ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ: ಪಾಕ್‌ನಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತ!

Date:

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಹಂತಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ವರದಿಗಳು ಹೊರಬಿದ್ದಿವೆ. ಆದರೆ ಅವರ ಸಹಾಯಕರು ಹಂಚಿಕೊಂಡ ಮಾಹಿತಿಯ ಪ್ರಕಾರ ವಿಷ ಪ್ರಾಶನದ ಬಗ್ಗೆ ಯಾವುದೇ ದೃಢೀಕರಣವಿಲ್ಲ.

ದಾವೂದ್ ಇಬ್ರಾಹಿಂ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಯ ಒಂದು ಮಹಡಿಯಲ್ಲಿರುವ ಏಕೈಕ ರೋಗಿ ದಾವೂದ್ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶವಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಟುಂಬ ಸದಸ್ಯರು (ದಾವೂದ್ ಸೋದರಳಿಯರು), ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಚೆನ್ನಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಆದಾಗ್ಯೂ, ಅವರು ವಿಷಪ್ರಾಶನ ವರದಿಗಳನ್ನು ನಿರಾಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

ಮುಂಬೈ ಪೊಲೀಸರು ಭೂಗತ ಪಾತಕಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಶನಿವಾರ ಸಂಜೆಯಿಂದ ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆಗಳು ಸ್ಥಗಿತಗೊಂಡಿವೆ ಮತ್ತು ಯುಟ್ಯೂಬ್, ಫೇಸ್‌ಬುಕ್ ಅಥವಾ ಟ್ವಿಟರ್‌ನಂತಹ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಪಾಕಿಸ್ತಾನದ ಬಳಕೆದಾರರಿಗೆ ಲಭ್ಯವಿಲ್ಲ.

ದಾವೂದ್ ಇಬ್ರಾಹಿಂನ ಸಹೋದರಿ ಹಸೀನಾ ಪಾರ್ಕರ್‌ನ ಮಗ ಜನವರಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಿದ ಹೇಳಿಕೆಯಂತೆ ಭೂಗತ ಪಾತಕಿ ಎರಡನೇ ವಿವಾಹವಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾನೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಆರೋಪ ಪಟ್ಟಿಯ ಪ್ರಕಾರ ದಾವೂದ್ ಇಬ್ರಾಹಿಂ ಸಹಚರರು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣವನ್ನು ನಿಯಂತ್ರಿಸುತ್ತಿದ್ದಾರೆ.

1993ರ ಮಾರ್ಚ್‌ 12ರಂದು ಮುಂಬೈನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ 257 ಮಂದಿ ಮೃತಪಟ್ಟಿದ್ದರು. ಈ ಸ್ಫೋಟದ ಪ್ರಮುಖ ರೂವಾರಿ ದಾವೂದ್ ಇಬ್ರಾಹಿಂ. ಸ್ಫೋಟದ ನಂತರ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.

ಇಂಟರ್‌ಪೋಲ್ ಈತನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿಸಿದ್ದು, ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಡೆದಿರುವ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ನೂರಾರು ಅಪರಾಧಗಳಲ್ಲಿ ಈತ ಪ್ರಮುಖ ಆರೋಪಿಯಾಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...