ದೆಹಲಿ ಸ್ಪೋಟ: ದೊರೆಯ ಜನ್ಮ ದಿನಾಚರಣೆಗಾಗಿ ಭೂತಾನ್‌ಗೆ ಹಾರಿದ ಮೋದಿ; ನೆಟ್ಟಿಗರ ಆಕ್ರೋಶ

Date:

ದೆಹಲಿಯಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಭಯೋತ್ಪಾದನಾ ಕೃತ್ಯದ ಆರೋಪಗಳು ಕೇಳಿಬರುತ್ತಿವೆ. ಇಡೀ ದೇಶ ಕಂಬನಿ ಮಿಡಿಯುತ್ತಿದೆ. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಭೂತಾನ್‌ ದೊರೆಯ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾಗಲು ಭೂತಾನ್‌ಗೆ ಹಾರಿದ್ದಾರೆ. ಭಾರತದ ಸ್ಥಬ್ಧಗೊಂಡಿರುವ ಸಮಯದಲ್ಲಿ ಮೋದಿ ‘ಬರ್ತಡೇ ಪಾರ್ಟಿ’ಗೆ ಹೋಗಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಭೂತಾನ್‌ನ 4ನೇ ದೊರೆ ಜಿಗ್ಮೆ ಸಿಂಗೈ ವಾಂಗ್ ಚುಕ್ ಅವರು ಮಂಗಳವಾರ (ನ.11) ತಮ್ಮ 70ನೇ ಜನ್ಮ ದಿನಾಚರಣೆ ಆಚರಿಸಿಕೊಳ್ಳುತ್ತಿದ್ದಾರೆ. ಆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭೂತಾನ್ ರಾಜಧಾನಿ ತಿಂಪುಗೆ ತೆರಳಿದ್ದಾರೆ. ಎರಡು ದಿನಗಳ ಕಾಲ ಭೂತಾನ್‌ನಲ್ಲಿಯೇ ಇರಲಿದ್ದು, ಭೂತಾನ್ ದೊರೆ ಜುಗ್ಮೆ ಕೇಶರ್ ನಂಗ್ಯಾಲ್ ವಾಂಗ್ ಚುಕ್, ಅವರ ತಂದೆ – ಪೂರ್ವಾಧಿಕಾರಿ ಸಿಂಗೈ ಹಾಗೂ ಪ್ರಧಾನ ಮಂತ್ರಿ ಶೇರಿಂಗ್ ತೋಬ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

“4ನೇ ದೊರೆಯ 70ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳುವುದು ಗೌರವದ ಸಂಗತಿ. ನನ್ನ ಭೂತಾನ್‌ ಭೇಟಿಯು ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಬಲಗೊಳಿಸಲಿದೆ. ಅಭಿವೃದ್ಧಿ ಎಡೆಗಿನ ನಮ್ಮ ಜಂಟಿ ಪ್ರಯತ್ನವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ” ಎಂದು ಮೋದಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಸ್ಪೋಟದ ನಡುವೆ ಭೂತಾನ್‌ಗೆ ಮೋದಿ ತೆರಳಿರುವುದರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ದೆಹಲಿಯಲ್ಲಿ ದೇಶವಾಸಿಗಳ‌ ನೆತ್ತರು ಹರಿದಿದೆ, ದೇಹ ಛಿದ್ರಛಿದ್ರವಾಗಿದೆ. ಯಾರದ್ದೋ ಹುಟ್ಟುಹಬ್ಬಕ್ಕೆ ಈ ನಾಡಿನ ದೊರೆ ಹೊರಟಿದ್ದಾರೆ” ಎಂದು ಕಿಡಿದ್ದಾರೆ.

“ಇವರಿಗೆ ವ್ಯಾಪಾರ ಒಂದು ಬಿಟ್ಟರೆ ಬೇರೆ ಏನೂ ಬೇಡ. ಯಾರು ಸಾಯಲಿ ಬಿಡಲಿ, ಅವರದ್ದು ಅಧಿಕಾರ ಮತ್ತು ವ್ಯಾಪಾರ ಎರಡೇ” ಎಂದು ನೆಟ್ಟಿಗರೊಬ್ಬರು ಕಿಡಿಕಾರಿದ್ದಾರೆ.

“ಇಲ್ಲಿ ದುರಂತ ಸಂಭವಿಸಿದಾಗಲೆಲ್ಲ ಈ ಮನುಷ್ಯ ವಿದೇಶದಲ್ಲಿ ಮೋಜು ಮಸ್ತಿಯಲ್ಲಿರ್ತಾರೆ. ಅಥವಾ ಸ್ವದೇಶದಲ್ಲಿ ಶೂಟಿಂಗ್‌ನಲ್ಲಿ ಇರ್ತಾರೆ. ನಾಟ್ ರಿಚೇಬಲ್ ಆಗಿರುತ್ತಾರೆ” ಎಂಧು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...