ಒಡಿಶಾ ವಿಧಾನಸಭೆ ಚುನಾವಣೆ | ಬಿಜೆಪಿ ಮುನ್ನಡೆ; ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆ

Date:

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲೇ ನಡೆದಿದ್ದು, ಇಂದು ಎರಡು ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 147 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 21 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸದ್ಯ, ವಿಧಾನಸಭೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಬಿಜೆಡಿ ಹಿನ್ನಡೆ ಅನುಭವಿಸುತ್ತಿದೆ.

ಒಡಿಶಾದಲ್ಲಿ ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆಯಾಗಿದೆ. 147 ಸದಸ್ಯ ಬಲದ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 34ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಬಿಜೆಡಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಮೂಲಕ ಸೋಲಿನ ಭೀತಿ ಎದುರಿಸುತ್ತಿದೆ. ಕಾಂಗ್ರೆಸ್‌‍ 5 ಸ್ಥಾನಗಳಲ್ಲಿ ಗೆಲುವಿನ ಹಾದಿಯಲ್ಲಿದೆ. ಸಿಪಿಎಂ ಪಕ್ಷ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಘಾಸಿಪುರದಲ್ಲಿ ಸ್ವತಂತ್ರ ಅಭ್ಯರ್ಥಿ ಸೌಮ್ಯ ರಂಜನ್ ಪಟ್ನಾಯಕ್ ಕೂಡ ಮುಂದಿದ್ದಾರೆ. ಬಿಜೆಪಿ-ಟಿಡಿಪಿ ಮೈತ್ರಿಯು ಅಂಚೆ ಮತಪತ್ರ ಮತಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿಯ ಭದ್ರಕೋಟೆಯಾಗಿದ್ದು, ಬಿಜೆಪಿಯು ವಿಧಾನಸಭೆ ಚುನಾವಣೆಗಳಲ್ಲಿ ಗಮನಾರ್ಹ ಲಾಭವನ್ನು ಗಳಿಸಲು ಪ್ರಯತ್ನಿಸುತ್ತಿರುವುದರಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಬಾರಿ ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಸಮೀಕ್ಷೆಗಳು ಹೇಳಿವೆ.

ಇಂಡಿಯಾ ಟುಡೇ ಮತ್ತು ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ, ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 62 ರಿಂದ 80 ಸ್ಥಾನ ಪಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿ 50ರಿಂದ 60 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಜೆಪಿ ಭದ್ರಕೋಟೆಗಳನ್ನು ಭೇದಿಸುವುದೇ ಕಾಂಗ್ರೆಸ್‌?

ಕಾಂಗ್ರೆಸ್‌ ಪಕ್ಷ 5ರಿಂದ 8 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಉಲ್ಲೇಖಿಸಿದೆ. ಬಿಜೆಪಿಯ ಮತ ಪ್ರಮಾಣ ಶೇ.42ರಷ್ಟು ಹೆಚ್ಚಳವಾಗಲಿದ್ದು, ಬಿಜೆಡಿ ಮತ ಪ್ರಮಾಣ ಶೇ.42ರಷ್ಟು ಕುಸಿಯಲಿದ್ದು, ಕಾಂಗ್ರೆಸ್‌ ಕೇವಲ ಶೇ.12ರಷ್ಟು ಮತ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

2019ಒಡಿಶಾ ವಿಧಾನಸಭಾ ಚುನಾವಣೆ

2019ರಲ್ಲಿ ನಡೆದ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾ ದಳ 147 ಸದಸ್ಯಬಲದಲ್ಲಿ 112 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ 23 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. 2024ರ ಲೋಕಸಭೆ ಚುನಾವಣೆ ಹಾಗೂ ಒಡಿಶಾ ವಿಧಾನಸಭೆ ಚುನಾವಣಾ ಫಲಿತಾಂಶ ಜೂನ್‌ 4ರಂದು ಬಹಿರಂಗವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...