ಹಿಂದೂ ಕುಟುಂಬದಲ್ಲಿ ಜನಿಸಿದ ಕಾರಣ ನನ್ನನ್ನು ಬಂಧಿಸಿಲ್ಲ: ಸ್ವರಾ ಭಾಸ್ಕರ್ ವಿಡಿಯೋ ವೈರಲ್

Date:

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ “ನಾನು ಹಿಂದೂ ಎಂದು ನನ್ನನ್ನು ಬಂಧಿಸಿಲ್ಲ” ಎಂದು ಹೇಳಿದ್ದು, ಜೊತೆಗೆ ನ್ಯಾಯಾಧೀಶರುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2020ರಲ್ಲಿ ದೆಹಲಿ ಗಲಭೆಯ ನಂತರ ವಿವಾದಾತ್ಮಕ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ಅಡಿಯಲ್ಲಿ ದಾಖಲಿಸಲಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಇತರ ಕಾರ್ಯಕರ್ತರ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣದ ವಿಳಂಬಕ್ಕಾಗಿ ನ್ಯಾಯಾಂಗದ ವಿರುದ್ಧ ವಾಗ್ದಾಳಿ ನಡೆಸಿದರು.

ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮುಸ್ಲಿಮರು ಎಂಬ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಆದರೆ ನಾನು ಹಿಂದೂ ಕುಟುಂಬದಲ್ಲಿ ಜನಿಸಿದ ಕಾರಣ ನನ್ನನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನೂ ಕೂಡ ಚಳವಳಿಯ ಸಂದರ್ಭದಲ್ಲಿ ದನಿ ಎತ್ತಿದ್ದೆ ಮತ್ತು ಪ್ರತಿಭಟನಾಕಾರರಲ್ಲಿ ಒಬ್ಬಳಾಗಿದ್ದೆ. ಆದರೆ ನಾನು ಜೈಲಿಗೆ ಹೋಗಲಿಲ್ಲವೇಕೆ? ಏಕೆಂದರೆ ಕಾಕತಾಳೀಯವಾಗಿ, ನಾನು ಹಿಂದೂ ಕುಟುಂಬದಲ್ಲಿ ಜನಿಸಿದೆ. ಅದರಲ್ಲೂ ಸವರ್ಣೀಯರ ಕುಟುಂಬದಲ್ಲಿ ಜನಿಸಿದೆ. ನನ್ನನ್ನು ಕಂಬಿಗಳ ಹಿಂದೆ ಹಾಕುವುದು ಸೂಕ್ತವೆಂದು ಅವರಿಗೆ ಅನಿಸಿಲ್ಲ” ಎಂದು ಸ್ವರಾ ಭಾಸ್ಕರ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್ ಇರದಿದ್ದರೆ ಸ್ವಾತಂತ್ರ್ಯವೇ ಸಿಗುತ್ತಿರಲಿಲ್ಲ: ಬಿಜೆಪಿಗೆ ಶಿವಸೇನೆ ನಾಯಕ ಸಂಜಯ್ ರಾವುತ್ ತಿರುಗೇಟು

“ನೀವು ಮುಸಲ್ಮಾನನನ್ನು ಭಯೋತ್ಪಾದಕ ಎಂದು ಹೇಳಬಹುದು. ಆದರೆ ಹಿಂದೂ, ಮಾಜಿ ನೌಕಾಪಡೆಯ ಅಧಿಕಾರಿಯ ಮಗಳನ್ನು ಭಯೋತ್ಪಾದಕಿ ಎಂದು ಹೇಳುವುದು ಸ್ವಲ್ಪ ಜಾಸ್ತಿ ಎನಿಸಿಬಹುದು” ಎಂದು ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಜೈಲು ಸೇರಿರುವ ಕಾರ್ಯಕರ್ತರ ಜಾಮೀನು ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಅಮಿತ್ ಶರ್ಮಾ ವಿರುದ್ಧವೂ ಸ್ವರಾ ವಾಗ್ದಾಳಿ ನಡೆಸಿದ್ದಾರೆ. “ನೀವು ವಿಚಾರಣೆ ನಡೆಸಲು ಏಕೆ ಸಾಧ್ಯವಿಲ್ಲ? ನೀವು ಶಿಕ್ಷಣ ಪಡೆದವರಲ್ಲವೇ? ನಾವು ಪಾವತಿ ಮಾಡುವ ತೆರಿಗೆಯಿಂದ ನೀವು ವೇತನ ಪಡೆಯುತ್ತೀರಿ. ಹಾಗಾದರೆ ನಿಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಹೇಗೆ ನಿಮಗೆ ಹಕ್ಕಿದೆ? ಹೀಗೆ ಮಾಡುವುರಿಂದ ನೀವು ದೇಶದ ಜನರಿಗೆ ದ್ರೋಹ ಮಾಡುತ್ತಿಲ್ಲವೇ” ಎಂದು ಪ್ರಶ್ನಿಸಿದರು.

ಸ್ವರಾ ಭಾಸ್ಕರ್ ಭಾಷಣಕ್ಕೆ ಜನಸಮೂಹದಿಂದ ಚಪ್ಪಾಳೆ ಸುರಿಮಳೆ ಕೇಳಿಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋಗೆ ಮಿಶ್ರಾ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ 2019ರ ಅಂತ್ಯದಲ್ಲಿ ಮತ್ತು 2020ರ ಆರಂಭದಲ್ಲಿ ದೆಹಲಿಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ತೀವ್ರ ಘರ್ಷಣೆಯಲ್ಲಿ 53 ಜನರು ಸಾವನ್ನಪ್ಪಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಖಾಲಿದ್, ಇಮಾಮ್ ಮತ್ತು ಇತರರು ಸೇರಿದಂತೆ ಹಲವಾರು ಜನರನ್ನು ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ದೇಶದ್ರೋಹದ ಜೊತೆಗೆ ವಿವಾದಾತ್ಮಕ ಯುಎಪಿಎ ಕಾಯ್ದೆಯ ಆರೋಪಗಳನ್ನು ಹೊರಿಸಲಾಗಿದೆ.

ಇಮಾಮ್ ಅವರನ್ನು ಜನವರಿ 2020ರಲ್ಲಿ ಬಂಧಿಸಲಾಗಿದೆ. ಆದರೆ 2024ರ ಮೇ ತಿಂಗಳಲ್ಲಿ ದೇಶದ್ರೋಹ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಮತ್ತೊಂದೆಡೆ, ಖಾಲಿದ್ ಅವರನ್ನು 2020ರ ಸೆಪ್ಟೆಂಬರ್‌ನಲ್ಲಿ ಬಂಧಿಸಲಾಗಿದೆ. ಇನ್ನೂ ಕೂಡಾ ಜಾಮೀನು ಅರ್ಜಿಯ ವಿಚಾರಣೆ ನಡೆದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...