ದೆಹಲಿ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ಖಲಿಸ್ತಾನ್ ಜಿಂದಾಬಾದ್‌’ ಬರಹ

Date:

ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ20 ಶೃಂಗಸಭೆಗೆ ಮುನ್ನ ದೆಹಲಿಯ ಹಲವಾರು ಮೆಟ್ರೋ ನಿಲ್ದಾಣಗಳ ಗೋಡೆಗಳಲ್ಲಿ ಖಲಿಸ್ತಾನ್ ಪರ ಬರಹಗಳು ಕಂಡು ಬಂದಿವೆ.

ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ ವಿಹಾರ್, ಉದ್ಯೋಗ್ ನಗರ್ ಮತ್ತು ಮಹಾರಾಜ ಸೂರಜ್ಮಲ್ ಸ್ಟೇಡಿಯಂ ಸೇರಿದಂತೆ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ದೆಹಲಿ ಬನೇಗಾ ಖಲಿಸ್ತಾನ್’ ಮತ್ತು ‘ಖಲಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಬರೆಯಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಕಾರ್ಯಕರ್ತರು ಶಿವಾಜಿ ಪಾರ್ಕ್ ಮತ್ತು ಪಂಜಾಬಿ ಬಾಗ್ ಸೇರಿದಂತೆ ಹಲವು ಮೆಟ್ರೋ ನಿಲ್ದಾಣಗಳಳಿಗೆ ಆಗಮಿಸಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ದಲಿತ ವ್ಯಕ್ತಿಯ ಹತ್ಯೆ; ಆತನ ತಾಯಿಯನ್ನು ನಗ್ನಗೊಳಿಸಿ ಅವಮಾನ

ನಂಗ್ಲೋಯ್‌ನಲ್ಲಿರುವ ಸರ್ಕಾರಿ ಸರ್ವೋದಯ ಬಾಲ ವಿದ್ಯಾಲಯದ ಗೋಡೆಯ ಮೇಲೂ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿದೆ.

ಘಟನೆ ಬೆಳಕಿಗೆ ಬಂದ ನಂತರ ದೆಹಲಿ ಪೊಲೀಸರ ವಿಶೇಷ ತಂಡ ಗೋಡೆ ಬರಹಗಳನ್ನು ಅಳಿಸಿಹಾಕುವಲ್ಲಿ ನಿರತವಾಗಿದೆ. ಅಲ್ಲದೆ ಆರೋಪಿಗಳನ್ನು ಪತ್ತೆ ಹಚ್ಚಿ ಆದಷ್ಟು ಬೇಗ ಬಂಧಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ದೆಹಲಿಯಲ್ಲಿ ಜಿ 20 ಶೃಂಗಸಭೆ ನಡೆಯುತ್ತಿರುವ ಸೆಪ್ಟೆಂಬರ್ 10 ರಂದು ಕೆನಡಾದ ಸರ್ರೆಯಲ್ಲಿ ಖಲಿಸ್ತಾನ್‌ನ ಜನಾಭಿಪ್ರಾಯ ಸಂಗ್ರಹಣೆ ನಡೆಯಲಿದೆ ಎಂದು ಅದರ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು ವಿಡಿಯೋದಲ್ಲಿ ತಿಳಿಸಿದ್ದಾರೆ.

ಜಿ-20 ಶೃಂಗಸಭೆ ಸೆ. 9 ಹಾಗೂ 10ರಂದು ನಡೆಯಲಿದೆ. 40ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...