ರಾಷ್ಟ್ರ ರಾಜಧಾನಿಗೆ ದಿನಕ್ಕೆ 100 ಮಿಲಿಯನ್ ಗ್ಯಾಲನ್ ನೀರು (ಎಂಜಿಡಿ) ಬಿಡುಗಡೆ ಮಾಡದೆ ನೀರಿನ ಬಿಕ್ಕಟ್ಟಿಗೆ ಕಾರಣವಾದ ಹರಿಯಾಣ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವ ಅತಿಶಿ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಮುಂಜಾನೆ ಅತಿಶಿ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಲೋಕನಾಯಕ ಜೈ ಪ್ರಕಾಶ್ (ಎಲ್ಎನ್ಜೆಪಿ) ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹರಿಯಾಣ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮಂಗಳವಾರ ಐದನೇ ದಿನದ ಉಪವಾಸವಾಗಿದೆ.
ಎಲ್ಎನ್ಜೆಪಿ ಆಸ್ಪತ್ರೆಯ ವೈದ್ಯರು ಸೋಮವಾರ ಅತಿಶಿಯನ್ನು ಪರೀಕ್ಷೆ ಮಾಡಿದ್ದು, ಉಪವಾಸ ಸತ್ಯಾಗ್ರಹದಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕಾರಣ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು. ಆದರೆ ಅತಿಶಿ ದೆಹಲಿಯ ಜನರಿಗೆ ನೀರು ಸಿಗುವವರೆಗೂ ಉಪವಾಸ ಮಾಡುವುದಾಗಿ ಪ್ರತಿಜ್ಞೆ ಮಾಡಿ ತನ್ನ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದರು.
ಇದನ್ನು ಓದಿದ್ದೀರಾ? ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆ; ಆದರೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುತ್ತೇನೆ: ಅತಿಶಿ
ಈ ಬಗ್ಗೆ ಸೋಮವಾರ ವಿಡಿಯೋ ಮೂಲಕ ಮಾಹಿತಿ ನೀಡಿದಿ ಅತಿಶಿ, ” ನಿನ್ನೆ ವೈದ್ಯರು ಬಂದು ನನ್ನನ್ನು ಪರೀಕ್ಷಿಸಿದರು. ನನ್ನ ಬಿಪಿ ಕಡಿಮೆಯಾಗಿದೆ, ನನ್ನ ಶುಗರ್ ಕಡಿಮೆಯಾಗಿದೆ ಎಂದು ಹೇಳಿದರು. ನಾನು ತೂಕವನ್ನು ಕಳೆದುಕೊಳ್ಳುತ್ತಿದ್ದೇನೆ, ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ. ಇದು ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನನ್ನ ದೇಹ ಎಷ್ಟೇ ನೋವಿನಲ್ಲಿದ್ದರೂ ಈ ಉಪವಾಸ ಮಾಡುವ ನನ್ನ ಸಂಕಲ್ಪ ಬಲವಾಗಿದೆ. ದೆಹಲಿಯ 28 ಲಕ್ಷ ಜನರಿಗೆ ನೀರು ಸಿಗುವವರೆಗೂ ನನ್ನ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಯಲಿದೆ” ಎಂದು ಹೇಳಿದ್ದರು.
ಇನ್ನು ಅತಿಶಿಯವರ ರಕ್ತದಲ್ಲಿನ ಸಕ್ಕರೆ ಮಟ್ಟವು ಮಧ್ಯರಾತ್ರಿ 43ಕ್ಕೆ ಕುಸಿದಿದೆ ಮತ್ತು 3 ಗಂಟೆಗೆ 36ಕ್ಕೆ ಇಳಿಯಿತು ಎಂದು ಎಎಪಿ ಹೇಳಿದೆ. ಎಎಪಿ ನಾಯಕರನ್ನು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಚಿತ್ರಗಳು ಮತ್ತು ದೃಶ್ಯಗಳನ್ನು ಎಎಪಿ ಹಂಚಿಕೊಂಡಿದೆ.
“ಅತಿಶಿ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು 36ಕ್ಕೆ ಕುಸಿದಿದೆ, ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. ಮಾಧ್ಯಮಗಳಿಗೂ ಇದೇ ಮಾಹಿತಿ ನೀಡಿದ್ದಾರೆ.
#WATCH | Delhi Health Minister Saurabh Bharadwaj says, “Her blood sugar levels had been dropping from the night. When we submitted her blood sample, her sugar levels came out to be 46. When we checked her sugar levels from a portable machine, her sugar levels came out to be 36…… https://t.co/CCFk08SPvB pic.twitter.com/Bbe6fNcuKr
— ANI (@ANI) June 24, 2024





