ಭೂಕುಸಿತಕ್ಕೂ ಮುನ್ನ ಬೊಗಳಿದ ನಾಯಿ; ಉಳಿಯಿತು 67 ಜನರ ಜೀವ!

Date:

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತಗಳು ಸಂಭವಿಸುತ್ತಿವೆ. ಇಡೀ ರಾಜ್ಯ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಈವರೆಗೆ ಸುಮಾರು 55 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ, ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ 67 ಮಂದಿ ಪಾರಾಗಿದ್ದಾರೆ. ಅವರು ಬದುಕುಳಿಯಲು ನಾಯಿಯೇ ಕಾರಣವೆಂದು ಹೇಳಲಾಗುತ್ತಿದೆ.

ಮಂಡಿ ಜಿಲ್ಲೆಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ರಾತ್ರಿ ವೇಳೆ ಭೂಕುಸಿತ ಸಂಭವಿಸಿದೆ. ಈ ಭೂಕುಸಿತಕ್ಕೂ ಮುನ್ನ ನಾಯಿ ಜೋರಾಗಿ ಬೊಗಳಿದೆ. ನಾಯಿಯ ಬೊಗಳುವಿಕೆಯಿಂದ ಎಚ್ಚೆತ್ತ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಡುರಾತ್ರಿಯಲ್ಲಿ ಇದ್ದಕ್ಕಿದ್ದಂತೆ ನಾಯಿ ಬೊಗಳಲು ಶುರು ಮಾಡಿದೆ. ನಾಯಿ ಜೋರು ಬೊಗಳುವಿಕೆಯಿಂದಾಗಿ ನಿದ್ರೆಯಲ್ಲಿದ್ದ ನರೇಂದ್ರ ಎಂಬವರು ಎಚ್ಚರಗೊಂಡು, ನಾಯಿಯ ಬಳಿ ಹೋಗಿದ್ದಾರೆ. ಆ ವೇಳೆ, ಮನೆಯ ಗೋಡೆ ಬಿರುಕುಬಿಟ್ಟು, ನೀರು ನುಗ್ಗುತ್ತಿರುವುದನ್ನು ಗಮನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ, ಸುತ್ತಮುತ್ತಲ 20 ಕುಟುಂಬವರನ್ನು ಎಬ್ಬಿಸಿದ್ದಾರೆ. ಎಲ್ಲರನ್ನೂ ಕರೆದುಕೊಂಡು ಎತ್ತರದ ಪ್ರದೇಶದಲ್ಲಿದ್ದ ನೈನಾ ದೇವಿ ದೇವಾಲಯದ ಬಳಿಗೆ ತೆರಳಿದ್ದಾರೆ. ಅದಾದ ಕೆಲವೇ ಸಮಯದಲ್ಲಿ,ಭೂಕುಸಿತ ಸಂಭವಿಸಿದೆ. ಆ 20 ಕುಟುಂಬಗಳ 67 ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...