ನೀರು ಹರಿಸಲು ಹರಿಯಾಣಕ್ಕೆ ನಿರ್ದೇಶಿಸುವಂತೆ ಸುಪ್ರೀಂ ಮೊರೆ ಹೋದ ದೆಹಲಿ ಸರ್ಕಾರ

Date:

ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ನೆರೆಯ ರಾಜ್ಯ ಹರಿಯಾಣಕ್ಕೆ ಒಂದು ತಿಂಗಳು ಹೆಚ್ಚುವರಿ ನೀರು ಹರಿಸಲು ನಿರ್ದೇಶಿಸುವಂತೆ ಆಪ್‌ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ದೆಹಲಿಯ ನೀರಿನ ಅಗತ್ಯತೆಗಳನ್ನು ಪರಿಪೂರ್ಣಗೊಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯು ತೀವ್ರ ಬಿಸಿಲಿನಿಂದಾಗಿ ನೀರಿನ ಕೊರತೆಯನ್ನು ಅನುಭವಿಸುತ್ತಿದೆ ಎಂದು ದೆಹಲಿ ಸರ್ಕಾರ ಕೋರ್ಟ್‌ಗೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿರುವ ತಮ್ಮ ಸರ್ಕಾರಗಳಿಗೆ ಒಂದು ತಿಂಗಳ ಮಟ್ಟಿಗೆ ನೀರು ಹರಿಸುವಂತೆ ನಿರ್ದೇಶಿಸುವಂತೆ ಆಗ್ರಹಿಸಿದ್ದರು.

ದೆಹಲಿಯ ಜಲ ಸಚಿವೆ ಅತೀಶಿ, ಹರಿಯಾಣ ಸರ್ಕಾರ ದೆಹಲಿಗೆ ಬಿಡಬೇಕಾದ ತಮ್ಮ ಪಾಲಿನ ನೀರನ್ನು ಬಿಡದೆ ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಅಭಾವ ಸೃಷ್ಟಿಸುತ್ತಿದೆ. ದೆಹಲಿಯು ನೀರಿನ ಪೂರೈಕೆಗಾಗಿ ಸಂಪೂರ್ಣವಾಗಿ ಯಮುನಾ ನದಿಯನ್ನು ಅವಲಂಬಿಸಿದ್ದು, ಹರಿಯಾಣ ಸರ್ಕಾರ ಈ ನೀರನ್ನು ಬಿಡಬೇಕಿದೆ ಎಂದು ತಿಳಿಸಿದ್ದಾರೆ.

ವಾಜಿರಾಬಾದ್‌ ಅಣೆಕಟ್ಟಿನಲ್ಲಿ ನೀರಿನ ಮಟ್ಟ 670.3 ಅಡಿಯಿದ್ದು, ಸಾಮಾನ್ಯ ಮಟ್ಟಕ್ಕಿಂತ 3.5 ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆಯುಂಟಾಗಿದೆ ಎಂದು ಅತೀಶಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...