ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ದೇವಸ್ವಂ ಅಧಿಕಾರಿ ಅಮಾನತು

Date:

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಹಿರಿಯ ಅಧಿಕಾರಿಯನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ. 2019ರಲ್ಲಿ ಬೆಂಗಳೂರು ಮೂಲದ ಮಲಯಾಳಿ ಉನ್ನಿಕೃಷ್ಣನ್ ಪೊಟ್ಟಿ ಅವರಿಗೆ ಚಿನ್ನದ ಲೇಪನಕ್ಕಾಗಿ ಚಿನ್ನ ಲೇಪಿತ ತಾಮ್ರ ಹಸ್ತಾಂತರಿಸುವಾಗ ತಾಮ್ರವೆಂದೇ ಉಲ್ಲೇಖಿಸಿದ ಆರೋಪದ ಮೇಲೆ ಉಪ ದೇವಸ್ವಂ ಆಯುಕ್ತ ಬಿ ಮುರಾರಿ ಬಾಬು ಅವರನ್ನು ಅಮಾನತುಗೊಳಿಸಲಾಗಿದೆ.

ಈ ಪ್ರಕರಣ ನಡೆದ ಸಂದರ್ಭದಲ್ಲಿ ಬಾಬು ಅವರು ಆಡಳಿತ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ‘ದ್ವಾರಪಾಲಕ’ (ರಕ್ಷಕ) ವಿಗ್ರಹಗಳ ಚಿನ್ನ ಲೇಪಿತ ತಾಮ್ರವನ್ನು ಬರೀ ತಾಮ್ರವೆಂದು ಉಲ್ಲೇಖಿಸಲಾಗಿದೆ. ಇದರಲ್ಲಿ ಅಧಿಕಾರಿಯ ಗಂಭೀರ ಲೋಪವಿದೆ ಎಂದು ಮಂಗಳವಾರ ನಡೆದ ದೇವಸ್ವಂ ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನು ಓದಿದ್ದೀರಾ? ಹಾವೇರಿ | ಮಿನಿಬಸ್ ಅಪಘಾತ; ಶಬರಿಮಲೆಗೆ ತೆರಳುತ್ತಿದ್ದ ಹಲವರಿಗೆ ಗಾಯ, ಓರ್ವ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗರ್ಭಗುಡಿಯ ಬಾಗಿಲಿನ ಎರಡೂ ಬದಿಯಲ್ಲಿರುವ ‘ದ್ವಾರಪಾಲಕ’ ವಿಗ್ರಹಗಳಿಗೆ ತೆಳುವಾದ ಚಿನ್ನದ ಲೇಪನವನ್ನು ಮಾತ್ರ ಹಾಕಲಾಗಿತ್ತು. 1998ರಲ್ಲಿ ಕೈಗಾರಿಕೋದ್ಯಮಿ ವಿಜಯ್ ಮಲ್ಯ ಅವರ ಪ್ರಾಯೋಜಕತ್ವದಲ್ಲಿ ಗರ್ಭಗುಡಿಗೆ ಚಿನ್ನ ಲೇಪಿಸಲಾಗಿತ್ತು. ಅದು ಸವೆದುಹೋಗಿ ಬರೀ ತಾಮ್ರದ ತಟ್ಟೆ ಮಾತ್ರ ಉಳಿದಿತ್ತು. ಮೂಲ ಲೋಹ ತಾಮ್ರವಾಗಿರುವ ಕಾರಣದಿಂದಾಗಿ ತಾಮ್ರವೆಂದೇ ಉಲ್ಲೇಖಿಸಲಾಗಿದೆ” ಎಂದು ಬಾಬು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಆದರೆ ಈ ನಡುವೆ ಚಿನ್ನದ ಲೇಪನದ ದುರುಪಯೋಗ ಮಾಡಿದ ಅನುಮಾನ ವ್ಯಕ್ತವಾಗಿದೆ. 1998ರಲ್ಲಿ ಬಾಗಿಲುಗಳಿಗೂ ಚಿನ್ನದ ಲೇಪನ ಮಾಡಲಾಗಿದ್ದರೂ, ಬಾಗಿಲು ಬಿರುಕುಬಿಟ್ಟ ಕಾರಣ 2019ರಲ್ಲಿ ದೇವಾಲಯಕ್ಕೆ ಹೊಸ ಚಿನ್ನದ ಲೇಪಿತ ಬಾಗಿಲುಗಳನ್ನು ಮಾಡಲಾಗಿತ್ತು. ಆದರೆ ಇಲ್ಲಿ ಚಿನ್ನ ನಾಪತ್ತೆಯಾಗಿದೆ ಎಂದು ಸದ್ಯ ವಿರೋಧ ಪಕ್ಷಗಳು ಆರೋಪಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...