ಸಿಬಿಐ ನಿರ್ದೇಶಕರಾಗಿ ನೇಮಕರಾದ ಡಿಜಿಪಿ ಪ್ರವೀಣ್‌ ಸೂದ್‌

Date:

  • ಡಿಜಿಪಿ ಪ್ರವೀಣ್‌ ಸೂದ್‌ 1986ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ
  • ಮೇ 25ಕ್ಕೆ ಹಾಲಿ ಸಿಬಿಐ ನಿರ್ದೇಶಕರ ಅಧಿಕಾರಾವಧಿ ಮುಕ್ತಾಯ

ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್‌ ಸೂದ್‌ ಕೇಂದ್ರ ತನಿಖಾ ದಳದ (ಸಿಬಿಐ) ಮುಂದಿನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಈಗಿನ ಸಿಬಿಐ ನಿರ್ದೇಶಕ ಸುಬೋಧ್‌ ಕುಮಾರ್‌ ಜೈಸ್ವಾಲ್‌ ಅವರ ಎರಡು ವರ್ಷಗಳ ಅಧಿಕಾರವಧಿ ಇದೇ 25ಕ್ಕೆ ಕೊನೆಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಅಧೀರ್‌ ರಂಜನ್‌ ಚೌಧರಿ ಅವರ ಉನ್ನತ ಮಟ್ಟದ ಸಮಿತಿ ಶನಿವಾರ (ಮೇ 13) ಸಂಜೆ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ತೀರ್ಮಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂದ್‌ ಅವರು 1986ನೇ ಬ್ಯಾಚ್‌ ರಾಜ್ಯ ಕೇಡರ್‌ನ ಐಪಿಎಸ್‌ ಅಧಿಕಾರಿ. ಸಿಬಿಐ ನಿರ್ದೇಶಕರ ಹುದ್ದೆಗೆ ಸೂದ್‌ ಮುಂಚೂಣಿಯಲ್ಲಿದ್ದರು. ಸುಧೀರ್ ಸಕ್ಸೇನಾ (ಮಧ್ಯಪ್ರದೇಶ ದಿಜಿಪಿ), ತಾಜ್ ಹಸನ್‌ ಮತ್ತು ಪ್ರವೀಣ್‌ ಸೂದ್ (ಕರ್ನಾಟಕ) ಅವರು ಮುಂದಿನ ಸಿಬಿಐ ನಿರ್ದೇಶಕ ಹುದ್ದೆ ಸ್ಪರ್ಧೆಯ ಪಟ್ಟಿಯಲ್ಲಿದ್ದರು. ಅಂತಿಮವಾಗಿ ಪ್ರವೀಣ್ ಸೂದ್ ನೇಮಕಗೊಂಡಿದ್ದಾರೆ.

ನೂತನ ಕೇಂದ್ರ ವಿಚಕ್ಷಣ ದಳದ ಆಯುಕ್ತ ಮತ್ತು ಲೋಕಪಾಲ ಸದಸ್ಯರ ಆಯ್ಕೆ ಬಗ್ಗೆ ಉನ್ನತ ಸಮಿತಿಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಅಗತ್ಯ ಮಾಹಿತಿಗಳನ್ನು ಶೀಘ್ರ ಬಹಿರಂಗಪಡಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸೂದ್ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು. ನಂತರ ಕಳೆದ ಮಾರ್ಚ್‌ನಲ್ಲಿ ಪ್ರವೀಣ್ ಸೂದ್ ಅವರ ಹೆಸರು ರಾಷ್ಟ್ರವ್ಯಾಪಿ ಸುದ್ದಿಯಾಗಿತ್ತು. ಪ್ರವೀಣ್‌ ಸೂದ್‌ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ, ಅವರನ್ನು ಬಂಧಿಸಬೇಕು ಎಂದು ಡಿ ಕೆ ಶಿವಕುಮಾರ್‌ ಆಗ್ರಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್‌ ಕಾರ್ಯಕರ್ತ; ಕಾಂಗ್ರೆಸ್ ಆರೋಪ

ಆದರೆ, ರಾಜ್ಯದಲ್ಲಿ ಸೂದ್‌ ಅವರು ಅನೇಕ ವಿಚಾರಗಳಲ್ಲಿ ವಿರೋಧ ಎದುರಿಸುತ್ತಿದ್ದರು. ರಾಜ್ಯ ಬಿಜೆಪಿ ಸರ್ಕಾರದ ಜೊತೆಗೂ ಅವರ ಸಂಬಂಧ ಹೆಚ್ಚು ಸೌಹಾರ್ದಯುತವಾಗಿರಲಿಲ್ಲ ಎಂದು ವಿಶ್ಲೇಷಿಸಲಾಗಿತ್ತು.

ಸಿಬಿಐ ನಿರ್ದೇಶಕರನ್ನು ಎರಡು ವರ್ಷದ ಅವಧಿಗೆ ನೇಮಿಸಲಾಗುತ್ತದೆ. ಅಧಿಕಾರವನ್ನು ಐದು ವರ್ಷದ ಅವಧಿಗೆ ವಿಸ್ತರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...