋಗಿದ್ದ 565 ವಿವಿಧ ರಾಜರ ಸಂಸ್ಥಾನಗಳನ್ನು ಒಗ್ಗೂಡಿಸಿ ಅವರ ಮನವೊಲಿಸುವ ಮೂಲಕ, ಅಲ್ಲದೇ ಮೊಂಡುತನ ಮಾಡುವರನ್ನು ಬಗ್ಗು ಬಡಿದು ವಿಲೀನ ಮಾಡಿ ಭಾರತವನ್ನು ಏಕೀಕರಣ ರಾಷ್ಟ್ರವನ್ನಾಗಿ ಮಾಡುವಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪಾತ್ರ ಮಹತ್ತರವಾದದ್ದು” ಎಂದು ಸ್ಮರಿಸಿದರು.

“ಭಾರತದಲ್ಲಿ ಸರ್ದಾರ್ ವಲ್ಲಬಾಯ್ ಪಟೇಲರು ಹಂಚಿ ಹೋಗಿದ್ದ ರಾಜ್ಯಗಳನ್ನು ಒಗ್ಗೂಡಿಸುವ ಮೂಲಕ ಭಾರತ ರಾಷ್ಟ್ರವನ್ನು ನಿರ್ಮಿಸಿದ ರೀತಿಯಲ್ಲಿ ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕಾಗಿದೆ. ಯುವಕರು ದೇಶದ ಘನತೆ, ಗೌರವ ಮತ್ತು ಐಕ್ಯತೆಗಳನ್ನು ಎತ್ತಿ ಹಿಡಿಯುವ ಮೂಲಕ ವಿಶ್ವದ ಹಿರಿಯಣ್ಣನನ್ನಾಗಿ ಭಾರತವನ್ನು ಮಾಡಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಂಗಾಯಣದ ಕಲಾವಿದರಿಂದ ‘ಅಮೀರಬಾಯಿ ಕರ್ನಾಟಕಿ’ ಕೃತಿ ಪ್ರೇರಿತ ‘ಪ್ರತಿಗಂಧರ್ವ’ ನಾಟಕ

ಕಾರ್ಯಕ್ರಮದಲ್ಲಿ ಡಾ.ಬಿ. ರಾಜಪ್ಪ, ರಾಜ್ಯ ಸರ್ಕಾರದ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿಯ ಜಿಲ್ಲಾಧ್ಯಕ್ಷ ಎನ್.ರಾಜಶೇಖರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಎಂ.ಬಸವರಾಜ್ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...