ಸಕ್ಕರೆ ಉತ್ಪಾದನೆಯಲ್ಲಿ ಕುಸಿತ; ರಫ್ತು ನಿಷೇಧಿಸಲಿರುವ ಕೇಂದ್ರ

Date:

  • ಪ್ರಸ್ತುತ ಭಾರತದಿಂದ 58 ಲಕ್ಷ ಟನ್‌ ಸಕ್ಕರೆ ರಫ್ತು
  • ಸಚಿವರ ಸಭೆಯಲ್ಲಿ ರಫ್ತು ನಿಷೇಧ ನಿರ್ಧಾರ

ದೇಶದಲ್ಲಿ ಸಕ್ಕರೆ ಉತ್ಪಾದನೆ ಕುಸಿದಿರುವ ಕಾರಣದಿಂದ ಸಕ್ಕರೆಯ ರಫ್ತನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಮುಂದಿನ ವರ್ಷದ ಲೋಕಸಭೆ ಚುನಾವಣೆ ವೇಳೆ ಹಣದುಬ್ಬರದಂತಹ ಪರಿಸ್ಥಿತಿ ನಿರ್ಮಾಣವಾಗುವುದನ್ನು ತಡೆಯಲು ಕೇಂದ್ರ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಎಲ್ಲ ಸಚಿವರನ್ನು ಒಳಗೊಂಡ ಸಮಿತಿಯು ಈ ಕುರಿತು ಚರ್ಚೆ ನಡೆಸಿ ಗಿರಣಿಗಳಿಂದ ರವಾನೆಯಾಗುವ ಸಕ್ಕರೆ ರಫ್ತನ್ನು ತಕ್ಷಣದಿಂದ ಅನ್ವಯವಾಗುವಂತೆ ನಿಲ್ಲಿಸಲು ತೀರ್ಮಾನಿಸಿದೆ. ಏಪ್ರಿಲ್ 27ರಂದು ನಡೆದ ಸಚಿವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಕ್ಕರೆ ರಫ್ತು ಕುರಿತ ಚರ್ಚೆ ನಡೆಸಿದ ಸಚಿವರ ಸಮಿತಿ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಭಾಗವಹಿಸಿದ್ದರು. ಸಕ್ಕರೆಯ ರಫ್ತು ನಿಷೇಧದ ಬಗ್ಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದು ಸರ್ಕಾರದ ಮೂಲಗಳು ಹೇಳಿವೆ.

2022-23ನೇ (ಅಕ್ಟೋಬರ್‌-ಸೆಪ್ಟೆಂಬರ್) ಸಾಲಿನ ಭಾರತದ ಸಕ್ಕರೆಯ ಉತ್ಪಾದನೆ 327 ಲಕ್ಷ ಟನ್ ಇದೆ. ಇದು ಹಿಂದಿನ ವರ್ಷ 359 ಲಕ್ಷ ಟನ್‌ ಇತ್ತು. “ಸಕ್ಕರೆ ಪ್ರಮಾಣ ಈಗ 275 ಲಕ್ಷ ಟನ್‌ ಇದೆ. ಇದು ಸದ್ಯದ ದೇಶೀಯ ಬಳಕೆಯ ಬೇಡಿಕೆಯನ್ನಷ್ಟೇ ಪೂರೈಸುತ್ತದೆ. ಆದರೆ, ರಫ್ತು ಮುಂದುವರಿಸಿದ ಪರಿಣಾಮವಾಗಿ, ಈ ವರ್ಷ ರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷ ಮಾರ್ಚ್‌-ಏಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ಸಂದರ್ಭಗಳಲ್ಲಿ ಹಣದುಬ್ಬರದ ಸ್ಥಿತಿ ಉಂಟಾಗದಿರಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಕ್ಕರೆ ಚಿಲ್ಲರೆ ಬೆಲೆ ಶುಕ್ರವಾರ (ಏಪ್ರಿಲ್‌ 28) ಕೆಜಿಗೆ ಭಾರತ ಮಟ್ಟದಲ್ಲಿ ಸರಾಸರಿ ₹42.24 ಇತ್ತು ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ದತ್ತಾಂಶ ಹೇಳಿದೆ.

2022-23ನೇ ಹಣಕಾಸಿನ ವರ್ಷದಲ್ಲಿ (ಏಪ್ರಿಲ್‌-ಮಾರ್ಚ್‌) ಭಾರತದ ಸಕ್ಕರೆಯ ರಫ್ತಿನ ಮೌಲ್ಯ 5,770.64 ದಶಲಕ್ಷ ಅಮೆರಿಕನ್‌ ಡಾಲರ್‌ ಇತ್ತು. ಇದು 2021-22ರಲ್ಲಿ 4,602.65 ಅಮೆರಿಕನ್‌ ಡಾಲರ್‌ ಇತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

2021-22ನೇ ಸಾಲಿನಲ್ಲಿ ಸಕ್ಕರೆಯ ರಫ್ತು ಗರಿಷ್ಠ 110 ಲಕ್ಷ ಟನ್‌ ತಲುಪಿತ್ತು. ಪ್ರಸ್ತುತ ವರ್ಷ ಈವರೆಗೆ 58 ಲಕ್ಷ ಟನ್ ಸಕ್ಕರೆಯು ರಫ್ತಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...