ಹಲ್ದ್‌ವಾನಿ ಹಿಂಸಾಚಾರ | ಕೇಂದ್ರದಿಂದ ಹೆಚ್ಚುವರಿ ಪಡೆಗಳನ್ನು ಕೋರಿದ ಉತ್ತರಾಖಂಡ

Date:

ಹಲ್ದ್‌ವಾನಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪಡೆಗಳನ್ನು ಕಳಿಸುವಂತೆ ಉತ್ತರಾಖಂಡ ಸರ್ಕಾರ ಕೇಂದ್ರ ಸರ್ಕಾರವನ್ನು ಕೋರಿದೆ. ಸದ್ಯ ಗಲಭೆ ತಹಬದಿಗೆ ಬಂದಿದ್ದು, ಅಂಗಡಿ ಮುಂಗಟ್ಟುಗಳನ್ನು ತೆರಯಲಾಗಿದೆ. ಇಂಟರ್‌ನೆಟ್‌ ಸಂಪರ್ಕ ಪುನರ್‌ಸ್ಥಾಪನೆಯಾಗಿದೆ, ಜನಜೀವನ ಕೂಡ ಸಹಜಸ್ಥಿತಿಗೆ ಮರಳುತ್ತಿದೆ.

ಈ ನಡುವೆ ಹಿಂಸಾಚಾರದ ರೂವಾರಿ ಎಂದು ಆರೋಪಿಸಲಾಗಿರುವ ಅಬ್ದುಲ್ ಮಾಲಿಕ್ ಎಂಬಾತನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಹಲ್ದ್‌ವಾನಿಯ ಭಾನುಲೋಪುರ ಪ್ರದೇಶದಲ್ಲಿ ಅತಿಕ್ರಮಣ ಆಸ್ತಿ ತೆರವು ಕಾರ್ಯಾಚರಣೆಯಲ್ಲಿ ಮಸೀದಿ ಮತ್ತು ಮದರಸಾ ಕೆಡವಲು ಸ್ಥಳೀಯ ಆಡಳಿತ ಮುಂದಾದಾಗ ಹಿಂಸಾಚಾರ ಭುಗಿಲೆದ್ದು ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ಆದೇಶದ ಪ್ರತಿ ತೋರಿಸದೆ ಜಿಲ್ಲಾಡಳಿತ ತೆರವು ಕಾರ್ಯಾಚರಣೆಗೆ ಮುಂದಾದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಅತಿಕ್ರಮಣ ತೆರವು ಮಾಡಲು ಇನ್ನಷ್ಟು ಕಾಲಾವಕಾಶ ಕೊಡಬೇಕು ಎನ್ನುವ ಸ್ಥಳೀಯರ ಮನವಿಗೆ ಆಡಳಿತ ಒಪ್ಪಿರಲಿಲ್ಲ. ಆಡಳಿತ ಒತ್ತಡಪೂರ್ವಕ ತೆರವು ಕಾರ್ಯಾಚರಣೆ ನಡೆಸಿದಾಗ ನಿವಾಸಿಗಳು ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟಕ್ಕೆ ಪ್ರತಿಯಾಗಿ ಪೊಲೀಸರು ಸ್ಥಳದಲ್ಲೇ ಗುಂಡು ಹಾರಿಸಿದ್ದರು. ಸ್ಥಳೀಯ ಸಮುದಾಯ ವಾಹನಗಳಿಗೆ ಬೆಂಕಿ ಹಚ್ಚಿ ಪ್ರತಿಕ್ರಿಯೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ನಾಲ್ಕು ಹೆಚ್ಚುವರಿ ಅರೆಸೇನಾ ತುಕಡಿಗಳನ್ನು ಕಳಿಸುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ಭಾನುಲೋಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತಿಕ್ರಮಣ ನೆಲಸಮ ಮಾಡುವ ಸಂದರ್ಭದಲ್ಲಿ ಉಂಟಾದ ಕಾನೂನು ಸುವ್ಯವಸ್ಥೆಯ ನಿರಂತರ ಅಡಚಣೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ನಿರ್ವಹಿಸಲು ನಾಲ್ಕು ಹೆಚ್ಚುವರಿ ಅರೆಸೇನಾ ತುಕಡಿಗಳನ್ನು ಜಿಲ್ಲೆಗೆ ಕಳಿಸುವಂತೆ ಉತ್ತರಾಖಂಡ ಆಡಳಿತದ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದದ್ದಾರೆ.

ಇದೀಗ ಭಾನುಲೋಪುರದಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ಪೊಲೀಸರು ಕಟ್ಟೆಚ್ಚರ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...