ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

Date:

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ ಉಂಟು ಮಾಡಿಕೊಳ್ಳುತ್ತಿದ್ದೇವೆ. ಇದನ್ನು ತಡೆಗಟ್ಟಲು ಗಾಂಧೀಜಿಯ ದಾರಿಯಲ್ಲಿ ಸಾಗಬೇಕಾಗಿದೆʼʼ ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅಭಿಪ್ರಾಯಪಟ್ಟರು.

ದಾವಣಗೆರೆಯಲ್ಲಿ ಶ್ರೀರಾಮನಗರದ ಗಾಂಧೀ ಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ  ಆಯೊಜಿಸಿದ್ದ  ʼʼರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್  ಶಾಸ್ತ್ರೀʼʼ ಯವರ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ʼʼದೇವನೊಬ್ಬ ನಾಮ ಹಲವು ಎಂದು ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿಗಳು ತಿಳಿಸಿದ್ದರು. ಗಾಂಧೀಜಿಯವರ ಯಶಸ್ಸು ಏನೆಂದರೆ ಬೇರೆಯವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ. ನಂತರ ನೀವು ಮಾಡುವಂತಹ ಕೆಲಸಗಳನ್ನು ನೋಡಿ ನಗುತ್ತಾರೆ. ನಂತರ  ನಿಮ್ಮ ವಿರುದ್ಧ ಹೋರಾಟ ಮಾಡುತ್ತಾರೆ. ಕೊನೆಗೆ ನಾವೇ ಗೆಲ್ಲುತ್ತೇವೆ. ಆಗ ನಾವು ಎದೆ ಗುಂದಬಾರದು ಎಂಬುದು ಗಾಂಧಿಯವರ ನಂಬಿಕೆಯಾಗಿತ್ತು. ನಾವು ಮಹಿಳೆಯರಿಗೆ ದೊಡ್ಡ ಗೌರವವನ್ನು ಕೊಡುತ್ತೇವೆ, ಕಾರಣ ತಾಯಿ ಹೃದಯ ತ್ಯಾಗಮಹಿಯಾಗಿದ್ದಾಳೆ. ಹೀಗಾಗಿ ನಾವು ಭಾರತಾಂಬೆ ಮಕ್ಕಳುʼʼ  ಎಂದು ತಿಳಿಯಬೇಕಾಗಿದೆ ಎಂದರು.

 ʼʼಪ್ರಪಂಚದ ಹಲವು ದೇಶಗಳಲ್ಲಿ ಗಾಂಧಿ ಪ್ರತಿಮೆ ಇದೆ. ಕಾರಣ ಅವರು ಕಲಿಸಿದಂತಹ ಸತ್ಯ, ಅಹಿಂಸೆ, ಸರಳತೆ ಇದು ನಮಗೆಲ್ಲರಿಗೂ ನೀಡಿದಂತಹ ಶಾಂತಿ ಸಂದೇಶ ನಮಗೆ ಆದರ್ಶ ಮಾರ್ಗವಾಗಿದೆʼʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚರಕವನ್ನು ನೇಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ʼʼಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರು ನಮ್ಮೆಲ್ಲರಿಗೂ ಆದರ್ಶಪ್ರಾಯರು, ಅವರ  ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಕಾಣಲು ಸಾಧ್ಯ. ಸಮಾಜದಲ್ಲಿ ಬದಲಾವಣೆ ತರಲು ನಮ್ಮಿಂದಲೇ ಬದಲಾವಣೆ ಪ್ರಾರಂಭವಾಗಬೇಕು ಎಂದು ಕರೆ ನೀಡಿದವರು ಗಾಂಧೀಜಿ. ಅವರು ತಮ್ಮ ಜೀವನದುದ್ದಕ್ಕೂ ನಡೆ ನುಡಿ, ಆಚಾರ ವಿಚಾರ ಸಮಾನತೆ ಯನ್ನು ಅಳವಡಿಸಿಕೊಂಡಿದ್ದರು. ಅವರ ಸರಳತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು. ಸರ್ವೋದಯ ಮತ್ತು ಗ್ರಾಮ ಸ್ವರಾಜ್ ಅಭಿವೃದ್ಧಿಯನ್ನು ನಾವು ಅಳವಡಿಸಿಕೊಳ್ಳುತ್ತಿದ್ದೇವೆ, ರೈತರು ನಮ್ಮ ದೇಶದ ಬೆನ್ನಲುಬು , ನಮ್ಮ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಭಾರತ ಅಭಿವೃದ್ಧಿ ಹೊಂದುತ್ತದೆ  ಎಂದು ತಿಳಿಸಿದರು. ಹಳ್ಳಿಗಳು ಅಭಿವೃದ್ಧಿ ಹೊಂದಲು ಗ್ರಾಮರಾಜ್ಯವಾಗಬೇಕೆಂದು ಗಾಂಧೀಜಿಯವರು ಪ್ರತಿಪಾದಿಸಿದ್ದರುʼʼ ಎಂದು ತಿಳಿಸಿದರು.

52dcda22c48442b794160ca050d1f4ab
ಚರಕವನ್ನು ನೇಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ʼʼಸ್ವಾತಂತ್ರ್ಯ ನಂತರದಲ್ಲಿ ದೇಶ ಆಹಾರದ ಕೊರತೆ ಎದುರಿಸುತ್ತಿತ್ತು, ಇದಕ್ಕಾಗಿ  ವಿದೇಶಗಳಿಂದ ಆಹಾರಗಳನ್ನು ಆಮದು ಮಾಡಿಕೊಳ್ಳುತ್ತಿದ್ದೆವು. ಇದನ್ನು ಮನಗಂಡ ಶಾಸ್ತ್ರೀಜಿ ದೇಶದಲ್ಲಿ ಹಸಿರು ಕ್ರಾಂತಿಯನ್ನು ನಡೆಸಿದರು. ಶಾಸ್ತ್ರೀಜಿ ಜೈ ಜವಾನ್ ಜೈ ಕಿಸಾನ್ ಎಂಬ ಕರೆ ನೀಡಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಕ್ರಮ ಕೈಗೊಂಡರು. ಇವರು ಪಡೆಯುತ್ತಿದ್ದ ನಲವತ್ತು ರೂ.ಗಳ ಸಂಬಳದಲ್ಲಿ ಹತ್ತು ರೂಪಾಯಿಗಳನ್ನು ಉಳಿಸಿ ಬಡವರಿಗೆ ದಾನ ಮಾಡುತ್ತಿದ್ದರು. ಅಂತಹ ಸರಳ ವ್ಯಕ್ತಿತ್ವ ಅವರದ್ದಾಗಿತ್ತು. ತಮ್ಮ ಅಧಿಕಾರವನ್ನು ಸಮಾಜದ ಅಭಿವೃದ್ಧಿಗೆ ಬಳಸುತ್ತಿದ್ದರು. ಆಹಾರ ಸಮಸ್ಯೆ ನೀಗಲು ಒಂದು ಹೊತ್ತಿನ ಊಟವನ್ನು ತ್ಯಾಗ ಮಾಡುವಂತೆ ತಿಳಿಸಿದ ಮ‌ಹಾನ್ ಪ್ರಾಮಾಣಿಕರು ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರಾಗಿದ್ದರುʼʼ ಎಂದು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಮಾತನಾಡಿ ʼʼವಿದ್ಯಾರ್ಥಿಗಳು ಗಾಂಧೀಜಿಯವರ ಸತ್ಯದೊಂದಿಗೆ ನನ್ನ ಪ್ರಯೋಗಗಳು ಎಂಬ ಆತ್ಮಕಥನವನ್ನು ಕಡ್ಡಾಯವಾಗಿ ಓದಬೇಕು,ಇದರಿಂದ ವಿದ್ಯಾರ್ಥಿಗಳ ಜೀವನವೇ ಬದಲಾಗಲಿದ್ದು ಆತ್ಮಸ್ಥೈರ್ಯ ಬರಲಿದೆʼʼ ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸಲು ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

ಧೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ , ಅಪರ ಜಿಲ್ಲಾಧಿಕಾರಿ ಎಸ್ .ಶಿವಕುಮಾರ್, ಮುಖಂಡರುಗಳಾದ ರವಿಕುಮಾರ್, ಅವರೆಗೆರೆ ರುದ್ರಮುನಿ, ಎ.ನಾಗರಾಜ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ,ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲುಕು ಮಟ್ಟದ ಅಧಿಕಾರಿಗಳು ,  ವಿದ್ಯಾರ್ಥಿನಿ ಐಶ್ವರ್ಯ ಮತ್ತು ವಿಶಾಲ್ ಗಾಂಧಿ ಸೇರಿದಂತೆ ಅಜಯ್‌ ನಾರಾಯಣ್, ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...