ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು: ಲೋಕಸಭೆಯಲ್ಲಿ ‘ಶಾಯರಿ’ ಮೂಲಕ ಎನ್‌ಡಿಎ ಕಾಲೆಳೆದ ಅಖಿಲೇಶ್

Date:

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ, ವಿಪಕ್ಷ ನಾಯಕನಾದ ಬಳಿಕ ಮಾಡಿದ್ದ ಭಾಷಣದ ಮೂಲಕ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಬ್ಬರಿಸಿದ ಬಳಿಕ ಇಂದು(ಜುಲೈ 2) ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲುಣಿಸಿದ್ದನ್ನು ‘ಶಾಯರಿ(ಕಾವ್ಯ)’ಯ ಮೂಲಕ ಬಿಜೆಪಿಗರ ಕಾಲೆಳೆದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕೂಡ ವಾಗ್ದಾಳಿ ನಡೆಸಲು ಕೂಡ ಅಖಿಲೇಶ್ ಯಾದವ್ ‘ಶಾಯರಿ’ ಮೂಲಕವೇ ವಾಗ್ದಾಳಿ ನಡೆಸಿದರು.

ಉತ್ತರ ಪ್ರದೇಶದ ಕನೌಜ್‌ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮಾಜಿ ಸಿಎಂ ಅಖಿಲೇಶ್ ಯಾದವ್, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭಾ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಬೆಂಬಲಿಸಿದ್ದಕ್ಕಾಗಿ ಉತ್ತರ ಪ್ರದೇಶದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಧನ್ಯವಾದ ಸಮರ್ಪಣೆಯ ವೇಳೆ, “ಸಮಾಜವಾದಿ ಪಕ್ಷ ಅದ್ಭುತ ಪ್ರದರ್ಶನವನ್ನು ನೀಡಿತು. ಅಯೋಧ್ಯೆ ದೇವಸ್ಥಾನ ವ್ಯಾಪ್ತಿಯ ಫೈಜಾಬಾದ್ ಲೋಕಸಭಾ ಕ್ಷೇತ್ರದ ಗೆಲುವು ಅದರಲ್ಲೂ ವಿಶೇಷವಾಗಿತ್ತು. ಅಯೋಧ್ಯೆಯ ವಿಜಯವು ಭಾರತದ ಪ್ರಬುದ್ಧ ಮತದಾರರ ವಿಜಯವಾಗಿದೆ” ಎಂದು ಉಲ್ಲೇಖಿಸಿದರು.

ರಾಮಮಂದಿರವನ್ನು ನಿರ್ಮಿಸಿದಾಗಿನಿಂದ ಈ ಚುನಾವಣೆಯಲ್ಲಿ ದೊಡ್ಡ ಚರ್ಚೆಯ ಕೇಂದ್ರಬಿಂದುವಾಗಿದ್ದ ಅಯೋಧ್ಯೆಯು ಫೈಜಾಬಾದ್ ಕ್ಷೇತ್ರದ ಭಾಗವಾಗಿದೆ. ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ 50,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ವಿರುದ್ಧ ಗೆದ್ದಿದ್ದರು.

ಈ ವರ್ಷದ ಆರಂಭದಲ್ಲಿ, ಉತ್ತರ ಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಯಾದವ್, “ರಾಮ ಮಂದಿರ ಉದ್ಘಾಟನೆಯ ಎಲ್ಲ ವ್ಯವಸ್ಥೆಗಳನ್ನು ಆದಿತ್ಯನಾಥ್ ಅವರು ಮೇಲ್ವಿಚಾರಣೆ ನೋಡಿಕೊಂಡಿದ್ದರು. ಆದರೆ ಕೆಂಪು ಕಾರ್ಪೆಟ್‌ನಲ್ಲಿ ಅವರಿಗೆ ನಡೆದಾಡಲು ಅವಕಾಶ ಸಿಗಲಿಲ್ಲ” ಎಂದು ಹೇಳಿದ್ದರು. ಏಕೆಂದರೆ, ಎಲ್ಲರ ಗಮನವು ಪ್ರಧಾನಿ ನರೇಂದ್ರ ಮೋದಿಯವರ ಮೇಲಿತ್ತು ಎಂಬುದನ್ನು ಪರೋಕ್ಷವಾಗಿ ಹೇಳಿದ್ದರು.

ಈಗ ಸಂಸದರಾಗಿರುವ ಅಖಿಲೇಶ್ ಯಾದವ್, ತನ್ನ ಚುನಾವಣಾ ಪ್ರಚಾರದಲ್ಲಿ ರಾಮ ಮಂದಿರವನ್ನು ಪ್ರದರ್ಶಿಸಿದರೂ ಫೈಜಾಬಾದ್ ಸ್ಥಾನವನ್ನು ಕಳೆದುಕೊಂಡಿದ್ದಕ್ಕಾಗಿ ಬಿಜೆಪಿಯನ್ನು ಕೆಣಕಲು ಇಂದು ಶಾಯರಿಯನ್ನು ಮತ್ತೆ ನೆನಪಿಸಿದರು.

“ಕೆಲವು ವಿಷಯಗಳು ಸಮಯವನ್ನು ಮೀರಿದೆ, ಹಾಗಾಗಿ ಯುಪಿ ಅಸೆಂಬ್ಲಿಯಲ್ಲಿ ಓದಿದ ‘ಶಾಯರಿ’ಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅದು ಆಗ ಸೂಕ್ತವಾಗಿತ್ತು, ಈಗ ಇನ್ನೂ ಹೆಚ್ಚು” ಎಂದು ಯಾದವ್ ಶಾಯರಿಯನ್ನು ಪುನರಾವರ್ತಿಸುವ ಮೊದಲು ಹೇಳಿದರು. ಶಾಯರಿ ಓದುವ ವೇಳೆ ಎರಡೆರಡು ಬಾರಿ ಫೈಜಾಬಾದ್ ಸಂಸದ(ಅಯೋಧ್ಯೆ)ರಾದ ಅವಧೇಶ್ ಪ್ರಸಾದ್ ಎದ್ದು ನಿಂತು ನಮಸ್ಕರಿಸಿದರು.

‘ಶಾಯರಿ’ ಮುಗಿಯುತ್ತಿದ್ದಂತೆಯೇ, ಯಾದವ್ ಅವರು ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ಫೈಜಾಬಾದ್ ಸಂಸದರಾದ ಅವಧೇಶ್ ಪ್ರಸಾದ್ ಭುಜ ತಟ್ಟಿದರು.

ಅಖಿಲೇಶ್ ಯಾದವ್ ಅವರ ಶಾಯರಿಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...