ಹಿಂದೂ ಮಹಿಳೆಗೆ ಮುಸ್ಲಿಂ ವ್ಯಕ್ತಿಯ ರಕ್ತ ನೀಡಲು ವೈದ್ಯ ನಕಾರ! ವಿಡಿಯೋ ವೈರಲ್

Date:

ಹಿಂದೂ ಮಹಿಳೆಗೆ ರಕ್ತದಾನ ಮಾಡಲು ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವೈದ್ಯರು ಅನುಮತಿ ನಿರಾಕರಿಸಿದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಪನ್ನಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಕ್ತದಾನದಲ್ಲೂ ಕೋಮುವಾದ ಮಾಡಿದ ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸ್ಥಳೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದೆ. ಪವನ್ ಸೋಂಕರ್ ಎಂಬ ವ್ಯಕ್ತಿ ತನ್ನ ತಾಯಿಯ ಚಿಕಿತ್ಸೆಗಾಗಿ ಪನ್ನಾ ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದು, ವೈದ್ಯರು ತುರ್ತಾಗಿ ರಕ್ತದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರು. ಸೋಂಕರ್ ತನ್ನ ಮುಸ್ಲಿಂ ಸ್ನೇಹಿತನನ್ನು ದಾನಿಯಾಗಿ ಆಸ್ಪತ್ರೆಗೆ ಕರೆತಂದಿದ್ದಾನೆ. ಆದರೆ ವೈದ್ಯರು ಸೋಂಕರ್ ಸ್ನೇಹಿತ ಮುಸ್ಲಿಂ ಎಂಬ ಕಾರಣಕ್ಕೆ ರಕ್ತದಾನ ಮಾಡಲು ಅವಕಾಶ ನೀಡಿಲ್ಲ.

ಸೆಪ್ಟೆಂಬರ್ 8ರಂದು ಭಾನುವಾರ ಈ ಘಟನೆ ನಡೆದಿದ್ದು, ಈಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ನಾವು ಸೋಂಕರ್ ಮತ್ತು ವೈದ್ಯರ ನಡುವೆ ನಡೆದ ಕೆಲವೇ ಸೆಕೆಂಡುಗಳ ಸಂಭಾಷಣೆಯನ್ನು ನೋಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಲಿಂ ವ್ಯಕ್ತಿಯಾದ ಕಾರಣ ಹಿಂದೂ ಮಹಿಳೆಗೆ ರಕ್ತದಾನ ಮಾಡಲು ಅವಕಾಶ ನೀಡಲಾಗದು” ಎಂದು ವೈದ್ಯ ಹೇಳಿರುವುದು ಈ ವಿಡಿಯೋದಲ್ಲಿ ನಾವು ಕಾಣಬಹುದು. ಒಂದು ವೇಳೆ ನಾವು ಮುಸ್ಲಿಂ ವ್ಯಕ್ತಿಯ ರಕ್ತವನ್ನು ಹಿಂದೂ ಮಹಿಳೆಗೆ ನೀಡಿದರೆ ಅವರಿಗೆ ತೊಂದರೆಯಾಗುತ್ತದೆ ಎಂದೂ ವೈದ್ಯ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮುಸ್ಲಿಂ ಶಾಸಕರಿಗಿದ್ದ ಶುಕ್ರವಾರದ ನಮಾಜ್ ವಿರಾಮ ರದ್ದುಗೊಳಿಸಿದ ಅಸ್ಸಾಂ ಸರ್ಕಾರ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಕ್ತಕ್ಕೆ ಯಾವುದೇ ಧರ್ಮವಿಲ್ಲ ಮತ್ತು ಜೀವ ಉಳಿಸುವ ರಕ್ತವನ್ನು ದಾನ ಮಾಡಲು ವ್ಯಕ್ತಿಯ ಧರ್ಮ ಎಂದಿಗೂ ಅಡ್ಡಿಯಾಗಬಾರದು ಎಂದು ಹಲವಾರು ನೆಟ್ಟಿಗರು ಹೇಳಿದ್ದಾರೆ.

ಇಂತಹ ಘಟನೆಗಳು ದೇಶದ ಸಾಮಾಜಿಕ ಸ್ಥಿತಿ ಹೇಗೆ ಬದಲಾಗುತ್ತಿದೆ ಮತ್ತು ಧರ್ಮದ ಆಧಾರದ ಮೇಲೆ ಅಸಹಿಷ್ಣುತೆ ಹೇಗೆ ಹೆಚ್ಚಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ವೈದ್ಯಕೀಯ ಕ್ಷೇತ್ರಕ್ಕೂ ಧರ್ಮ ದ್ವೇಷ ಬಂದಿರುವುದು ಆತಂಕಕಾರಿ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

“ಹಿಂದೂಗಳಿಗೆ ಮುಸ್ಲಿಮರ ರಕ್ತವನ್ನು ನೀಡುವುದಿಲ್ಲ ಎಂದು ವೈದ್ಯರೇ ಹೇಳುವಂತಹ ಸ್ಥಿತಿಗೆ ಬಂದು ನಾವು ತಲುಪಿದ್ದೇವೆ” ಎಂದು ನೆಟ್ಟಿಗರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೋರ್ವ ನೆಟ್ಟಿಗರು, “ಈಗ ರಕ್ತದಲ್ಲೂ ಹಿಂದೂ ಮುಸ್ಲಿಂ ಇದೆಯೇ? ಯಾವುದೇ ವ್ಯಕ್ತಿಯಾದರೂ ರಕ್ತದ ಬಣ್ಣ ಮಾತ್ರ ಕೆಂಪು. ಆದರೆ ನಮ್ಮ ದೇಶದಲ್ಲಿ ರಕ್ತವೂ ಹಿಂದೂ ಮುಸ್ಲಿಂ ಆಗಿಬಿಟ್ಟಿದೆ” ಎಂದು ಕಾಮೆಂಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...