ಮಾನನಷ್ಟ ಮೊಕದ್ದಮೆ; ದೋಷಾರೋಪಣೆಗೆ ತಡೆ ಕೋರಿ ಹೈಕೋರ್ಟ್‌ಗೆ ರಾಹುಲ್ ಗಾಂಧಿ ಅರ್ಜಿ

Date:

  • ತೀರ್ಪನ್ನು ಮುಂದಿನ ದಿನಗಳಲ್ಲಿ ಕಾನೂನಿಗೆ ಅನುಸಾರವಾಗಿ ಹೈಕೋರ್ಟ್ನಲ್ಲಿ ಪ್ರಶ್ನೆ ಎಂದ ಸಂಘ್ವಿ
  • ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದ ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್

ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು, ಏಪ್ರಿಲ್ 3ರ ಆದೇಶದಂತೆ, ರಾಹುಲ್ ಗಾಂಧಿ ಅವರು ಜಾಮೀನಿನ ಮೇಲೆ ಇರುತ್ತಾರೆ ಎಂದು ರಾಹುಲ್‌ ಗಾಂಧಿ ಪರ ವಕೀಲ ಕಿರಿತ್ ಪನ್ವಾಲಾ ತಿಳಿಸಿದ್ದಾರೆ.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಯವರನ್ನು ಸಂಸತ್ ಸದಸ್ಯನಾಗಿ ಅನರ್ಹಗೊಳಿಸಲು ಕಾರಣವಾದ ಮಾರ್ಚ್ 23ರ ಆದೇಶಕ್ಕೆ ತಡೆ ನೀಡುವಂತೆ ಅರ್ಜಿಯನ್ನು ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧರಿಸಿದೆ.

ಕೆಳ ನ್ಯಾಯಾಲಯದ ಆದೇಶದ ವಿರುದ್ಧ ರಾಹುಲ್‌ ಗಾಂಧಿಯವರ ಮೇಲ್ಮನವಿಯ ಅಂತಿಮ ವಿಚಾರಣೆ ಪ್ರಾರಂಭಿಸಲು ಸೆಷನ್ಸ್ ನ್ಯಾಯಾಲಯವು ಮೇ 20ರಂದು ದಿನಾಂಕ ನಿಗದಿಪಡಿಸಿದೆ ಎಂದು ಕಿರಿತ್‌ ಪನ್ವಾಲಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್‌ ಗಾಂಧಿಯವರ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿರುವುದು ಅಮಾನ್ಯ. ನ್ಯಾಯಾಧೀಶರು ಅರ್ಜಿ ತಿರಸ್ಕಾರಕ್ಕೆ ನ್ಯಾಯಸಮ್ಮತ ಕಾರಣ ನೀಡಿಲ್ಲ ಮತ್ತು ದೋಷಪೂರಿತ ನಿರ್ಧಾರ” ಎಂದು ಕಾಂಗ್ರೆಸ್ ಹೇಳಿದೆ.

ಈ ತೀರ್ಪನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ರಾಹುಲ್ ಗಾಂಧಿ ವಕೀಲರು ತಿಳಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ವಕೀಲ ಅಭಿಷೇಕ್ ಸಿಂಘ್ವಿ “ಕಾನೂನಿನ ಎಲ್ಲಾ ಮೂಲಭೂತ ಮತ್ತು ಪ್ರಾಥಮಿಕ ತತ್ವಗಳಿಗೆ ವಿರುದ್ಧವಾಗಿ ಶಿಕ್ಷೆಯನ್ನು ಎತ್ತಿಹಿಡಿಯಲಾಗಿದೆ” ಎಂದು ಹೇಳಿದರು.

“ತೀರ್ಪನ್ನು ಮುಂದಿನ ದಿನಗಳಲ್ಲಿ ಕಾನೂನಿಗೆ ಅನುಸಾರವಾಗಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ನ್ಯಾಯಾಂಗ ಪರಿಶೀಲನೆಯ ಸಾಂವಿಧಾನಿಕ ಅಧಿಕಾರ ಹೊಂದಿರುವ ಉನ್ನತ ನ್ಯಾಯಾಲಯಗಳು ಅಂದರೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿದೆ. ಉನ್ನತ ನ್ಯಾಯಾಲಯಗಳು ರಾಹುಲ್‌ ಅವರಿಗೆ ನೀಡಲಾಗಿರುವ ತೀರ್ಪುಗಳಲ್ಲಿ ಕಂಡುಬರುವ ಕಾನೂನು ದೋಷಗಳನ್ನು ಸರಿಪಡಿಸುತ್ತದೆ ಎಂದು ನಾವು ನಂಬುತ್ತೇವೆ,” ಎಂದು ಸಿಂಘ್ವಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ನರೋಡಾ ಗಾಮ್‌ ಹತ್ಯಾಕಾಂಡ | ಆರೋಪಿಗಳ ಖುಲಾಸೆ ನ್ಯಾಯದ ಕೊಲೆ; ಸಾಕ್ಷಿಗಳ ಅಳಲು

ಹೋರಾಟ ಮುಂದುವರಿಕೆ – ಕಾಂಗ್ರೆಸ್:

ಸೂರತ್ ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಅರ್ಜಿ ತಿರಸ್ಕರಿಸಿದ್ದರೂ ಕಾನೂನಿನಡಿ ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಬಳಸಿಕೊಂಡು, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಇದು ರಾಜಕೀಯ ಪ್ರೇರಿತ ಪ್ರಕರಣ. ನಮಗೆ ಭಾರತದ ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಹೋರಾಟ ಮುಂದುವರಿಯಲಿದೆ” ಎಂದು ಮತ್ತೊಬ್ಬ ಕಾಂಗ್ರೆಸ್‌ನ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಬಿನ್ ಪಿ ಮೊಗೇರ, “ನೀವು ಲೋಕಸಭಾ ಸದಸ್ಯರಾಗಿದ್ದವರು ಹಾಗೂ ದೇಶದ ಎರಡನೇ ಅತಿ ದೊಡ್ಡ ರಾಜಕೀಯ ಪಕ್ಷವೊಂದರ ಅಧ್ಯಕ್ಷರೂ ಆಗಿದ್ದವರು. ಹೀಗಾಗಿ, ಪದಗಳನ್ನು ಬಳಸುವಾಗ ನೀವು (ರಾಹುಲ್) ಎಚ್ಚರದಿಂದ ಇರಬೇಕಿತ್ತು” ಎಂದು ಹೇಳಿದರು.

“ರಾಹುಲ್ ಅವರಂತಹ ವ್ಯಕ್ತಿಯಿಂದ ಸಭ್ಯ ನಡವಳಿಕೆಗೆ ಸಂಬಂಧಿಸಿ ಅಧಿಕ ನಿರೀಕ್ಷೆ ಇರುತ್ತದೆ” ಎಂದ ನ್ಯಾಯಾಧೀಶರು, “ಕಾನೂನಿನಡಿ ಅವಕಾಶವಿರುವಷ್ಟು ಪ್ರಮಾಣದ ಶಿಕ್ಷೆಯನ್ನು ವಿಚಾರಣಾ ನ್ಯಾಯಾಲಯ ವಿಧಿಸಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...