ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್ನ ನೆಲಮಾಳಿಗೆ ಜಲಾವೃತವಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೋಚಿಂಗ್ ಸೆಂಟರ್ಗಳ ನಿಯಂತ್ರಣಕ್ಕೆ ಹೊಸ ಕಾನೂನನ್ನು ಪರಿಚಯಿಸಲು ದೆಹಲಿ ಸರ್ಕಾರ ಮುಂದಾಗಿದೆ.
ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಜೊತೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಚಿವೆ ಅತಿಶಿ, “ಐಎಎಸ್ ಸ್ಟಡಿ ಸರ್ಕಲ್ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ನಡೆದ ದುರಂತದ ನಂತರ 30 ಕೋಚಿಂಗ್ ಸೆಂಟರ್ಗಳ ನೆಲಮಾಳಿಗೆಗಳನ್ನು ಸೀಲ್ ಮಾಡಲಾಗಿದೆ. 200 ಇನ್ಸ್ಟಿಟ್ಯೂಟ್ಗಳಿಗೆ ನೋಟಿಸ್ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.
“ನಾವು ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸುತ್ತೇವೆ, ನಾವು ಅವರೊಂದಿಗೆ ಶೀಘ್ರದಲ್ಲೇ ಸಭೆ ನಡೆಸುತ್ತೇವೆ. ಅದಾದ ಬಳಿಕ ಕೋಚಿಂಗ್ ಇನ್ಸ್ಟಿಟ್ಯೂಟ್ಗಳ ನಿಯಂತ್ರಣ ಕಾಯ್ದೆಯನ್ನು ತರುತ್ತೇವೆ” ಎಂದು ಶೆಲ್ಲಿ ಒಬೆರಾಯ್ ಹೇಳಿದರು.
दिल्ली में कोचिंग इंस्टिट्यूट को लेकर महत्वपूर्ण प्रेस कॉन्फ़्रेंस। LIVE https://t.co/XvncwV59qP
— AAP (@AamAadmiParty) July 31, 2024
ಇದನ್ನು ಓದಿದ್ದೀರಾ? ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ
ಜುಲೈ 27ರಂದು ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್ನ ನೆಲಮಾಳಿಗೆ ಜಲಾವೃತವಾಗಿ ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ.
ಈ ಘಟನೆ ಬೆನ್ನಲ್ಲೇ ವಿದ್ಯಾರ್ಥಿಗಳು ಕೋಚಿಂಗ್ ಸೆಂಟರ್ಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ, ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ನ (ಎಂಸಿಡಿ) ಬೇಜವಾಬ್ದಾರಿಯನ್ನು ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಎಂಸಿಡಿ ಹೆಚ್ಚುವರಿ ಆಯುಕ್ತ ತಾರಿಕ್ ಥಾಮಸ್, “ನನ್ನ, ನಮ್ಮ ಅಧಿಕಾರಿಗಳ ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಬೇಕಾಗಿತ್ತು. ನಮಗೆ ಯಾವುದೇ ಕಾರಣಕ್ಕೂ ಕ್ಷಮೆಯಿಲ್ಲ” ಎಂದು ಹೇಳಿದ್ದಾರೆ.
#WATCH | Old Rajinder Nagar incident | Tariq Thomas, Additional Commissioner MCD interacts with the protesting students who are on a hunger strike against the death of 3 students after the basement of a coaching institute in Old Rajinder Nagar was flooded with rainwater on July… pic.twitter.com/4uYaROPLuF
— ANI (@ANI) July 31, 2024




