ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಹೆದರಿ ಅನರ್ಹಗೊಳಿಸಿದ ಪ್ರಧಾನಿ: ರಾಹುಲ್‌ ಗಾಂಧಿ ಆಕ್ರೋಶ

Date:

ಭ್ರಷ್ಟ ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಹೆದರಿ ನನ್ನನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಅವರು, “ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ಅದಾನಿ ಬಗ್ಗೆ ಒಂದೇ ಒಂದು ಪ್ರಶ್ನೆ ಕೇಳಿದ್ದೆ. ಅದರ ಬಗ್ಗೆ ಸಂಸತ್‌ನಲ್ಲಿ ನನ್ನ ಮುಂದಿನ ಭಾಷಣದಲ್ಲಿ ಪ್ರಸ್ತಾಪಿಸುವ ಉದ್ದೇಶ ಹೊಂದಿದ್ದೆ. ಅದಕ್ಕೆ ಹೆದರಿದ ಸರ್ಕಾರ ನನ್ನನ್ನ ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಿದೆ” ಎಂದು ಆರೋಪಿಸಿದ್ದಾರೆ.

“ನಾನು ಸಂಸತ್ತಿನಲ್ಲಿ ಅದಾನಿಯ ಶೆಲ್‌ ಕಂಪನಿಯಲ್ಲಿ ಹೂಡಿಕೆ ಮಾಡಿರುವ 20 ಸಾವಿರ ಕೋಟಿ ರೂ. ಯಾರ ಹಣ ಎಂದು ಕೇಳಲು ಬಯಸಿದ್ದೆ. ಇಷ್ಟು ಭಾರಿ ಮೊತ್ತದ ಹಣವನ್ನು ಅದಾನಿ ಕಂಪನಿಯಲ್ಲಿ ಯಾರು ಹೂಡಿಕೆ ಮಾಡಿದ್ದಾರೆ? ಇದರ ಹಿಂದಿರುವ ಸತ್ಯ ದೇಶದ ಜನತೆಗೆ ಗೊತ್ತಾಗಬೇಕಿದೆ. ನಾನು ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ. ಸಂಸತ್ತಿನಲ್ಲಿ ನಾನು ಭಾಷಣ ಮಾಡದಂತೆ ತಡೆಯಲಾಯಿತು. ನಂತರ ನಾನು ಲೋಕಸಭೆ ಸ್ಪೀಕರ್‌ಗೆ ವಿವರವಾದ ಉತ್ತರವನ್ನು ಬರೆದೆ. ಕೆಲವು ಮಂತ್ರಿಗಳು ನನ್ನ ಬಗ್ಗೆ ಸುಳ್ಳು ಹೇಳಿದರು. ಆದರೆ ನಾನು ಪ್ರಶ್ನೆ ಕೇಳುವುದನ್ನು ನಿಲ್ಲಿಸುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನರೇಂದ್ರ ಮೋದಿ ಮತ್ತು ಅದಾನಿ ನಡುವಿನ ಸಂಬಂಧ ಹೊಸದಲ್ಲ. ಇದು ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಿನಿಂದ ಪ್ರಾರಂಭವಾಯಿತು. ನಾನು ಪ್ರಧಾನಿಯವರಿಗೆ ಇಬ್ಬರು ವಿಮಾನದಲ್ಲಿ ಕುಳಿತಿರುವ ಫೋಟೋವನ್ನು ತೋರಿಸಿದೆ. ಈ ಕಾರಣದಿಂದ ನನ್ನ ಭಾಷಣಕ್ಕೆ ಅಡ್ಡಿಪಡಿಸಲಾಯಿತು” ಎಂದು ರಾಹುಲ್‌ ಗಾಂಧಿ ಹೇಳಿದರು.

” ನಾನು ಮೊದಲು ಸ್ಪೀಕರ್‌ಗೆ ಪತ್ರ ಬರೆದು ಸಂಸತ್ತಿನಲ್ಲಿ ಮಾತನಾಡುವ ಅವಕಾಶ ಪಡೆಯುವುದು ನನ್ನ ಹಕ್ಕು ಎಂದು ಕೇಳಿದೆ. ಇದಕ್ಕೆ ನನಗೆ ಉತ್ತರ ಸಿಕ್ಕಿಲ್ಲ. ನಂತರ, ನಾನು ಸ್ಪೀಕರ್ ಅವರ ಕಚೇರಿಗೆ ಹೋಗಿ ನನಗೆ ಏಕೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಕೇಳಿದೆ. ಆದರೂ ನನಗೆ ಅವಕಾಶ ನೀಡಲಿಲ್ಲ” ಎಂದು ರಾಹುಲ್‌ ಗಾಂಧಿ ಹೇಳಿದರು.

“ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ನಾನು ಇಲ್ಲಿದ್ದೇನೆ. ನಾನು ಅವರಿಗೆ ಹೆದರುವುದಿಲ್ಲ. ಇದು ನನ್ನ ಇತಿಹಾಸದಲ್ಲಿಲ್ಲ. ಅದಾನಿ ಮತ್ತು ನರೇಂದ್ರ ಮೋದಿ ನಡುವೆ ಏನು ಸಂಬಂಧ ಎಂದು ನಾನು ಕೇಳುವುದನ್ನು ಮುಂದುವರಿಸುತ್ತೇನೆ.ನನ್ನನ್ನು ಏಕೆ ಅನರ್ಹಗೊಳಿಸಲಾಗಿದೆ ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ. ಅದಾನಿ ಕುರಿತಾದ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿದ ಕಾರಣ ಅವರು ನನ್ನನ್ನು ಅನರ್ಹಗೊಳಿಸಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು

ಯಾವುದೇ ಸಮುದಾಯದ ವಿರುದ್ಧ ಮಾತನಾಡಿಲ್ಲ

ನೀವು ಒಂದು ಸಮುದಾಯವನ್ನು ಅಪಮಾನ ಮಾಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್, ”ನಾನು ಕೇಳಿರುವುದು ಅದಾನಿ ಹಾಗೂ ಮೋದಿ ನಡುವಿನ ಸಂಬಂಧ. ಯಾವುದೇ ಸಮುದಾಯವನ್ನು ನಾನು ಅಪಮಾನ ಮಾಡಿಲ್ಲ.ನನಗೆ ಎಲ್ಲ ಸಮಾಜ ಒಂದೇ. ಭಾರತ್‌ ಜೋಡೋ ಯಾತ್ರೆಯಲ್ಲಿ ನನ್ನ ಉದ್ದೇಶ ಎಲ್ಲರಿಗೂ ಗೊತ್ತಾಗಿದೆ. ಹಿಂಸಾರಹಿತ, ಶಾಂತಿ ಸುವ್ಯವಸ್ಥೆಯ ನಮ್ಮ ದೇಶಕ್ಕೆ ಅಗತ್ಯವಾಗಿದೆ” ಎಂದು ಹೇಳಿದರು.

“ನನ್ನನ್ನು ಜೀವನಪರ್ಯಂತ ಜೈಲಿಗೆ ಹಾಕಿದರೂ, ಮತ್ತೆ ಸದಸ್ಯತ್ವ ಸ್ಥಾನವನ್ನು ಮರುಕಳಿಸಿದರೂ ನನ್ನ ಹೋರಾಟ ಮುಂದುವರೆಯುತ್ತದೆ. ಭಾರತದ ಜನರ ಪ್ರಜಾಸತ್ತಾತ್ಮಕ ಧ್ವನಿಯನ್ನು ರಕ್ಷಿಸಲು ನನ್ನ ಹೋರಾಟ ಮುಂದುವರೆಯುತ್ತದೆ. ನಾನು ಯಾರಿಗೂ ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸುವುದಿಲ್ಲ. ಅವರು ನನ್ನನ್ನು ಅನರ್ಹಗೊಳಿಸುವ ಮೂಲಕ ಅಥವಾ ಜೈಲಿಗೆ ಹಾಕುವ ಮೂಲಕ ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ನಾನು ಈ ಹೋರಾಟದಿಂದ ಹಿಂದೆ ಸರಿಯುಲ್ಲ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಜೈರಾಮ್‌ ರಮೇಶ್, ಕೆ ಸಿ ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...