‘ಸಮಾನ ಕೆಲಸಕ್ಕೆ ಸಮಾನ ವೇತನ’ಕ್ಕೆ ಆಗ್ರಹ; 11ನೇ ದಿನಕ್ಕೆ ಶಿಕ್ಷಕರ ಪ್ರತಿಭಟನೆ

Date:

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ನೀಡಲಾಗುತ್ತಿರುವ ವೇತನದಲ್ಲಿನ ತಾರತಮ್ಯದ ವಿರುದ್ಧ ತಮಿಳುನಾಡಿನ ಶಾಲಾ ಶಿಕ್ಷಕರು ಬೀದಿಗಿಳಿದಿದ್ದಾರೆ. ‘ಸಮಾನ ಕೆಲಸಕ್ಕೆ ಸಮಾನ ವೇತನ’ ನೀಡಬೇಕೆಂದು ಅಗ್ರಹಿಸಿ ನಡೆಯುತ್ತಿರುವ ಶಿಕ್ಷಕರ ಹೋರಾಟವು 11ನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪ್ರತಿಭಟನಾನಿರತ ‘ಮಾಧ್ಯಮಿಕ ದರ್ಜೆಯ ಹಿರಿಯ ಶ್ರೇಣಿ ಶಿಕ್ಷಕರ ಸಂಘ’ದ (ಎಸ್‌ಎಸ್‌ಟಿಎ) ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಆದಾಗ್ಯೂ, ಪ್ರತಿಭಟನೆಯನ್ನು ಮುಂದುವರೆಸಿರುವ ಶಿಕ್ಷಕರು, “ಎರಡು ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸಬೇಕು. ಮುಖ್ಯವಾಗಿ ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಯನ್ನು ಅನುಷ್ಠಾನಕ್ಕೆ ತರಬೇಕು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಅರ್ಧವಾರ್ಷಿಕ ರಜೆಗಳು ಮುಗಿದಿದ್ದು, ಶಾಲೆಗಳು ತೆರೆದಿವೆ. ಶಿಕ್ಷಕರು ಪ್ರತಿಭಟನೆಯಲ್ಲಿದ್ದಾರೆ. 10,000 ಕ್ಕೂ ಹೆಚ್ಚು ಶಿಕ್ಷಕರು ಶಾಲೆಗಳಿಗೆ ಹಾಜರಾಗಲಿಲ್ಲ. ಸರ್ಕಾರವು ನಮ್ಮ ಬೇಡಿಕೆಯನ್ನು ತ್ವರಿತವಾಗಿ ಪೂರೈಸಬೇಕು. ಇಲ್ಲವಾದಲ್ಲಿ, ಶಾಲೆಗಳ ಕಾರ್ಯಾಚರಣೆಗೆ ತೊಡಲಾಗಲಿದೆ ಎಂದು ಶಿಕ್ಷಕರ ಸಂಘವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕರು ಹೇಳುವಂತೆ; 2009ರ ಜೂನ್‌ 1ಕ್ಕೂ ಮೊದಲ ನೇಮಕಕೊಂಡ ಮಾಧ್ಯಮಿಕ ಶ್ರೇಣಿಯ ಶಿಕ್ಷಕರಿಗೆ 8,370 ರೂ. ಮೂಲ ವೇತನವನ್ನು ನೀಡಲಾಗಿದೆ. ಆದರೆ, ಆ ಕಟ್‌-ಆಫ್‌ ದಿನ (2009ರ ಜೂನ್‌) ನಂತರ ನೇಮಕಗೊಂಡ ಶಿಕ್ಷಕರು ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ, ಅವರಿಗೆ ಕೇವಲ 5,200 ರೂ. ಮಾತ್ರವೇ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮಾಧ್ಯಮಿಕ ಶ್ರೇಣಿಯ ಶಿಕ್ಷಕರಿಗೆ ಅತ್ಯಂತ ಕಡಿಮೆ ವೇತನ ನೀಡುವ ರಾಜ್ಯಗಳಲ್ಲಿ ತಮಿಳುನಾಡು ಕೂಡ ಒಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...