ಇಂಧೋರ್ | ಬಾಲಕನ ವಿವಸ್ತ್ರಗೊಳಿಸಿ ‘ಜೈ ಶ್ರೀರಾಂ’ ಹೇಳುವಂತೆ ಹಲ್ಲೆ

Date:

  • ಜೈ ಶ್ರೀರಾಂ ಹೇಳುವಂತೆ ಅಪ್ರಾಪ್ತನಿಗೆ ಒತ್ತಾಯ
  • ಅಪ್ರಾಪ್ತ ಬಾಲಕರಿಂದ ಕೋಮು ಹಲ್ಲೆಯ ಪ್ರಯತ್ನ

ಮೂವರು ಅಪ್ರಾಪ್ತರು 11 ವರ್ಷದ ಬಾಲಕನ ವಿವಸ್ತ್ರಗೊಳಿಸಿ ಜೈ ಶ್ರೀರಾಂ ಹೇಳುವಂತೆ ಬಲವಂತಪಡಿಸಿ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.

ಮೂವರು ಅಪ್ರಾಪ್ತರು ನಗರದ ನಿಪಾನಿಯಾ ಪ್ರದೇಶದ ಸಮೀಪದ ಕೆರೆ ಬಳಿಗೆ ಆಟಿಕೆಗಳನ್ನು ಖರೀದಿಸುವ ನೆಪದಲ್ಲಿ ಸಂತ್ರಸ್ತ ಬಾಲಕನನ್ನು ಕರೆದೊಯ್ದಿದ್ದರು. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ನಗ್ನನಾಗಿದ್ದ ಬಾಲಕನಿಗೆ ‘ಜೈ ಶ್ರೀರಾಂ’, ‘ಹಿಂದುಸ್ತಾನ್ ಜಿಂದಾಬಾದ್’ ಮತ್ತು ‘ಪಾಕಿಸ್ತಾನ್ ಮುರ್ದಾಬಾದ್’ ಘೋಷಣೆಗಳನ್ನು ಕೂಗುವಂತೆ ಬಲವಂತಪಡಿಸುತ್ತಿರುವುದು ಕಾಣಿಸುತ್ತದೆ.

ಅನಂತರದಲ್ಲಿ ಅಪ್ರಾಪ್ತ ಅವರಿಂದ ತಪ್ಪಿಸಿಕೊಂಡು ಮನೆಗೆ ಬಂದು ಕುಟುಂಬಕ್ಕೆ ಮಾಹಿತಿ ನೀಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಟುಂಬದ ಸದಸ್ಯರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತ ಮತ್ತು ಆರೋಪಿಗಳು ಒಂದೇ ಪ್ರದೇಶದ ನಿವಾಸಿಗಳಾಗಿದ್ದು, ಎಲ್ಲರ ಪೋಷಕರು ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಬಾಲಕನ ಪೋಷಕರು ದೂರು ನೀಡಿದ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 323, 294 ಮತ್ತು 365 ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಜೈಶ್ರೀರಾಂ ಎನ್ನುವಂತೆ ಒತ್ತಾಯಿಸಿದ ಆರೋಪಿ ಅಪ್ರಾಪ್ತ ಬಾಲಕರ ಪೋಷಕರು ಇನ್ನು ಮುಂದೆ ಈ ರೀತಿ ಘಟನೆ ನಡೆಯದಂತೆ ನೋಡಿಕೊಳ್ಳುವುದಾಗಿ ಹಾಗೂ ಮಕ್ಕಳನ್ನು ಸರಿದಾರಿಗೆ ತರಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಜಾಮೀನು ನೀಡಲಾಗಿದೆ. ಆರೋಪಿಗಳನ್ನು ಬಾಲಾಪರಾಧಿಗಳ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಅಪ್ರಾಪ್ತರಿಗೆ ಸಂಬಂಧಿಸಿರುವುದರಿಂದ ಆದರ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪಸರಿಸದಂತೆ ಸಾರ್ವಜನಿಕರಲ್ಲಿ ಪೊಲೀಸರು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...