ನಮಾಝ್‌ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ ಅಮಾನತು: ಬಿಗಿ ಪೊಲೀಸ್ ಬಂದೋಬಸ್ತ್

Date:

ದೆಹಲಿಯ ಇಂದರ್ಲೋಕ್ ಪ್ರದೇಶದ ಬಳಿಯಲ್ಲಿರುವ ಮಸೀದಿ ಸಮೀಪ ರಸ್ತೆಯಲ್ಲಿ ‌ನಮಾಝ್‌ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ, ತಪ್ಪಿತಸ್ಥ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿರುವುದಾಗಿ ದೆಹಲಿಯ ಉತ್ತರ ವಿಭಾಗದ ಡಿಸಿಪಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಘಟನೆಯ ವಿಡಿಯೋ ವೈರಲಾದ ಬೆನ್ನಲ್ಲೇ ಆಕ್ರೋಶಿತ ಗುಂಪು, ಇಂದರ್ಲೋಕ್ ಪ್ರದೇಶದಲ್ಲಿರುವ ಮೆಟ್ರೋ ನಿಲ್ದಾಣದ ಸಮೀಪ ಜನರು ಸೇರಿ ಪ್ರತಿಭಟಿಸಿದರು. ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು, ಆಕ್ರೋಶಿತ ಗುಂಪಿನೊಂದಿಗೆ ಮಾತುಕತೆ ನಡೆಸಿ, ಸ್ಥಳದಿಂದ ತೆರಳುವಂತೆ ವಿನಂತಿಸಿದ ಬಳಿಕ ಎಲ್ಲರೂ ಸ್ಥಳದಿಂದ ತೆರಳಿದ್ದಾರೆ. ಪರಿಸ್ಥಿತಿ ಶಾಂತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿಯ ಉತ್ತರ ವಿಭಾಗದ ಡಿಸಿಪಿ ಮನೋಜ್ ಕುಮಾರ್ ಮೀನಾ, “ಘಟನೆಯ ವಿಡಿಯೋ ದೊರಕಿದೆ. ಈ ಮಾಹಿತಿಯ ಆಧಾರದ ಮೇಲೆ ತಪ್ಪಿತಸ್ಥ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ತೋಮರ್ ಅವರನ್ನು ಕೂಡಲೇ ಅಮಾನತು ಮಾಡಿದ್ದೇವೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು,ಶಿಸ್ತು ಕ್ರಮಕ್ಕೂ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಏನಿದು ಘಟನೆ?
ಶುಕ್ರವಾರದ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮಸೀದಿಯೊಂದರ ಬಳಿಯಲ್ಲಿರುವ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಬೂಟು ಕಾಲಿನಿಂದ ಒದ್ದ ಘಟನೆ ನಡೆದಿದೆ.

ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಪೊಲೀಸ್ ಅಧಿಕಾರಿ ಸ್ಥಳಕ್ಕೆ ಬಂದಾಗ ಜನರ ಗುಂಪು ರಸ್ತೆಯಲ್ಲಿ ಬಟ್ಟೆ ಹಾಕಿ, ನಮಾಝ್ ಮಾಡುತ್ತಿದ್ದರು. ಈ ವೇಳೆ ಅವರನ್ನು ಎದ್ದೇಳಿಸಲು ಯತ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ | ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಬೂಟು ಕಾಲಿನಿಂದ ಒದ್ದ ಪೊಲೀಸ್; ವಿಡಿಯೋ ವೈರಲ್

ಈ ವೇಳೆ ಪೊಲೀಸ್ ಅಧಿಕಾರಿ ಬೂಟು ಕಾಲಿನಿಂದ ಒದ್ದಿದ್ದಾರೆ. ಇದಾದ ಕೂಡಲೇ ಅಲ್ಲಿದ್ದ ಮಂದಿ ಆಕ್ಷೇಪ ಎತ್ತಿದ್ದು, ಕಾನ್‌ಸ್ಟೆಬಲ್ ಮತ್ತು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ಕೂಡ ನಡೆದಿದೆ.

ಘಟನೆಗೆ ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಆಕ್ರೋಶ

ಈ ಘಟನೆಯ ಬಗ್ಗೆ ವಿಡಿಯೋ ಹಂಚಿಕೊಂಡು ಟ್ವೀಟ್ ಮಾಡಿರುವ ಹಿರಿಯ ಪತ್ರಕರ್ತ ರವೀಶ್ ಕುಮಾರ್, “ಇದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ದ್ವೇಷದ ರಾಜಕಾರಣದ ವಿಷ ಪೊಲೀಸರನ್ನೂ ತಲುಪಿದೆ. ಕೇವಲ ಕ್ರಮವಷ್ಟೇ ಸಾಲದು. ಪೊಲೀಸರೊಳಗಿರುವ ಯಾವುದೇ ರೀತಿಯ ಕೋಮುವಾದವನ್ನು ಹೋಗಲಾಡಿಸುವ ಪ್ರಯತ್ನಗಳಾಗಬೇಕು. ನಾವು ಎಲ್ಲಿಗೆ ಬಂದು ಮುಟ್ಟಿದ್ದೇವೆ. ಈ ದ್ವೇಷಕ್ಕೆ ರಾಜ್ಯ ಮತ್ತು ಮಾಧ್ಯಮಗಳ ರಕ್ಷಣೆ ಸಿಕ್ಕಿದೆ. ಆದ್ದರಿಂದ ಈ ದ್ವೇಷದ ವಿರುದ್ಧ ಹೋರಾಡುವುದು ಅಸಾಧ್ಯವಾಗುತ್ತಿದೆ. ದೆಹಲಿ ಪೊಲೀಸರು ಈ ಹಿಂದೆ ಈ ರೀತಿಯಲ್ಲಿ ಇರಲಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...