ಉನ್ನಾಂವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು: ಸೆಂಗರ್‌ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

Date:

ಉನ್ನಾಂವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಗೆ ವಿಧಿಸಲಾಗಿರುವ ಜೈಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸೆಂಗಾರ್‌ಗೆ ಇತ್ತೀಚೆಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಆ ಆದೇಶಕ್ಕೆ ತಡೆ ನೀಡಿರುವ ಬೆನ್ನಲ್ಲೇ, ಇದೀಗ ಕಸ್ಟಡಿ ಸಾವು ಪ್ರಕರಣದಲ್ಲಿಯೂ ಶಿಕ್ಷೆ ಅಮಾನತು ಕೋರಿಕೆಯನ್ನು ಹೈಕೋರ್ಟ್ ನಿರಾಕರಿಸಿದೆ.

ಉನ್ನಾಂವ್ ಅತ್ಯಾಚಾರ ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ, ವಿಚಾರಣಾ ನ್ಯಾಯಾಲಯವು 2020ರ ಮಾರ್ಚ್ 13ರಂದು ಕುಲದೀಪ್ ಸೆಂಗರ್‌ಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡವನ್ನು ವಿಧಿಸಿತ್ತು. ಮೃತ ವ್ಯಕ್ತಿಯು ತಮ್ಮ ಕುಟುಂಬಕ್ಕೆ “ಏಕೈಕ ಆಧಾರಸ್ತಂಭ” ಆಗಿದ್ದರು ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯವು, ಈ ಕೃತ್ಯಕ್ಕೆ ಯಾವುದೇ ರೀತಿಯ “ಕರುಣೆ ತೋರಲು ಸಾಧ್ಯವಿಲ್ಲ” ಎಂದು ಕಟುವಾಗಿ ನುಡಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉನ್ನಾಂವ್‌ ಸಂತ್ರಸ್ತೆ ವಿರುದ್ಧ ದೌರ್ಜನ್ಯದ ಮೇಲೆ ದೌರ್ಜನ್ಯ! ದೇಶ ಒಂದಾಗಿ ನಿಲ್ಲಬೇಕಿದೆ ಆಕೆಯ ಹಿಂದೆ

ಸೆಂಗಾರ್ ಅವರಲ್ಲದೆ, ಅವರ ಸಹೋದರ ಅತುಲ್ ಸಿಂಗ್ ಸೆಂಗಾರ್ ಮತ್ತು ಇತರ ಐವರು ಆರೋಪಿಗಳಿಗೂ ಈ ಕಸ್ಟಡಿ ಸಾವಿನ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

2017ರಲ್ಲಿ ಸೆಂಗರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆಯನ್ನು ಸೆಂಗರ್ ಅವರ ಕುಮ್ಮಕ್ಕಿನ ಮೇರೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. 2018ರ ಏಪ್ರಿಲ್ 9ರಂದು ಅವರು ಪೊಲೀಸ್ ಕಸ್ಟಡಿಯಲ್ಲಿಯೇ ಮೃತಪಟ್ಟಿದ್ದರು. ಪೊಲೀಸ್ ಕಸ್ಟಡಿಯಲ್ಲಿ ನಡೆದ ದೌರ್ಜನ್ಯ ಮತ್ತು ಹಲ್ಲೆಯಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ತನಿಖೆಯಿಂದ ದೃಢಪಟ್ಟಿತ್ತು.
.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...