ಉಪವಾಸ ಸತ್ಯಾಗ್ರಹ ವೇಳೆ ಹದಗೆಟ್ಟ ದೆಹಲಿ ಸಚಿವೆ ಅತಿಶಿ ಆರೋಗ್ಯ; ಆಸ್ಪತ್ರೆಗೆ ದಾಖಲು

Date:

ರಾಷ್ಟ್ರ ರಾಜಧಾನಿಗೆ ದಿನಕ್ಕೆ 100 ಮಿಲಿಯನ್ ಗ್ಯಾಲನ್ ನೀರು (ಎಂಜಿಡಿ) ಬಿಡುಗಡೆ ಮಾಡದೆ ನೀರಿನ ಬಿಕ್ಕಟ್ಟಿಗೆ ಕಾರಣವಾದ ಹರಿಯಾಣ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವ ಅತಿಶಿ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಮುಂಜಾನೆ ಅತಿಶಿ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಲೋಕನಾಯಕ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹರಿಯಾಣ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮಂಗಳವಾರ ಐದನೇ ದಿನದ ಉಪವಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯರು ಸೋಮವಾರ ಅತಿಶಿಯನ್ನು ಪರೀಕ್ಷೆ ಮಾಡಿದ್ದು, ಉಪವಾಸ ಸತ್ಯಾಗ್ರಹದಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕಾರಣ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು. ಆದರೆ ಅತಿಶಿ ದೆಹಲಿಯ ಜನರಿಗೆ ನೀರು ಸಿಗುವವರೆಗೂ ಉಪವಾಸ ಮಾಡುವುದಾಗಿ ಪ್ರತಿಜ್ಞೆ ಮಾಡಿ ತನ್ನ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದರು.

ಇದನ್ನು ಓದಿದ್ದೀರಾ?  ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆ; ಆದರೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುತ್ತೇನೆ: ಅತಿಶಿ

ಈ ಬಗ್ಗೆ ಸೋಮವಾರ ವಿಡಿಯೋ ಮೂಲಕ ಮಾಹಿತಿ ನೀಡಿದಿ ಅತಿಶಿ, ” ನಿನ್ನೆ ವೈದ್ಯರು ಬಂದು ನನ್ನನ್ನು ಪರೀಕ್ಷಿಸಿದರು. ನನ್ನ ಬಿಪಿ ಕಡಿಮೆಯಾಗಿದೆ, ನನ್ನ ಶುಗರ್ ಕಡಿಮೆಯಾಗಿದೆ ಎಂದು ಹೇಳಿದರು. ನಾನು ತೂಕವನ್ನು ಕಳೆದುಕೊಳ್ಳುತ್ತಿದ್ದೇನೆ, ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ. ಇದು ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನನ್ನ ದೇಹ ಎಷ್ಟೇ ನೋವಿನಲ್ಲಿದ್ದರೂ ಈ ಉಪವಾಸ ಮಾಡುವ ನನ್ನ ಸಂಕಲ್ಪ ಬಲವಾಗಿದೆ. ದೆಹಲಿಯ 28 ಲಕ್ಷ ಜನರಿಗೆ ನೀರು ಸಿಗುವವರೆಗೂ ನನ್ನ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಯಲಿದೆ” ಎಂದು ಹೇಳಿದ್ದರು.

ಇನ್ನು ಅತಿಶಿಯವರ ರಕ್ತದಲ್ಲಿನ ಸಕ್ಕರೆ ಮಟ್ಟವು ಮಧ್ಯರಾತ್ರಿ 43ಕ್ಕೆ ಕುಸಿದಿದೆ ಮತ್ತು 3 ಗಂಟೆಗೆ 36ಕ್ಕೆ ಇಳಿಯಿತು ಎಂದು ಎಎಪಿ ಹೇಳಿದೆ. ಎಎಪಿ ನಾಯಕರನ್ನು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಚಿತ್ರಗಳು ಮತ್ತು ದೃಶ್ಯಗಳನ್ನು ಎಎಪಿ ಹಂಚಿಕೊಂಡಿದೆ.

“ಅತಿಶಿ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು 36ಕ್ಕೆ ಕುಸಿದಿದೆ, ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. ಮಾಧ್ಯಮಗಳಿಗೂ ಇದೇ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...