ಕೇರಳಂ ಮಾಡಿದಂತೆ ಆಂಧ್ರವನ್ನು ‘ತೆಲುಗು ನಾಡು’ ಎಂದು ಘೋಷಿಸಿ: ತೆಲುಗು ಕವಿ ಒತ್ತಾಯ

Date:

ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಒಪ್ಪಿಗೆ ನೀಡಿದಂತೆ ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಮರುನಾಮಕರಣ ಮಾಡಬೇಕು ಎಂದು ಖ್ಯಾತ ತೆಲುಗು ವಿದ್ವಾಂಸ ಗರಿಕಾಪತಿ ನರಸಿಂಹ ರಾವ್ ಒತ್ತಾಯಿಸಿದ್ದಾರೆ.

ಅಮಲಪುರಂನಲ್ಲಿ ನಡೆಯುತ್ತಿರುವ ವಿಶ್ವ ತೆಲುಗು ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ತಮಿಳುನಾಡು, ಕೇರಳಂ ಮುಂತಾದ ಹೆಸರುಗಳಲ್ಲಿ ಪ್ರತಿಫಲಿಸುವ ಗುರುತು ಮತ್ತು ಸಾಂಸ್ಕೃತಿಕ ಹೆಮ್ಮೆಯಿಂದ ಪ್ರೇರಿತರಾಗಿ ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಮರುನಾಮಕರಣ ಮಾಡಬೇಕೆಂದು ಕರೆ ನೀಡಿದ್ದಾರೆ. ಈ ಮೂಲಕ ತೆಲುಗು ಭಾಷೆಯ ಶ್ರೀಮಂತ ಪರಂಪರೆಯನ್ನು ಎತ್ತಿ ಹಿಡಿಯಬೇಕು’ ಅವರು ಆಗ್ರಹಿಸಿದ್ದಾರೆ.

‘ಆಂಧ್ರಪ್ರದೇಶ ಎಂಬುದು ತೆಲುಗು ಹೆಸರಲ್ಲ. ಇದು ಹಿಂದಿ ಬೆಂಬಲಿತ ಮಧ್ಯಪ್ರದೇಶ ಮತ್ತು ಅರುಣಾಚಲ ಪ್ರದೇಶದಂತಹ ಉತ್ತರ ಭಾರತದ ರಾಜ್ಯಗಳಿಗೆ ಹೋಲುವಂತಿದೆ. ನಮ್ಮ ರಾಜ್ಯ (ಆಂಧ್ರಪ್ರದೇಶ) ಮತ್ತಷ್ಟು ಸಾಂಸ್ಕೃತಿಕ ಮಹತ್ವ ಹೊಂದಬೇಕಾದರೆ ತಮಿಳುನಾಡಿನಂತೆಯೇ ‘ತೆಲುಗು ನಾಡು’ ಎಂದು ಮರುನಾಮಕರಣ ಮಾಡುವುದು ಅತ್ಯಗತ್ಯ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ

ಹಿರಿಯ ನಟ, ರಾಜಕಾರಣಿ ಎನ್‌.ಟಿ. ರಾಮರಾವ್ ಅವರು ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಘೋಷಿಸುವಂತೆ ಒತ್ತಾಯಿಸಿ ಚಳವಳಿಯನ್ನು ನಡೆಸಿದ್ದರು. ತೆಲುಗು ನಾಡು ಎಂಬುದಕ್ಕೆ ಸರಿಯಾದ ತೆಲುಗು ಉಚ್ಚಾರಣೆ ಇದೆ ಮತ್ತು ಇದು ಈ ರಾಜ್ಯಕ್ಕೆ ಸೂಕ್ತ ಹೆಸರು ಎಂದು ನರಸಿಂಹ ರಾವ್ ಅವರು ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡು ಮತ್ತು ಕೇರಳದ ಜನರು ಭಾಷೆಯ ಬಗ್ಗೆ ಹೊಂದಿರುವಷ್ಟು ಪ್ರೀತಿಯನ್ನು ನಮ್ಮ ರಾಜ್ಯದ ಜನರು ಹೊಂದಿಲ್ಲ. ಭಾಷೆಯ ವಿಷಯವಾಗಿ ರಾಜ್ಯದ ಜನರ ಮನಸ್ಥಿತಿ ಬದಲಾಗಬೇಕು. ಹಾಗೆಯೇ ಭವಿಷ್ಯದ ಪೀಳಿಗೆಗೆ ನಮ್ಮ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವಂತಹ ಕೆಲಸ ಮಾಡಬೇಕು ಎಂದೂ ಅವರು ತಿಳಿಸಿದ್ದಾರೆ.

ಗರಿಕಾಪತಿ ನರಸಿಂಹ ರಾವ್ ಅವರ ಪ್ರಸ್ತಾಪವು ಗುರುತು, ಪರಂಪರೆ, ಭಾಷೆ ಮತ್ತು ಪ್ರಾದೇಶಿಕ ಭಾವನೆಗಳ ಕುರಿತು ರಾಜಕೀಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ವ್ಯಾಪಕ ಚರ್ಚೆ ಹುಟ್ಟುಹಾಕಿದೆ. ‘ತೆಲುಗು ನಾಡು’ ಎಂಬ ಹೆಸರು ತೆಲುಗು ಜನರ ಭಾಷೆ ಮತ್ತು ಸಾಂಸ್ಕೃತಿಕ ಗುರುತನ್ನು ಪ್ರತಿಬಿಂಬಿಸುತ್ತದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಘೋಷಣೆ ಮಾಡಿದ್ದೆ ಆದಲ್ಲಿ ರಾಜಕೀಯ ಮತ್ತು ಆಡಳಿತಾತ್ಮಕ ಪರಿಣಾಮಗಳು ಬೀರಬಹುದು ಎಂದು ವಿಮರ್ಶಕರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...