ಮನೆಯಲ್ಲಿ ಹಣ ಪತ್ತೆ: ನ್ಯಾ. ವರ್ಮಾ ವಿಚಾರಣೆ ನಡೆಸಿದ್ದ 52 ಪ್ರಕರಣಗಳ ಮರುವಿಚಾರಣೆಗೆ ದೆಹಲಿ ಹೈಕೋರ್ಟ್‌ ನಿರ್ಧಾರ

Date:

ಇತ್ತೀಚೆಗೆ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಕೋಟಿ-ಕೋಟಿ ರೂ. ಹಣ ಪತ್ತೆಯಾದ ಬಳಿಕ, ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಅವರು ದೆಹಲಿ ಹೈಕೋರ್ಟ್‌ನಲ್ಲಿದ್ದಾಗ ವಿಚಾರಣೆ ನಡೆಸಿದ್ದ, ಅಂತಿಮ ತೀರ್ಪು ಬಂದಿರದ 52 ಪ್ರಕರಣಗಳನ್ನು ಹೊಸದಾಗಿ ಮರುವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್‌ ನಿರ್ಧರಿಸಿದೆ.

ಈ ಬಗ್ಗೆ ಸಾರ್ವಜನಿಕ ಸೂಚನೆ ನೀಡಿರುವ ದೆಹಲಿ ಹೈಕೋರ್ಟ್‌, “ನ್ಯಾಯಮೂರ್ತಿ ಯಶವಂತ್ ವರ್ಮಾ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ವಿಭಾಗೀಯ ಪೀಠದ ಮುಂದೆ ಈ ಹಿಂದೆ ಪಟ್ಟಿ ಮಾಡಲಾಗಿದ್ದ ಮತ್ತು ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದ ಪ್ರಕರಣಗಳು ಇವು. ಯಾವುದೇ ಆದೇಶಗಳನ್ನು ಹೊರಡಿಸಿದ ಈ 52 ಪ್ರಕರಣಗಳನ್ನು ಮರು ಪಟ್ಟಿ ಮಾಡಿ, ಹೊಸದಾಗಿ ಆರಂಭದಿಂದ ವಿಚಾರಣೆ ನಡೆಸಲಾಗುವುದು. ಸಂಬಂಧಪಟ್ಟ ಎಲ್ಲರಿಗೂ ಮಾಹಿತಿ ನೀಡಲಾಗಿದೆ” ಎಂದು ಹೇಳಿದೆ.

ಮರು ವಿಚಾರಣೆಗೆ ಪಟ್ಟಿ ಮಾಡಲಾಗಿರುವ 52 ಪ್ರಕರಣಗಳಲ್ಲಿ ಹೆಚ್ಚಿನವು ಜಿಎಸ್‌ಟಿ ಮತ್ತು ತೆರಿಗೆಗೆ ಸಂಬಂಧಿತ ವಿವಾದಗಳಿಗೆ ಸಂಬಂಧಿಸಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ದೇಶದ್ರೋಹಿ’ಯೊಬ್ಬನ ಅಪೂರ್ಣ ಆಂದೋಲನ

ಮಾರ್ಚ್ 14ರಂದು ದೆಹಲಿಯಲ್ಲಿನ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಅವಗಢ ಸಂಭವಿಸಿತ್ತು. ಈ ವೇಳೆ, ಕಳೆದ ತಿಂಗಳು ಅರೆ-ಬರೆ ಸುಟ್ಟುಹೋಗಿದ್ದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ವರ್ಮಾ ಅವರ ವಿರುದ್ಧ ಆಂತರಿಕ ತನಿಖೆ ನಡೆದು, ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ.

ಅವರನ್ನು ಅಲಹಾಬಾದ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ನ ಬಾರ್ ಕೌನ್ಸಿಲ್‌ಗಳು ವಿರೋಧಿಸಿದ್ದವು. ವಿರೋಧದ ಪರಿಣಾಮವಾಗಿ ಅವರ ಪ್ರಮಾಣವಚನವನ್ನು ಸಾರ್ವಜನಿಕ ಸಮಾರಂಭದಲ್ಲಿ ನಡೆಸುವ ಬದಲು ಖಾಸಗಿಯಾಗಿ ನಡೆಸಲಾಯಿತು. ಅಲ್ಲದೆ, ಸದ್ಯಕ್ಕೆ ವರ್ಮಾ ಅವರು ಯಾವುದೇ ಪ್ರಕರಣಗಳ ವಿಚರಣೆ ನಡೆಸದಂತೆ ಸುಪ್ರೀಂ ಕೋರ್ಟ್‌ ನಿರ್ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...