ದೆಹಲಿ | 8 ವರ್ಷದ ಬಾಲಕಿ ಅಪಹರಿಸಿ 24 ಗಂಟೆಗಳ ಕಾಲ ಕಿರುಕುಳ; ಆರೋಪಿ ಬಂಧನ

Date:

ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ಬಳಿಕ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯ ದೇಹದ ಮೇಲೆ ಕಚ್ಚಿದ ಹಲ್ಲುಗಳ ಗುರುತುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 6 ರಂದು ಕೋಟ್ಲಾ ಮುಬಾರಕ್‌ಪುರ ಪ್ರದೇಶದಿಂದ ಬಾಲಕಿಯನ್ನು ಅಪಹರಿಸಲಾಗಿತ್ತು. ಆಕೆಯ ಅಪಹರಣವಾದ ಸುಮಾರು 24 ಗಂಟೆಗಳ ನಂತರ ಅಕೆಯನ್ನು ಪೊಲೀಸರು ರಕ್ಷಿಸಿದ್ದಾರೆ.

ಘಟನೆಯ ನಂತರ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ದೈಹಿಕ ಸ್ಥಿತಿ ಸ್ಥಿರವಾಗಿದ್ದರೂ, ಆಘಾತಕಾರಿ ಘಟನೆಯಿಂದ ಮಾನಸಿಕ ಪರಿಣಾಮಗಳನ್ನು ಎದುರಿಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಅರ್ಜುನ್ ಅಲಿಯಾಸ್ ಮೊಹಮ್ಮದ್ ಉಮರ್ ಎಂಬಾನತನ್ನು ಬಂಧಿಸಲಾಗಿದೆ. ಈ ಹಿಂದೆಯೂ ಅತ ಇದೇ ರೀತಿಯ ಹೇಯ ಕೃತ್ಯ ಎಸಗಿದ್ದ ಎಂದು ಶಂಕಿಸಲಾಗಿದೆ. ಮೇ 6ರಂದು ಮಧ್ಯಾಹ್ನ ಅಂಧೇರಿಯಾ ಮೋಡ್‌ನಲ್ಲಿರುವ ತನ್ನ ನಿವಾಸಕ್ಕೆ ಬಾಲಕಿಯನ್ನು ಕರೆದೊಯ್ದಿದ್ದ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಮಾನಸಿಕ ಅಸ್ವಸ್ತತೆಯ ಲಕ್ಷಣಗಳನ್ನು ಹೊಂದಿದ್ದಾನೆ ಎಂದು ಹೇಳಲಾಗಿದೆ.

“ಆರೋಪಿಗಳನ್ನು ಗುರುತಿಸಲು ನಾವು ಡಿಟಿಸಿ ಬಸ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಅಪಹರಣಕ್ಕೊಳಗಾದ ಬಾಲಕಿಯ ವಿವರಗಳನ್ನು ಪೊಲೀಸ್ ನೆಟ್‌ವರ್ಕ್‌ನಲ್ಲಿ ಹಂಚಿಕೊಳ್ಳಲಾಗಿತ್ತು. ಮಂಗಳವಾರ ಬಾಲಕಿಯನ್ನು ರಕ್ಷಿಸಲಾಗಿದೆ. ಪೊಲೀಸರು ಉಮರ್‌ನನ್ನು ಬಂಧಿಸಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾಣ್ ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಉಮರ್ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ‘ತಾನು ಗಾಜಿನಿಂದ ಸಣ್ಣ ಆಟಿಕೆಗಳನ್ನು ತಯಾರಿಸುತ್ತೇನೆ. ಗಾಜು ಸಂಗ್ರಹಿಸಲು ಕೋಟ್ಲಾಗೆ ಬಂದಿದ್ದೆ. ಅಲ್ಲಿ ಬಾಲಕಿ ಆಟವಾಡುತ್ತಿದ್ದಳು. ಆಕೆಯನ್ನು ಅಪಹರಿಸಿದೆ’ ಎಂದು ಆತ ಹೇಳಿದ್ದಾನೆ” ಎಂದು ಡಿಸಿಪಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...