ದೆಹಲಿ ಗಲಭೆ | ‘ಕೊಲೆ ಪ್ರಕರಣಕ್ಕೆ ವಾಟ್ಸ್‌ಆ್ಯಪ್ ಚಾಟ್‌ಗಳು ಸಮರ್ಪಕ ಸಾಕ್ಷ್ಯವಲ್ಲ’ ಎಂದ ಕೋರ್ಟ್‌; ಹಿಂದುತ್ವವಾದಿಗಳ ಖುಲಾಸೆ

Date:

ಕೊಲೆಗಳಂತಹ ಗಂಭೀರ ಪ್ರಕರಣಗಳಿಗೆ ವಾಟ್ಸ್‌ಆ್ಯಪ್ ಚಾಟ್‌ಗಳು ‘ಸಮರ್ಪಕ ಸಾಕ್ಷ್ಯ’ಗಳಾಗಲು ಸಾಧ್ಯವಿಲ್ಲ. ಅಂತಹ ಚಾಟ್‌ಗಳನ್ನು ಕೇವಲ ‘ದೃಢೀಕರಣದ ಪುರಾವೆ’ಗಳಾಗಿ ಮಾತ್ರವೇ ಬಳಸಬಹುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ.

2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ 9 ಕೊಲೆ ಪ್ರಕರಣಗಳ ಪೈಕಿ 5 ಪ್ರಕರಣಗಳ ವಿಚಾರಣೆಯನ್ನು ಕಾರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ನಡೆಸಿದ್ದಾರೆ. ವಾಟ್ಸ್‌ಆ್ಯಪ್ ಚಾಟ್‌ಗಳು ಸಮರ್ಪಕ ಸಾಕ್ಷ್ಯಗಳಲ್ಲ ಎಂದಿದ್ದು, ಆರೋಪಿಗಳನ್ನು ಖಲಾಸೆಗೊಳಿಸಿದ್ದಾರೆ.

ವಿಚಾರಣೆ ನಡೆದ ಐದು ಪ್ರಕರಣಗಳಲ್ಲಿ 12 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಅದಕ್ಕೆ ಪ್ರಧಾನ ಸಾಕ್ಷ್ಯವಾಗಿ ವಾಟ್ಸ್‌ಆ್ಯಪ್ ಚಾಟ್‌ಗಳನ್ನು ಪ್ರಾಸಿಕ್ಯೂಷನ್‌ ನ್ಯಾಯಾಲಯದ ಮುಂದಿರಿಸಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಐದು ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ‘ಕಟ್ಟರ್ ಹಿಂದು ಏಕ್ತಾ’ ಎಂಬ ವಾಟ್ಸ್‌ಆ್ಯಪ್ ಗುಂಪಿನ ಚಾಟ್‌ಗಳನ್ನು ಪುರಾವೆಗಳಾಗಿ ಪರಿಗಣಿಸಿದ್ದಾರೆ. ಇವೇ ಚಾಟ್‌ಗಳ ಆಧಾರದ ಮೇಲೆ ಚಾರ್ಜ್‌ಶೀಟ್‌ಅನ್ನೂ ಸಲ್ಲಿಸಿದ್ದರು.

ಈ ಲೇಖನ ಓದಿದ್ದೀರಾ?: ವಿಚಾರಣೆಯೂ ಇಲ್ಲ – ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಉಮರ್ ಖಾಲಿದ್

ದೆಹಲಿ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಆರೋಪಿಗಳಲ್ಲಿ ಒಬ್ಬರಾದ ಲೋಕೇಶ್ ಸೋಲಂಕಿ ಅವರು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ‘ನಿಮ್ಮ ಸಹೋದರ 9 ಗಂಟೆಗೆ 2 ಮುಸ್ಲಿಂ ಪುರುಷರನ್ನು ಕೊಂದಿದ್ದಾನೆ’ ಎಂಬ ಸಂದೇಶವನ್ನು ಹಂಚಿಕೊಂಡಿದ್ದರು. ಆ ಮೆಸೇಜ್‌ ಆಧರಿಸಿ ಸೋಲಂಕಿ ಅವರನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿತ್ತು. ಅವರ ಹೇಳಿಕೆಗಳ ಆಧಾರದ ಮೇಲೆ ಇತರ 8 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ವಿವರಿಸಲಾಗಿದೆ ಎಂದು ವರದಿಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು, “ವಾಟ್ಸ್‌ಆ್ಯಪ್ ಗುಂಪಿನ ಇತರ ಸದಸ್ಯರ ಎದುರು ಹೀರೋ ಆಗುವ ಉದ್ದೇಶದಿಂದ ಮಾತ್ರ ಅಂತಹ ಪೋಸ್ಟ್‌ಗಳನ್ನು ಗುಂಪಿನಲ್ಲಿ ಹಂಚಿಕೊಳ್ಳಬಹುದು. ಅದು ಸತ್ಯವಲ್ಲದೆ, ಹಿರಿಮೆಯ ಭಾಗವೂ ಆಗಿರಬಹುದು. ಆದ್ದರಿಂದ, ಆರೋಪಿಯು ಇಬ್ಬರು ಮುಸ್ಲಿಮರನ್ನು ಕೊಂದಿದ್ದಾನೆ ಎಂದು ವಾದಿಸಲು ಬಳಸಲಾಗಿರುವ ವಾಟ್ಸ್‌ಆ್ಯಪ್ ಚಾಟ್‌ಗಳು ಗಣನೀಯ ಪುರಾವೆಯಾಗಲು ಸಾಧ್ಯವಿಲ್ಲ. ಈ ಚಾಟ್‌ಗಳನ್ನು ದೃಢೀಕರಣ ಸಾಕ್ಷ್ಯವಾಗಿ ಮಾತ್ರವೇ ಬಳಸಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ. ಆರೋಪಿಗಳನ್ನು ದೋಷಮುಕ್ತರೆಂದು ಘೋಷಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಹಾರೋಹಳ್ಳಿ | ಬನವಾಸಿಯಲ್ಲಿ ಅಸ್ಪೃಶ್ಯತೆ ಆಚರಣೆ: ರಾಜಿ, ಮಾತುಕತೆ ನೆಪದಲ್ಲಿ ಆರೋಪಿಗಳ ರಕ್ಷಣೆ

ಇದಕ್ಕೂ ಮೊದಲು, ಏಪ್ರಿಲ್ 30ರಂದು ನ್ಯಾಯಾಲಯವು ನೀಡಿದ ಮತ್ತೊಂದು ತೀರ್ಪಿನಲ್ಲಿ, ಹಾಶಿಮ್ ಅಲಿ ಎಂಬಾತನ ಕೊಲೆ ಪ್ರಕರಣದಲ್ಲಿ ಕೊಲೆಗೆ ಯಾವುದೇ ಪ್ರತ್ಯಕ್ಷದರ್ಶಿಗಳು ಇರಲಿಲ್ಲ ಎಂಬುದನ್ನು ಪರಿಗಣಿಸಿ 12 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಅಂದಿನ ತೀರ್ಪಿನ ವೇಳೆಯೂ, “ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ವಾಟ್ಸ್‌ಆ್ಯಪ್ ಚಾಟ್‌ಗಳನ್ನು ಏಕೈಕ ಆಧಾರವೆಂದು ರೂಪಿಸಲು ಸಾಧ್ಯವಿಲ್ಲ. ಸಾಕ್ಷ್ಯಗಳು ಸ್ವತಂತ್ರ, ವಿಶ್ವಾಸಾರ್ಹವಾಗಿರಬೇಕು” ಎಂದು ನ್ಯಾಯಾಲಯ ಹೇಳಿತ್ತು.

ಗಮನಾರ್ಹ ಸಂಗತಿ ಎಂದರೆ, ಇದೇ 2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ. ಖಾಲಿದ್ ಬಂಧನಕ್ಕೂ ಪ್ರಮುಖ ಸಾಕ್ಷ್ಯವಾಗಿ ‘ವಾಟ್ಸ್‌ಆ್ಯಪ್ ಚಾಟ್‌’ಗಳನ್ನೇ ಉಲ್ಲೇಖಿಸಲಾಗಿದೆ. ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವರು ಮತ್ತು ಇತರ ಆರೋಪಿಗಳು ನಡೆಸಿರುವ ಚಾಟ್‌ಗಳನ್ನೇ ಆಧರಿಸಿ, ಖಾಲಿದ್ ಮತ್ತು ಇತರರರು ಗಲಭೆಗೆ ಸಂಚು ರೂಪಿಸಿದ್ದರೆಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದಾಗ್ಯೂ, ಆ ಚಾಟ್‌ಗಳು ಗಲಭೆಗೆ ನೇರವಾಗಿ ಸಂಬಂಧಿಸಿಲ್ಲವೆಂದು ಖಾಲಿದ್‌ ಪರ ವಕೀಲರು ವಾದಿಸಿದ್ದಾರೆ. ಆದರೂ, ಕಳೆದ ನಾಲ್ಕೂವರೆ ವರ್ಷಗಳಿಂದ ಖಾಲಿದ್‌ ಜೈಲಿನಲ್ಲಿಯೇ ಇದ್ದಾರೆ. ಖಾಲಿದ್ ಪ್ರಕರಣ ಖುಲಾಸೆ ಯಾಗುವುದಿರಲಿ, ಅವರಿಗೆ ಜಾಮೀನು ಕೂಡ ದೊರೆತಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...