ಸಾಂಬಾರ ಪದಾರ್ಥಗಳ ಮೇಲೆ ಮಾನಹಾನಿ ವಿಡಿಯೋ ತೆರವಿಗೆ ಗೂಗಲ್‌ಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

Date:

  • ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್ ನರುಲಾ ಪೀಠ ವಿಚಾರಣೆ
  • ಸಾಂಬಾರ್‌ ಪದಾರ್ಥಗಳು ಹಸುವಿನ ಮೂತ್ರ, ಸಗಣಿ ಹೊಂದಿವೆ ಎಂದು ವಿಡಿಯೋ

ಭಾರತೀಯ ಸಾಂಬಾರ್‌ ಪದಾರ್ಥಗಳು ಹಸುವಿನ ಮೂತ್ರ ಹಾಗೂ ಸಗಣಿಯನ್ನು ಒಳಗೊಂಡಿವೆ ಎಂದು ಆರೋಪಿಸಿದ ಮಾನಹಾನಿಕರ ವಿಡಿಯೋಗಳನ್ನು ಯೂಟ್ಯೂಬ್‌ನಿಂದ ತೆರವು ಅಥವಾ ನಿರ್ಬಂಧಿಸುವಂತೆ ದೆಹಲಿ ಹೈಕೋರ್ಟ್‌ ಗೂಗಲ್‌ ಸಂಸ್ಥೆಗೆ ಶುಕ್ರವಾರ (ಮೇ 5) ನಿರ್ದೇಶನ ನೀಡಿದೆ.

ಸಾಂಬಾರ್‌ ಪದಾರ್ಥಗಳು ಮೂತ್ರ ಹಾಗೂ ಸಗಣಿ ಹೊಂದಿವೆ ಎಂದು ‘ಕ್ಯಾಚ್‌’ ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳನ್ನು ಗುರಿಯಾಗಿಸಿ ವಿಡಿಯೋಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಲಾಗಿತ್ತು.

ಈ ವಿಡಿಯೋಗಳು ಮಾನಹಾನಿಕರ ಸ್ವರೂಪದ್ದಾಗಿವೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

‘ಕ್ಯಾಚ್’ ಬ್ರಾಂಡ್ ಹೆಸರಿನಡಿಯಲ್ಲಿ ಉತ್ಪನ್ನಗಳನ್ನು ಹೊಂದಿರುವ ಸಂಘಟಿತ ಧರಂಪಾಲ್ ಸತ್ಯಪಾಲ್ ಸನ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಯ ಮಾನಹಾನಿ ಮೂಲಕ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸದಂತೆ ಎರಡು ಯೂಟ್ಯೂಬ್ ವಾಹಿನಿಗಳನ್ನು ನಿರ್ಬಂಧಿಸಿ ಪೀಠ ಆದೇಶಿಸಿದೆ.

“ಪ್ರತಿವಾದಿಗಳು ಅಂತಹ ವಿಡಿಯೋಗಳನ್ನು ರಚಿಸುವುದು ಮತ್ತು ಅಪ್‌ಲೋಡ್ ಮಾಡುವುದು ‘ಕ್ಯಾಚ್‌’ ಕಂಪನಿ ಗುರುತು ಹೊಂದಿರುವ ಫಿರ್ಯಾದಿಯ ಸರಕುಗಳನ್ನು ಮಾನಹಾನಿ ಮತ್ತು ಅವಹೇಳನ ಮಾಡುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

“ಯೂಟ್ಯೂಬ್‌ಗೆ ಸುಲಭ ಮತ್ತು ಅನಿಯಂತ್ರಿತ ಪ್ರವೇಶದ ಹಿನ್ನೆಲೆ ಮಾನಹಾನಿಕರ ವಿಡಿಯೋಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುವ ಅಥವಾ ಹಂಚಿಕೊಳ್ಳುವ ಸಂಭವನೀಯತೆ ಹೆಚ್ಚಿದೆ” ಎಂದು ಪೀಠ ಉಲ್ಲೇಖಿಸಿದೆ.

ಪ್ರಕರಣದಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ ಆರೋಪಿಗಳಿಬ್ಬರು ವಿಚಾರಣೆಗೆ ಹಾಜರಾಗದ ಕಾರಣ ತಾತ್ಕಾಲಿಕ ಆದೇಶ ನೀಡಲಾಗಿದ್ದು ಆರೋಪಿಗಳ ಔಪಚಾರಿಕ ವಿಚಾರಣೆ ಬಾಕಿ ಇದೆ ಎಂದು ಪೀಠ ಹೇಳಿದೆ.

ದೆಹಲಿ ಹೈಕೋರ್ಟ್‌ ಹಿಂದಿನ ನಿರ್ದೇಶನಗಳನ್ನು ಅನುಸರಿಸಿ ಕ್ರಮ ತೆಗೆದುಕೊಳ್ಳಲಾಗಿದೆ. ಮೂರು ವಿಡಿಯೋಗಳು ಇನ್ನು ಮುಂದೆ ವೀಕ್ಷಣೆಗೆ ಲಭ್ಯವಿಲ್ಲ ಎಂದು ಗೂಗಲ್‌ನ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಎರಡು ಪ್ರತಿವಾದಿ ವಾಹಿನಿಗಳಾದ ಟಿವೈಆರ್ ಮತ್ತು ವ್ಯೂಸ್ ಎನ್‌ನ್ಯೂಸ್, ಭಾರತೀಯ ಸಾಂಬಾರ್‌ ಪದಾರ್ಥಗಳ ವಿರುದ್ಧ ಅವಹೇಳನಕಾರಿ ಮತ್ತು ಸುಳ್ಳು ಟೀಕೆಗಳನ್ನು ಹೊಂದಿರುವ ವಿಡಿಯೋಗಳನ್ನು ದುರುದ್ದೇಶಪೂರಿತವಾಗಿ ಅಪ್‌ಲೋಡ್ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಪರಿಸ್ಥಿತಿ ನಿಯಂತ್ರಣ; ರೈಲುಗಳ ಸಂಚಾರ ಸ್ಥಗಿತ

ವಿಶೇಷವಾಗಿ ‘ಕ್ಯಾಚ್’ ಬ್ರ್ಯಾಂಡ್‌ನ ಅಡಿಯಲ್ಲಿ ಮಾರಾಟವಾಗಿದೆ ಎಂದು ಕಂಪನಿ ಆರೋಪಿಸಿತ್ತು.

ಯೂಟ್ಯೂಬ್ ವಾಹಿನಿಗಳಲ್ಲಿ ಆಕ್ಷೇಪಾರ್ಹ ವಿಡಿಯೋಗಳನ್ನು ಪತ್ತೆಹಚ್ಚಿದ ನಂತರ ಕಂಪನಿಯು ಮೊಕದ್ದಮೆ ಹೂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...