ಡಿಜಿಟಲ್ ಅರೆಸ್ಟ್ ಹಗರಣ; ಮಹಿಳಾ ವೈದ್ಯರಿಗೆ 59 ಲಕ್ಷ ರೂ. ವಂಚನೆ

Date:

ಉತ್ತರ ಪ್ರದೇಶದ ನೋಯ್ಡಾ ಮೂಲದ ಮಹಿಳಾ ವೈದ್ಯರೊಬ್ಬರಿಗೆ ಸೈಬರ್‌ ವಂಚಕರು 48 ಗಂಟೆಗಳ ಕಾಲ ‘ಡಿಜಿಟಲ್‌ ಅರೆಸ್ಟ್’ ಗೊಳಪಡಿಸಿ 59 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ದೆಹಲಿ ಎನ್‌ಸಿಆರ್‌ ವಿಭಾಗದಲ್ಲಿ ಇತ್ತೀಚಿಗೆ ಸೈಬರ್‌ ವಂಚನೆ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ.

ನೋಯ್ಡಾ ಸೆಕ್ಟರ್‌ನ 77ರ ನಿವಾಸಿ ಡಾ. ಪೂಜಾ ಗೋಯಲ್‌ ಅವರಿಗೆ ಜುಲೈ 13 ರಂದು ಕರೆ ಬಂದಿದೆ. ತಾನೊಬ್ಬ ಭಾರತೀಯ ದೂರ ನಿಯಂತ್ರಣ ಪ್ರಾಧಿಕಾರದ ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪೂಜಾ ಗೋಯಲ್‌ ಅವರಿಗೆ ನಿಮ್ಮ ಪೋರ್ನ್‌(ಅಶ್ಲೀಲ) ವಿಡಿಯೋ ವೈರಲ್‌ ಆಗುತ್ತಿದೆ ಎಂದು ತಿಳಿಸಿದ್ದಾನೆ.

ವ್ಯಕ್ತಿಯ ಆರೋಪವನ್ನು ವೈದ್ಯರು ಆರಂಭದಲ್ಲಿ ತಿರಸ್ಕರಿಸಿದ್ದಾರೆ. ವೈದ್ಯರಿಗೆ ಬಲವಂತಪಡಿಸಿದ ವ್ಯಕ್ತಿ ವಿಡಿಯೋ ಕಾಲ್‌ ಸ್ವೀಕರಿಸುವಂತೆ ತಿಳಿಸಿದ್ದಾನೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯನ್ನು 48 ಗಂಟೆಗಳ ಕಾಲ ಬೆದರಿಸಿ ಡಿಜಿಟಲ್‌ ಬಂಧನಕ್ಕೆ ಒಳಪಡಿಸಲಾಗಿತ್ತು. ಕಾಲ್‌ನಲ್ಲಿ ಹಣ ನೀಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಂತರದಲ್ಲಿ ಮಹಿಳೆಯಿಂದ 59.54 ಲಕ್ಷ ರೂ. ಹಣವನ್ನು ನಿರ್ದಿಷ್ಟ ಖಾತೆಗೆ ವರ್ಗಾವಣೆಗೊಳಿಸಿದ ನಂತರ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ನಿಂದ ಬಂಧಮುಕ್ತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ

ಹಣ ಕಳೆದುಕೊಂಡ ನಂತರ ಇದೊಂದು ಹಗರಣ ಎಂದು ಮಹಿಳೆಗೆ ಗೊತ್ತಾಗಿದೆ. ಜುಲೈ 22 ರಂದು ಮಹಿಳಾ ವೈದ್ಯರು ನೋಯ್ಡಾ ಸೆಕ್ಟರ್‌ 36ರಲ್ಲಿ ಸೈಬರ್‌ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.

ಸೈಬರ್‌ ವಿಭಾಗದ ಎಸಿಪಿಯಾದ ವಿವೇಕ್‌ ರಂಜನ್‌ ರೈ, ಗೋಯಲ್‌ ಅವರು ಹಣ ವರ್ಗಾವಣೆಗೊಳಿಸಿದ ಖಾತೆಯ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್‌ ಅರೆಸ್ಟ್ ಹಗರಣದ ಮೂಲಕ ಜನರನ್ನು ಹೆಚ್ಚಾಗಿ ವಂಚನೆಗೊಳಿಸಲಾಗುತ್ತಿದೆ. ಸೈಬರ್‌ ವಂಚಕರು ಮನೆಗಳಲ್ಲಿ, ಕೊಠಡಿಗಳಲ್ಲಿ ಅಥವಾ ಸರ್ಕಾರಿ ಅಧಿಕಾರಿಗಳ ರೂಪದಲ್ಲಿ ಮೋಸಗೊಳಿಸಲಾಗುತ್ತಿದೆ.

ದೆಹಲಿಯಲ್ಲಿ ಕೆಲವು ದಿನಗಳ ಹಿಂದೆಯಷ್ಟೆ 72 ವರ್ಷದ ವೃದ್ಧೆಯೊಬ್ಬರನ್ನು ಪೂಜಾ ಗೋಯಲ್‌ ರೀತಿಯಲ್ಲಿಯೇ ಗುರಿ ಮಾಡಿ 83 ಲಕ್ಷ ರೂ. ವಂಚನೆಗೊಳಿಸಲಾಗಿತ್ತು. ವೃದ್ಧೆಯನ್ನು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರೆಂದು ಬಿಂಬಿಸಿ 12 ಗಂಟೆಗಳ ಕಾಲ ಡಿಜಿಟಲ್‌ ಬಂಧನಕ್ಕೊಳಪಡಿಸಲಾಗಿತ್ತು.

ಸೈಬರ್‌ ಅಪರಾಧಿಗಳಿಂದ ಕೆಲವು ತಿಂಗಳುಗಳಿಂದ ಈ ರೀತಿಯ ವಂಚನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೋಯ್ಡಾ ಪೊಲೀಸರು ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ನೀಡಿ ಮೋಸಕ್ಕೊಳಗಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...