ಸಲ್ಮಾನ್ ರಶ್ದಿ ಕೃತಿ ʼದಿ ಸಟಾನಿಕ್ ವರ್ಸಸ್ʼ ಆಮದು ನಿಷೇಧ ತೆರವುಗೊಳಿಸಿದ ದೆಹಲಿ ಹೈಕೋರ್ಟ್

Date:

ಲೇಖಕ ಸಲ್ಮಾನ್ ರಶ್ದಿ ಅವರ ಕೃತಿ ʼದಿ ಸಟಾನಿಕ್‌ ವರ್ಸಸ್‌ʼ ಆಮದನ್ನು ನಿಷೇಧಿಸುವ ಕಸ್ಟಮ್ಸ್‌ ಅಧಿಸೂಚನೆ ಈಗ ಅಸ್ತಿತ್ವದಲ್ಲಿಲ್ಲ ಎಂದು ಭಾವಿಸಬೇಕು ಎಂಬುದಾಗಿ ದೆಹಲಿ ಹೈಕೋರ್ಟ್‌ ಈಚೆಗೆ ತಿಳಿಸಿದೆ. ಪುಸ್ತಕದ ಆಮದನ್ನು ನಿಷೇಧಿಸುವ 1988 ರ ಅಧಿಸೂಚನೆಯನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯ ಈ ವಿಚಾರ ತಿಳಿಸಿದೆ.

ಪುಸ್ತಕ ಇಸ್ಲಾಮ್‌ ಧರ್ಮವನ್ನು ದೂಷಿಸುತ್ತದೆ ಎಂದು ಮುಸ್ಲಿಂ ಸಮುದಾಯದ ಸದಸ್ಯರು ನೀಡಿದ್ದ ದೂರಿನ ಆಧಾರದ ಮೇಲೆ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ 1988ರಲ್ಲಿ ಕೃತಿ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿತ್ತು. ಕಾನೂನು ಮತ್ತು ಸುವ್ಯವಸ್ಥೆಯ ಕಾರಣಗಳಿಗಾಗಿ ತೆಗೆದುಕೊಂಡ ನಿರ್ಧಾರವನ್ನು ವರ್ಷಗಳ ನಂತರ, ಕೇಂದ್ರದ ಮಾಜಿ ಸಚಿವ ಕೆ ನಟವರ್‌ ಸಿಂಗ್ ಸಮರ್ಥಿಸಿಕೊಂಡಿದ್ದರು.

ಅಧಿಕಾರಿಗಳು ಅಧಿಸೂಚನೆಯ ಪ್ರತಿ ಸಲ್ಲಿಸಲು ವಿಫಲವಾದ ಕಾರಣ, ನ್ಯಾಯಮೂರ್ತಿಗಳಾದ ರೇಖಾ ಪಲ್ಲಿ ಮತ್ತು ಸೌರಭ್ ಬ್ಯಾನರ್ಜಿ ಅವರಿದ್ದ ಪೀಠ ನವೆಂಬರ್ 5ರಂದು ನಿಷೇಧಕ್ಕಿರುವ ಮಾನ್ಯತೆ ತಿರಸ್ಕರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೇಲಿನ ಸನ್ನಿವೇಶಗಳ ಆಧಾರದಲ್ಲಿ, ಅಂತಹ ಯಾವುದೇ ಅಧಿಸೂಚನೆ ಅಸ್ತಿತ್ವದಲ್ಲಿಲ್ಲ ಎಂದು ಭಾವಿಸುವುದನ್ನು ಹೊರತುಪಡಿಸಿ ನಮಗೆ ಬೇರೆ ಆಯ್ಕೆಗಳಿಲ್ಲ, ಆದ್ದರಿಂದ, ನಾವು ನಿಷೇಧದ ಸಿಂಧುತ್ವ ಪರೀಕ್ಷಿಸಲು ಮತ್ತು ರಿಟ್ ಅರ್ಜಿ ನಿರುಪಯುಕ್ತವೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂಬುದಾಗಿ ನ್ಯಾಯಾಲಯ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ಪುಸ್ತಕ ನಿಷೇಧಿಸಿರುವ ಹಿನ್ನೆಲೆಯಲ್ಲಿ ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ 2019 ರಲ್ಲಿ ಶಾಂದಿಪಾನ್ ಖಾನ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅಧಿಸೂಚನೆಯ ಪ್ರತಿ ಯಾವುದೇ ಅಧಿಕೃತ ಜಾಲತಾಣದಲ್ಲಾಗಲೀ ಅಥವಾ ಯಾವುದೇ ಅಧಿಕಾರಿಗಳ ಬಳಿಯಾಗಲೀ ಲಭ್ಯವಿಲ್ಲ ಎಂದು ಅವರು ಹೇಳಿದ್ದರು. ಖಾನ್‌ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಗೃಹ ವ್ಯವಹಾರಗಳ ಸಚಿವಾಲಯ ಪುಸ್ತಕ ನಿಷೇಧಗೊಂಡಿರುವುದನ್ನು ದೃಢಪಡಿಸಿತ್ತು.

ಅಧಿಸೂಚನೆ ಅಸ್ತಿತ್ವದಲ್ಲಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡುವುದರೊಂದಿಗೆ, ಖಾನ್ ಭಾರತಕ್ಕೆ ಪುಸ್ತಕ ಆಮದು ಮಾಡಿಕೊಳ್ಳಲು ಅನುಮತಿ ದೊರೆತಿದೆ. ಅರ್ಜಿದಾರರು ಕಾನೂನು ಪ್ರಕಾರ ಪುಸ್ತಕಕ್ಕೆ ಸಂಬಂಧಿಸಿದಂತೆ ಎಲ್ಲ ಕ್ರಮ ಕೈಗೊಳ್ಳಲು ಅರ್ಹರು ಎಂದು ಪೀಠ ನುಡಿದಿದೆ.

ಹೈಕೋರ್ಟ್‌ನ ಈ ನಿರ್ಧಾರ ಪುಸ್ತಕದ ಆಮದಿನ ಮೇಲಿನ 36 ವರ್ಷಗಳ ಸುದೀರ್ಘ ನಿಷೇಧವನ್ನು ತೆಗೆದುಹಾಕುತ್ತದೆ. ಅರ್ಜಿದಾರರ ಪರ ವಕೀಲರಾದ ಉದ್ದಂ ಮುಖರ್ಜಿ ಮತ್ತು ಸ್ವಪ್ನಿಲ್ ಪಟ್ಟನಾಯಕ್ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಅನುರಾಗ್ ಓಜಾ, ಸುಭಮ್ ಕುಮಾರ್, ರವಿ ಪ್ರಕಾಶ್, ತಹಾ ಯಾಸಿನ್ ಮತ್ತು ಯಶಾರ್ಥ್ ಪ್ರತಿನಿಧಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...