ಕೇರಳ | ಹೊಸ ರಾಜಕೀಯ ಪಕ್ಷ ಕಟ್ಟಲು ಮುಂದಾದ ಸಿಪಿಐಎಂ ಬಂಡಾಯ ಶಾಸಕ ಪಿ ವಿ ಅನ್ವರ್

Date:

ಕೇರಳದ ನಿಲಂಬೂರು ಕ್ಷೇತ್ರದಿಂದ ಎಡಪಕ್ಷವನ್ನು ಪ್ರತಿನಿಧಿಸಿ ಸ್ಪರ್ಧಿಸಿ ಗೆದ್ದಿದ್ದರೂ ಕೂಡಾ ಸದ್ಯ ಸಿಪಿಐ(ಎಂ) ಜೊತೆಗಿನ ಎಲ್ಲ ರಾಜಕೀಯ ಸಂಬಂಧವನ್ನು ಕಡಿದುಕೊಂಡಿರುವ ಬಂಡಾಯ ಶಾಸಕ ಪಿ ವಿ ಅನ್ವರ್ ಈಗ ಹೊಸ ರಾಜಕೀಯ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ.

ಏಪ್ರಿಲ್ 19-20ರಂದು ನಡೆದ ತ್ರಿಶೂರ್ ಪೂರಂ ಉತ್ಸವದಲ್ಲಿ ವಿಧ್ವಂಸಕ ಕೃತ್ಯ ನಡೆದಿದೆ ಎನ್ನಲಾಗಿದೆ. ಲೋಕಸಭೆ ಚುನಾವಣೆಯ ವೇಳೆ ಬಿಜೆಪಿಗೆ ಚುನಾವಣಾ ಲಾಭ ಮಾಡಿಕೊಡಲು ಪೂರಂ ಉತ್ಸವವನ್ನು ಹಾಳುಮಾಡಲಾಗಿದೆ ಮತ್ತು ಎಡಿಜಿಪಿ ಅಜಿತ್ ಕುಮಾರ್ ಈ ಸಂಚಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ವಿಪಕ್ಷ ಆರೋಪಿಸಿದೆ. ಈ ಆರೋಪಕ್ಕೆ ಶಾಸಕ ಪಿ ವಿ ಅನ್ವರ್ ಕೂಡಾ ಧ್ವನಿಗೂಡಿಸಿದ್ದರು.

ಎಡಿಜಿಪಿ ಅಜಿತ್ ಕುಮಾರ್ ಅವರು ಮುಖ್ಯಮಂತ್ರಿ ವಿಜಯನ್ ಅವರ ಆಪ್ತರೆಂದೇ ಹೆಸರುವಾಸಿಯಾಗಿದ್ದಾರೆ. ಹಾಗಾಗಿ ಇದು ಕೇರಳ ರಾಜಕೀಯದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇರಳದಲ್ಲಿ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಶಾಸಕ ಪಿ ವಿ ಅನ್ವರ್ ಬುಧವಾರ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೇರಳದಲ್ಲಿ ಬಿಜೆಪಿಗೆ ನೆರವು ನೀಡಿದವರಾರು?; ಸಿಎಂ ಪಿಣರಾಯಿ ಸರ್ಕಾರಕ್ಕೆ ಸವಾಲಿನ ಪ್ರಶ್ನೆ

“ನಾನು ಎತ್ತಿರುವ ಸಮಸ್ಯೆಗಳು ಈಗ ಚಳವಳಿಯಾಗಿ ಮಾರ್ಪಟ್ಟಿದೆ. ಅದೀಗ ರಾಜಕೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಹಾಗಾಗಿ ನಾನು ಹೊಸ ರಾಜಕೀಯ ಪಕ್ಷವನ್ನು ಕಟ್ಟುತ್ತೇನೆ. ಯಾಕೆಂದರೆ ಪಕ್ಷವಿಲ್ಲದೆ ಚುನಾವಣೆ ಸ್ಪರ್ಧಿಸಲಾಗದು. ಈ ಹೊಸ ಪಕ್ಷವು ರಾಜ್ಯದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ” ಎಂದು ತಿಳಿಸಿದ್ದಾರೆ. ಇನ್ನು ಕೇರಳದಲ್ಲಿ ಲಕ್ಷಾಂತರ ಯುವಕರು ತನಗೆ ಬೆಂಬಲ ನೀಡುವ ಭರವಸೆಯನ್ನು ಕೂಡಾ ಪಿ ವಿ ಅನ್ವರ್ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ಕೇರಳ ಮುಖ್ಯಮಂತ್ರಿ ಪಿಣರಾಯಿ ಮತ್ತು ಸಿಪಿಐಎಂ ನೀಡಿದ ಬಹುತೇಕ ಎಲ್ಲಾ ಹೇಳಿಕೆಗಳನ್ನು ಟೀಕಿಸುತ್ತಿರುವ ಶಾಸಕ ಅನ್ವರ್ ಮಂಗಳವಾರ ವಿಜಯನ್ ನೀಡಿದ ಹೇಳಿಕೆಯನ್ನೂ ಟೀಕಿಸಿದ್ದಾರೆ.

“ರಾಜ್ಯದಲ್ಲಿ ಆಡಳಿತಾರೂಢ ಸಿಪಿಐ(ಎಂ) ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದವನ್ನು ವಿರೋಧಿಸುತ್ತದೆ. ಯಾವುದೇ ಪಕ್ಷದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ವಿಜಯನ್ ಮಂಗಳವಾರ ಹೇಳಿಕೆ ನೀಡಿದ್ದಾರೆ. ಇದನ್ನು ‘ನಾಟಕ’ ಎಂದು ಬಣ್ಣಿಸಿರುವ ಅನ್ವರ್, ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಎಲ್‌ಡಿಎಫ್ ಸೋಲಿನ ನಂತರ ಸಿಎಂ ಮತ್ತು ಸಿಪಿಐ(ಎಂ) ಮತಕ್ಕಾಗಿ ಆರ್‌ಎಸ್‌ಎಸ್ ಮತ್ತು ಹಿಂದುತ್ವ ಕೋಮುವಾದಿಗಳನ್ನು ಓಲೈಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

ಇನ್ನು ಈಗಾಗಲೇ ಕೊಟ್ಟಾಯಂ ಮೂಲದ ಕರುಕಾಚಲ್ ಪೊಲೀಸರು ಅನ್ವರ್ ವಿರುದ್ಧ ಫೋನ್ ಕದ್ದಾಲಿಕೆ ಆರೋಪದಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಐಪಿಸಿಯ ಸೆಕ್ಷನ್ 192ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅನ್ವರ್ ಅಕ್ರಮವಾಗಿ ಫೋನ್ ಕರೆಗಳನ್ನು ಟ್ಯಾಪ್ ಮಾಡುವ ಮೂಲಕ ಇತರರ ಗೌಪ್ಯತೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ನಡುವೆ ಸಿಎಂ, ಅವರ ರಾಜಕೀಯ ಕಾರ್ಯದರ್ಶಿ ಪಿ.ಶಶಿ ಮತ್ತು ಅಜಿತ್‌ ಕುಮಾರ್‌ ವಿರುದ್ಧ ಅಪಪ್ರಚಾರ ಮಾಡಿದ ಅನ್ವರ್ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಅನ್ವರ್ ವಿರುದ್ಧ ಇನ್ನಷ್ಟು ಪ್ರಕರಣಗಳು ದಾಖಲಾಗಬಹುದು ಎಂದು ಕಾಂಗ್ರೆಸ್‌ ಮುಖಂಡರ ಅಭಿಪ್ರಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...