ಯೂಟ್ಯೂಬ್ ನೋಡಿ ಚಿಕಿತ್ಸೆ; ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕ ಸಾವು !

Date:

ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದರಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಮೃತ ಯುವಕನನ್ನು ದೀಪಕ್ ಪಾಸ್ವಾನ್ (24) ಎಂದು ಗುರುತಿಸಲಾಗಿದ್ದು, ಆತ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆಗೆ ಉದ್ಯೋಗಕ್ಕೆ ಸೇರ್ಪಡೆಯಾಗಬೇಕಿತ್ತು. ಆದರೆ,ಆತನಿಗೆ ಶನಿವಾರ ಸಂಜೆ ವಾಂತಿ ಕಾಣಿಸಿಕೊಂಡಿದ್ದರಿಂದ, ಇಲ್ಲಿನ ಕದಮ್ ಕ್ವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೇಂದ್ರ ನಗರ ರಸ್ತೆ ಸಂಖ್ಯೆ 3ರಲ್ಲಿರುವ ಖಾಸಗಿ ಕ್ಲಿನಿಕ್ ಒಂದಕ್ಕೆ ದಾಖಲಾಗಿದ್ದರು. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದೀಪಕ್ ಪಾಸ್ವಾನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೆ ಕ್ಲಿನಿಕ್ ಅನ್ನು ಧ್ವಂಸಗೊಳಿಸಿರುವ ಆತನ ಸಂಬಂಧಿಕರು, ವೈದ್ಯರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನಂತರದಲ್ಲಿ ಪಾಸ್ವಾನ್ ಕುಟುಂಬದ ಸದಸ್ಯರು ಕದಮ್ ಕ್ವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಈ ಕುರಿತು ಪ್ರತಿಕ್ರಿಯಿಸಿದ ಪಾಸ್ವಾನ್ ಸಹೋದರ, ಒಂದು ವೇಳೆ ಅಲ್ಲಿ ವೈದ್ಯರಿದ್ದು, ಆತನಿಗೆ ಸೂಕ್ತ ಚಿಕಿತ್ಸೆ ಒದಗಿಸಿದ್ದರೆ, ಆತ ಬದುಕುಳಿದಿರುತ್ತಿದ್ದ. ನನ್ನ ಸಹೋದರ ಪಾಸ್ವಾನ್ ಇನ್ನು 24 ಗಂಟೆಯೊಳಗೆ ಗುಣಮುಖವಾಗಲಿದ್ದಾನೆ ಎಂದು ಕ್ಲಿನಿಕ್‌ನ ವೈದ್ಯರು ಭರವಸೆ ನೀಡಿದ್ದರು ಎಂದೂ ಅವರು ದೂರಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ ಕದಮ್ ಕ್ವಾನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ವರದಿಯನ್ನು ಸಿದ್ಧಪಡಿಸಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸದರ್ ಉಪ ವಿಭಾಗ ಪೊಲೀಸ್ ಅಧಿಕಾರಿ ದೀಕ್ಷಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...