ದೆಹಲಿ | ಕೆಂಪು ಕೋಟೆ ಸ್ಫೋಟದ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

Date:

ದೆಹಲಿಯ ಕೆಂಪು ಕೋಟೆ ಬಳಿ ನಡೆದಿದ್ದ ಸ್ಫೋಟಕ್ಕೆ ಬಲಿಯಾದ ಮತ್ತು ತೀವ್ರ ಹಾನಿ ಅನುಭವಿಸಿದ್ದ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ದೆಹಲಿ ಸರ್ಕಾರ ಘೋಷಿಸಿದ್ದ ಪರಿಹಾರ ಇನ್ನೂ ದೊರೆತಿಲ್ಲವೆಂದು ವರದಿಯಾಗಿದೆ. ಘಟನೆ ನಡೆದು ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ, ತನ್ನ ಭರವಸೆಯಂತೆ ಪರಿಹಾರ ನೀಡುವಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.

ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಕಾರೊಂದು ಸ್ಫೋಟಗೊಂಡು ಕನಿಷ್ಟ 13 ಮಂದಿ ಸಾವನ್ನಪ್ಪಿದ್ದಾರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಯಿಂದಾಗಿ ಹಲವಾರು ವಾಹನಗಳೂ ಬೆಂಕಿಗೆ ಆಹುತಿಯಾಗಿದ್ದವು. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆ ನಡೆಸುತ್ತಿದೆ.

ಘಟನೆ ಸಂಭವಿಸಿದಾಗ, ರೇಖಾ ಗುಪ್ತಾ ನೇತೃತ್ವದ ಬಿಜೆಪಿ ಸರ್ಕಾರವು ಸ್ಫೋಟದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 10 ಲಕ್ಷ ರೂ., ಶಾಶ್ವತ ಅಂಗವಿಕಲತೆಗೆ ಗುರಿಯಾದ ಸಂತ್ರಸ್ತರಿಗೆ 5 ಲಕ್ಷ ರೂ., ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 20,000 ರೂ. ಪರಿಹಾರ ನೀಡುವುದಾಗಿ ಘೋಷಿಸಿತ್ತು. ಆದರೆ, ಒಂದೂವರೆ ತಿಂಗಳುಗಳ ಕಳೆದರೂ ಇನ್ನೂ ಸಂತ್ರಸ್ತರಿಗೆ ಪರಿಹಾರ ದೊರೆತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಫೋಟದಿಂದ ಮೃತಪಟ್ಟವರಲ್ಲಿ ಹಲವರು ತಮ್ಮ ಕುಟುಂಬಗಳ ಏಕೈಕ ಜೀವನಾಧಾರವಾಗಿದ್ದರು. ಅವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಪರಿಹಾರ ದೊರೆಯದೇ ಇರುವುದು, ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಈ ಲೇಖನ ಓದಿದ್ದೀರಾ?: ರಕ್ಷಣಾ ಕ್ಷೇತ್ರಕ್ಕೂ ‘ಮೋದಿ ಮಿತ್ರ’ನ ಲಗ್ಗೆ: ದೇಶದ ಗಡಿ ಕಾಯುವ ಹೊಣೆ ಇನ್ನು ‘ಅದಾನಿ’ ಪಾಲು!

ಸ್ಫೋಟದಲ್ಲಿ ಸಾವನ್ನಪ್ಪಿದವರಲ್ಲಿ ನೌಮನ್ ಅನ್ಸಾರಿ ಕೂಡ ಒಬ್ಬರು. ಅವರ ಮರಣದಿಂದ ಇಡೀ ಕುಟುಂಬ ಖಿನ್ನತೆಗೆ ಒಳಗಾಗಿದೆ ಎಂದು ಅನ್ಸಾರಿ ಅವರ ಚಿಕ್ಕಪ್ಪ ಮೆಹಬೂಬ್ ಅನ್ಸಾರಿ ಹೇಳಿದ್ದಾರೆ. “ಪರಿಹಾರಕ್ಕಾಗಿ ದೆಹಲಿಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ (SDM) ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದೇವೆ. ಆದರೂ, ಈವರೆಗೆ ಯಾವುದೇ ಪರಿಹಾರ ದೊರೆತಿಲ್ಲ. ದುಡಿಮೆಯಿಲ್ಲದೆ, ಅವರ ಕುಟುಂಬವು ಸಂಕಷ್ಟದಲ್ಲಿದೆ. ನಾವು ಸಾಧ್ಯವಾದಷ್ಟು ನೆರವು ನೀಡುತ್ತಿದ್ದೇವೆ” ಎಂದು ಮೆಹಬೂಬ್ ಹೇಳಿದ್ದಾರೆ.

ಅದೇ ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಪುರೋಹಿತ ವಿನಯ್ ಪಾಠಕ್ (50) ಕೂಡ ಒಬ್ಬರು. ಅವರ ಮಗ ಅನೀದ್ ಪಾಠಕ್ ಹೇಳುವಂತೆ, “ತನ್ನ ತಂದೆಯ ಮರಣದಿಂದ ನನ್ನ ತಾಯಿಯ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಕುಟುಂಬವು ದುಃಖವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಅಗತ್ಯವಿರುವ ಎಲ್ಲ ದಾಖಲೆಗಳನ್ನು ಒದಗಿಸಿದಾಗ ಶೀಘ್ರವೇ ಪರಿಹಾರ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ, ಈವರೆಗೆ ಏನೂ ದೊರೆತಿಲ್ಲ” ಎಂದಿದ್ದಾರೆ.

ಪ್ರತಿಕ್ರಿಯೆ ಕೇಳಿ ‘ದಿ ಹಿಂದು’ ಪತ್ರಿಕೆಯು ಮುಖ್ಯಮಂತ್ರಿ ಕಚೇರಿಯನ್ನು (CMO) ಸಂಪರ್ಕಿಸಿದೆ. ಆದರೆ, ಕಚೇರಿಯು ಯಾಔಉದೇ ಪ್ರತಿಕ್ರಿಯೆ ನೀಡಲಾಗಿಲ್ಲ ಎಂದು ಪತ್ರಿಕೆ ವರದಿ ಮಾಡಿದೆ. ಆದಾಗ್ಯೂ, ಈವರೆಗೆ 11 ಸಂತ್ರಸ್ತರಿಗೆ ಪರಿಹಾಋದ ಹಣ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲವೊಂದು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...