ಊಟ ನೀಡಿಲ್ಲವೆಂದು ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಪಾನಮತ್ತ ಚಾಲಕ: ವಿಡಿಯೋ ವೈರಲ್

Date:

ವ್ಯಕ್ತಿಯೋರ್ವನಿಗೆ ಪುಣೆಯ ಹೋಟೆಲ್‌ವೊಂದರಲ್ಲಿ ಊಟ ನೀಡಲು ನಿರಾಕರಿಸಲಾಗಿದ್ದು ಅದರಿಂದ ಪಾನಮತ್ತ ಚಾಲಕ ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ ವಿಡಿಯೋವನ್ನು ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ ವಿಡಿಯೋವನ್ನು ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾನಮತ್ತ ಚಾಲಕ ಪದೇ ಪದೇ ತನ್ನ ಟ್ರಕ್‌ ಅನ್ನು ಹೊಟೇಲ್‌ ಕಟ್ಟಡಕ್ಕೆ ನುಗ್ಗಿಸುತ್ತಿರುವುದು ಕಾಣಬಹುದು. ಹೋಟೆಲ್‌ಗೆ ಹಾನಿ ಮಾಡಿರುವುದು ಮಾತ್ರವಲ್ಲದೇ ಈ ಟ್ರಕ್ ಚಾಲಕ ಹೋಟೆಲ್ ಹೊರಗೆ ನಿಲ್ಲಸಿದ್ದ ಕಾರಿಗೂ ಡಿಕ್ಕಿ ಹೊಡೆದಿದ್ದಾರೆ.

ವರದಿಗಳ ಪ್ರಕಾರ, ಚಾಲಕ ಸೊಲ್ಲಾಪುರದಿಂದ ಪುಣೆಗೆ ಪ್ರಯಾಣಿಸುತ್ತಿದ್ದು ಹೋಟೆಲ್ ಗೋಕುಲ್‌ನಲ್ಲಿ ನಿಲ್ಲಿಸಿ ಹೋಟೆಲ್ ಒಳಗೆ ಹೋಗಿ ಆಹಾರವನ್ನು ಕೇಳಿದ್ದ.

ಇದನ್ನು ಓದಿದ್ದೀರಾ? ಬೆಂಗಳೂರು | ಮಹಿಳೆ ಮೇಲೆ ಆಟೋ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

ಆದರೆ ಹೋಟೆಲ್ ಮಾಲೀಕರು ಊಟ ಕೊಡಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಚಾಲಕ ತನ್ನ ಲಾರಿಯಲ್ಲಿ ಕುಳಿತು ಹೋಟೆಲ್ ಕಟ್ಟಡಕ್ಕೆ ಹಾನಿ ಮಾಡಿದ್ದಾನೆ.

ಚಾಲಕನನ್ನು ತಡೆಯಲು ಕೆಲವರು ಟ್ರಕ್‌ಗೆ ಕಲ್ಲು ತೂರಾಟ ಮಾಡುತ್ತಿರುವುದು ಕೂಡಾ ವಿಡಿಯೋದಲ್ಲಿ ನೋಡಬಹುದು. ಟ್ರಕ್‌ನ ಚಕ್ರವು ಸಿಲುಕಿ ಟ್ರಕ್ ಅಲ್ಲಾಡದಿದ್ದಾಗ ಕೊನೆಗೆ ಚಾಲಕ ಹೋಟೆಲ್‌ಗೆ ಹಾನಿ ಮಾಡುವುದನ್ನು ನಿಲ್ಲಿಸಿದ್ದಾನೆ.

ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕ ಪಾನಮತ್ತನಾಗಿದ್ದ ಕಾರಣ ಹೋಟೆಲ್‌ನಲ್ಲಿ ಊಟ ನೀಡಲು ನಿರಾಕರಿಸಲಾಗಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ತಿಳಿದುಬಂದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...