ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಕುಸಿದ ಭಾರತದ ಮಾನ್ಯತೆ, ಹೆಚ್ಚಾಗದ ಕೋಮು ಸಾಮರಸ್ಯ, ಬಡವರಿಗೆ ತಲುಪದ ಯೋಜನೆಗಳು

Date:


ಕಳೆದ
ಹತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಮಾನ್ಯತೆ ಹೆಚ್ಚಾಗಿದೆ. ಭಾರತವನ್ನು ವಿಶ್ವವೇ ತಿರುಗಿ ನೋಡುವಂತಾಗಿದೆ. ಭಾರತ ವಿಶ್ವಗುರುವಾಗಿದೆ… ಎಂದು ಬಿಜೆಪಿ ಬೆಂಬಲಿತರು ಹೇಳುತ್ತಲೇ ಇದ್ದಾರೆ.

ಆದರೆ ಅಂಕಿ ಅಂಶಗಳು, ಸಮೀಕ್ಷೆಗಳು ಬೇರೆಯೇ ಹೇಳುತ್ತಿವೆ. ಮೋದಿ ಆಡಳಿತದಲ್ಲಿ ಭಾರತದ ಮಾನ್ಯತೆ ಕುಸಿದಿದೆ. ಕೋಮು ಸಾಮರಸ್ಯ ತೀರ ಕದಡಿದೆ. ಹಾಗೆಯೆ ಸರ್ಕಾರದ ಕಲ್ಯಾಣ ಯೋಜನೆಗಳು ಶೋಷಿತ ಸಮುದಾಯ ಸೇರಿದಂತೆ ಬಡವರಿಗೆ ತೀರ ಕಡಿಮೆ ಮಟ್ಟದಲ್ಲಿ ತಲುಪಿವೆ.

ಕರ್ನಾಟಕದಲ್ಲಿ ಈ ದಿನ.ಕಾಮ್‌ ಕೈಗೊಂಡ ಅಂತಿಮ ಸಮೀಕ್ಷೆ ಇವೆಲ್ಲವು ಬಹಿರಂಗಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಹೇಳುವ ಹಾಗೆ ಅಭಿವೃದ್ಧಿ ಕೇವಲ ಮಾಧ್ಯಮಗಳಲ್ಲಿ ಮಾತ್ರ ಎಂದು ರಾಜ್ಯದ ಜನತೆ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹೇಳಿಕೊಂಡಿದ್ದಾರೆ. ಸಮೀಕ್ಷೆಯಲ್ಲಿ ಶೋಷಿತ ಸಮುದಾಯಗಳು ಸೇರಿದಂತೆ ಬಡ ವರ್ಗದ ಜನತೆ ದಿನೇ ದಿನೇ ನಮ್ಮ ಕಷ್ಟ ಹೆಚ್ಚುತ್ತಿವೆ. ಯಾವುದೇ ಕೇಂದ್ರ ಸರ್ಕಾರದ ಯೋಜನೆಗಳು ನಮ್ಮನ್ನು ತಲುಪುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ. ಆದರೆ 2014 ರಿಂದ 2024ರವರೆಗೂ ಈ ರೀತಿಯ ಯಾವುದೇ ಪ್ರಗತಿ ಉಂಟಾಗಿಲ್ಲ ಎಂದು ಜನತೆ ಸರ್ಕಾರದಿಂದ ತಮಗಾದ ಅನುಭವವನ್ನು ಈದಿನ ಸಮೀಕ್ಷೆಯಲ್ಲಿ ಹೇಳಿಕೊಂಡಿದ್ದಾರೆ. ದೇಶದ ಭದ್ರತೆಯೊಂದಿಗೆ ವಿವಿಧ ಧರ್ಮ, ಮತಗಳೊಡನೆ ಸಾಮರಸ್ಯತೆ ಹೆಚ್ಚಿಸಬೇಕಾದ ಕೇಂದ್ರ ಸರ್ಕಾರ ತನ್ನ ಬಲಪಂಥೀಯ ಧೋರಣೆಯೊಂದಿಗೆ ವಿವಿಧ ಜಾತಿ, ಧರ್ಮಗಳೊಡನೆ ವಿಷಬೀಜ ಬಿತ್ತಿ ಕೋಮು ಸಾಮರಸ್ಯವನ್ನು ಕಸಿಯುವ ಕೆಲಸ ಮಾಡುತ್ತಿದೆ ಎಂದು ಸಾರ್ವಜನಿಕರು ತಮ್ಮ ಹೃದಯದಲ್ಲಿರುವ ನೋವನ್ನು ಬಿಚ್ಚಿಟ್ಟಿದ್ದಾರೆ. ಇವೆಲ್ಲವೂ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.

ಈ ಸುದ್ದಿ ಓದಿದ್ದೀರಾ? 2024ರ ಚುನಾವಣೆ: ಈದಿನ ಅಂತಿಮ ಸಮೀಕ್ಷೆ

ವಿಶ್ವದಲ್ಲಿ ಕುಸಿದ ಭಾರತದ ಮಾನ್ಯತೆ

ಜಾಗತಿಕ ಮಟ್ಟದಲ್ಲಿ ಭಾರತದ ಮಾನ್ಯತೆ ತೀರ ಗಣನೀಯವಾಗಿ ಕುಸಿದಿದೆ ಎಂದು ಈ ದಿನ ಸಮೀಕ್ಷೆಯಲ್ಲಿ ಕರ್ನಾಟಕದ ಜನತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ನಮ್ಮ ದೇಶಕ್ಕೆ ಕಳಂಕ ತಂದಿದ್ದಾರೆ ಎಂದು ಶೇ.16.25ರಷ್ಟು ಜನರು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವ ರೀತಿಯಲ್ಲಿ ನಮ್ಮ ದೇಶ ಯಾವುದೇ ಶ್ರೇಷ್ಠತೆಯನ್ನು ಗಳಿಸಿಲ್ಲ ಎಂದು ಶೇ. 18.49 ರಷ್ಟು ಮಂದಿ ಹೇಳಿದ್ದಾರೆ. ಶೇ. 19.35 ರಷ್ಟು ಜನತೆ ಈ ವಿಷಯದಲ್ಲಿ ಸರ್ಕಾರದ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

india image

ಬಡವರಿಗೆ ತಲುಪದ ಸಮಾಜ ಕಲ್ಯಾಣ ಯೋಜನೆಗಳು      

ಕೇಂದ್ರ ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳು ಕಳೆದ ಹತ್ತು ವರ್ಷದ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಆಡಳಿತದಲ್ಲಿ ದಲಿತರು, ಅಲ್ಪಸಂಖ್ಯಾತರು, ಒಬಿಸಿ ಒಳಗೊಂಡಂತೆ ಬಡ ವರ್ಗದ ಜನತೆಗೆ ತಲುಪಿಲ್ಲ. ಇವೆಲ್ಲ ಅಂಕಿಅಂಶಗಳು ಈದಿನ ಸಮೀಕ್ಷೆಯಲ್ಲಿ ವ್ಯಕ್ತವಾಗಿವೆ. ಕೇಂದ್ರ ಸರ್ಕಾರದ ಯೋಜನೆ ಕಡಿಮೆಯಾಗಿದೆ ಎಂದು ಶೇ.36.87 ಮಂದಿ ಹೇಳಿದ್ದಾರೆ. ಹಾಗೆಯೇ ಶೇ.22.83 ಮಂದಿ 10 ವರ್ಷದಲ್ಲಿ ಯಾವುದೇ ಪ್ರಗತಿ ಉಂಟಾಗಿಲ್ಲ ಎಂದು ತಿಳಿಸಿದ್ದಾರೆ. ಶೇ.13.72 ರಷ್ಟು ಜನತೆ ತಮ್ಮ ಅಭಿಪ್ರಾಯವನ್ನು ದಾಖಲಿಸಿಲ್ಲ.

ಕೋಮು ಸಾಮರಸ್ಯ ಹಾಳು

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕಳೆದ 10 ರ್ಷಗಳಿಂದ ಕೋಮು ಸಾಮರಸ್ಯ ಹಾಳಾಗುತ್ತಿದೆ. ಅಧಿಕಾರಕ್ಕಾಗಿ ಸರ್ಕಾರವು ಧರ್ಮ ಧರ್ಮಗಳು, ಜಾತಿ ಜಾತಿಗಳ ನಡುವೆ ವಿಷ ಬೀಜ ಭಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದೆ. ಸಾರ್ವಜನಿಕರು ತಮಗಾದ ಅನುಭವ ಮಾತ್ರವಲ್ಲದೆ ತಮ್ಮ ಅಕ್ಕಪಕ್ಕದ ಸ್ಥಳಗಳಲ್ಲಿ ನಡೆದ ಘಟನೆಯ ಬಗ್ಗೆಯೂ ಮೆಲುಕು ಹಾಕಿದ್ದಾರೆ. ಕೋಮು ಸಾಮರಸ್ಯ ಹಾಳಾಗಿದೆ ಎಂದು ಶೇ.26.74 ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಹ ಹೆಚ್ಚಿನ ಪ್ರಗತಿ ಕಂಡುಬಂದಿಲ್ಲ ಎಂದು ಶೇ.22.08 ಮಂದಿ ತಿಳಿಸಿದ್ದಾರೆ. ಶೇ.17.97 ಮಂದಿ ಕೋಮು ಸಾಮರಸ್ಯದ ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಿಲ್ಲ.

Harmony

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...