ದೆಹಲಿ ಚಲೋ | ಪೊಲೀಸರ ತಡೆಗೋಡೆ ಭೇದಿಸಲು ಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗ

Date:

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಕೇಂದ್ರ ಸರ್ಕಾರವೇ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ‘ದೆಹಲಿ ಚಲೋ’ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ರೈತರು ದೆಹಲಿಗೆ ಹೋಗದಂತೆ ತಡೆದಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು, ದೆಹಲಿಯತ್ತ ಹೊರಟಿದ್ದರು. ಅವರನ್ನು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ರಸ್ತೆಗೆ ಬೃಹತ್ ಮುಳ್ಳು ತಂತಿ ಬೇಲಿಗಳನ್ನು ಹಾಕಿದ್ದಾರೆ. ಮುಳ್ಳು ತಂತಿಯ ತಡೆಗೋಡೆಯನ್ನು ಭೇದಿಸಿ ಮುನ್ನುಗ್ಗಲು ರೈತರು ಮುಂದಾಗಿದ್ದು, ಅವರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ರೈತರು ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ಸಂಧಾನದ ಬಾಗಿಲುಗಳು ಮುಚ್ಚಿವೆ’ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರಲ್ಲಿ ಸತತ ಒಂದು ವರ್ಷಗಳ ಕಾಲ ನಡೆದ ರೈತ ಹೋರಾಟದ ಫಲವಾಗಿ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿತ್ತು. ಅಲ್ಲದೆ, ಎಂಎಸ್‌ಪಿ, ಕೃಷಿ ಸಾಲ ಮನ್ನಾ ಸೇರಿದಂತೆ ಕೆಲವು ಭರವಸೆಗಳನ್ನು ನೀಡಿತ್ತು. ಆದರೆ, ರೈತ ಹೋರಾಟ ಕೊನೆಗೊಂಡು ಮೂರು ವರ್ಷಗಳು ಕಳೆದರೂ ಕೇಂದ್ರ ಸರ್ಕಾರ ತನ್ನ ಭರವಸೆಗಳನ್ನು ಜಾರಿಗೆ ತಂದಿಲ್ಲ.

ಈ ವರದಿ ಓದಿದ್ದೀರಾ?: ದೆಹಲಿಯಲ್ಲಿ ಮತ್ತೆ ರೈತ ಘರ್ಜನೆ: ಸರ್ಕಾರಕ್ಕೆ 7 ದಿನಗಳ ‘ಡೆಡ್‌ಲೈನ್’

ಹೀಗಾಗಿ, ಕೇಂದ್ರ ಸರ್ಕಾರಕ್ಕೆ ತನ್ನ ಭರವಸೆಗಳನ್ನು ನೆನಪಿಸಲು ಇದೇ ವರ್ಷದ ಫೆಬ್ರವರಿ 13ರಿಂದ ದೆಹಲಿ ಚಲೋಗೆ ಸಂಯುಕ್ತ ಕಿಸಾನ್ ವೋರ್ಚಾ ಮತ್ತು ಕಿಸಾನ್ ಮಝ್ದೂರ್ ಸಭಾ ಕರೆ ಕೊಟ್ಟಿದ್ದವು. ಪಂಜಾಬ್‌ನಿಂದ ಹೊರಟಿದ್ದ ರೈತರನ್ನು ಪಂಜಾಬ್-ಹರಿಯಾಣ ಗಡಿ ಖನೌರಿ ಬಳಿ ಭದ್ರತಾ ಪಡೆಗಳು ತಡೆದಿದ್ದವು.

ಖನೌರಿ ಗಡಿಯಲ್ಲೇ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಪ್ರತಿಭಟನೆ ನಡೆಯುತ್ತಿದ್ದ ಸಮಯದಲ್ಲಿಯೇ ಲೋಕಸಭಾ ಚುನಾವಣೆ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳೂ ನಡೆದಿವೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೈತ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ, ಶುಕ್ರವಾರ ಮತ್ತೆ ದೆಹಲಿ ಚಲೋಗೆ ರೈತ ಸಂಘಟನೆಗಳು ಕರೆಕೊಟ್ಟಿದ್ದವು. ಇದೀಗ, ರೈತರನ್ನು ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...