ಬಾಲಕನ ಮೇಲೆ 13 ಮಂದಿಯಿಂದ ಲೈಂಗಿಕ ದೌರ್ಜನ್ಯ: 24 ಬಾರಿ ಚಾಕುವಿನಿಂದ ಇರಿದು ಹತ್ಯೆ

Date:

ವಿರೋಧಿ ಗ್ಯಾಂಗ್‌ನ ಮಾಹಿತಿದಾರನಾಗಿದ್ದ ಎಂಬ ಆರೋಪದ ಮೇಲೆ 14 ವರ್ಷದ ಬಾಲಕನ ಮೇಲೆ ಒಟ್ಟು 13 ಮಂದಿ ದುರುಳರು ಲೈಂಗಿಕ ದೌರ್ಜನ್ಯ ಎಸಗಿ, 24 ಬಾರಿ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಹಲವು ಮಂದಿ ಅಪ್ರಾಪ್ತ ವಯಸ್ಕರು ಎಂದು ಹೇಳಲಾಗಿದೆ.

ಜುಲೈ 1ರಂದು ದೆಹಲಿ ಕಾಲುವೆಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ದೇಹದಲ್ಲಿ 24 ಇರಿತದ ಗಾಯಗಳು ಮತ್ತು ದೌರ್ಜನ್ಯ ಎಸಗಿದ ಗಾಯಗಳು ಕಂಡುಬಂದಿತ್ತು. ಈ ಸಂಬಂಧ ಪ್ರಮುಖ ಆರೋಪಿ ಕೃಷ್ಣ ಅಲಿಯಾಸ್ ಭೋಲಾ(19) ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಶುಕ್ರವಾರ(ಜುಲೈ 25) ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಜುಲೈ 18ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಕನ್ವರ್ ಶಿಬಿರದಿಂದ ಪೊಲೀಸರು ಮೂವರನ್ನು ಬಂಧಿಸಿದ್ದರು.

ಇದನ್ನು ಓದಿದ್ದೀರಾ? ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಶಿಕ್ಷಕಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಬಾಲಕನು ತಮ್ಮ ವಿರೋಧಿ ಗ್ಯಾಂಗ್‌ನ ಬಧ್ವಾರ್ ಸಹೋದರರಾದ ಮೋನು ಮತ್ತು ಸೋನು ಅವರ ಮಾಹಿತಿದಾರ ಎಂದುಕೊಂಡು ಕೃಷ್ಣ ಈ ಕೊಲೆ ಮಾಡಲು ಯೋಜಿಸಿದ್ದ ಎನ್ನಲಾಗಿದೆ. ಅಕ್ರಮ ಮದ್ಯ ವ್ಯಾಪಾರ, ದರೋಡೆ ಸೇರಿದಂತೆ ಹಲವು ಆರೋಪಗಳನ್ನು ಹೊಂದಿರುವ ಬಧ್ವಾರ್ ಸಹೋದರರು ಸದ್ಯ ಜೈಲಿನಲ್ಲಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಹರೇಶ್ವರ ಸ್ವಾಮಿ, “ಸ್ವಲ್ಪ ಕೊಳೆತ ಯುವಕನ ಮೃತದೇಹವು ಮುನಕ್ ಕಾಲುವೆಯಲ್ಲಿ ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡು ಸಂಪೂರ್ಣವಾಗಿ ಬೆತ್ತಲೆಯಾಗಿ ಬಿದ್ದಿರುವುದು ಕಂಡು ಬಂದಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಅಪರಾಧದ ಕ್ರೂರತೆಯನ್ನು ಬಹಿರಂಗಪಡಿಸಿತು” ಎಂದು ಹೇಳಿದ್ದಾರೆ.

“ಮರಣೋತ್ತರ ಪರೀಕ್ಷೆಯ ವರದಿಗಳು ಆತನ ದೇಹದ ಮೇಲೆ 24 ಇರಿತದ ಗಾಯಗಳಿದ್ದವು ಎಂದು ಬಹಿರಂಗಪಡಿಸಿವೆ. ಗುದದ್ವಾರದಲ್ಲಿ ಗಾಯದ ಗುರುತುಗಳಿವೆ. ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೃಢಪಟ್ಟಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕನ್ವರ್ ಯಾತ್ರಿಕರಂತೆ ನಟಿಸುತ್ತಾ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹರಿದ್ವಾರದಲ್ಲಿ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಅಪರಾಧವನ್ನು ಒಪ್ಪಿದ್ದಾರೆ. ದೀಪಕ್, ಚಂದನ್ ಮತ್ತು ಸಚಿನ್ ಎಂಬ ಇತರ ಮೂವರು ಆರೋಪಿಗಳ ಗುರುತನ್ನು ಬಹಿರಂಗಪಡಿಸಿದರು. ಬಂಧಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...