‘ಹಸಿವಾಗಿದೆಯೆ ಎಂದು ಕೇಳಿದರೆ ನಾನು ಹೌದು ಎನ್ನುತ್ತೇನೆ’ ಭಾರತದ ಹಸಿವು ಸೂಚ್ಯಂಕದ ಬಗ್ಗೆ ಅಣಕವಾಡಿದ ಸ್ಮೃತಿ ಇರಾನಿ

Date:

ಭಾರತದ ಹಸಿವು ಸೂಚ್ಯಂಕದ ವರದಿಯ ಬಗ್ಗೆ ಅಣಕ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತೀಚಿಗೆ ಹೈದರಾಬಾದಿನಲ್ಲಿ ಎಫ್‌ಐಸಿಸಿಐ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸ್ಮೃತಿ ಇರಾನಿ, ಜಾಗತಿಕ ಸೂಚ್ಯಂಕ ವರದಿಯ ಮಾನದಂಡಗಳ ಬಗ್ಗೆ ಪ್ರಶ್ನಿಸಿದ್ದರು. ಭಾರತದ ಬಗ್ಗೆ ಜಾಗತಿಕ ಹಸಿವು ಸೂಚ್ಯಂಕ ನೀಡಿದ ವರದಿಗಳು ಉದ್ದೇಶಪೂರ್ವಕವಾಗಿ ಸುಳ್ಳಾಗಿದೆ. ಇದು ಭಾರತದ ಪ್ರಗತಿಯನ್ನು ನಿಖರವಾಗಿ ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದರು.

ಸ್ಮೃತಿ ಇರಾನಿ ಮಾಡಿದ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ. “ಡಬ್ಲ್ಯೂಎಚ್‌ಎಚ್‌ ಸಂಸ್ಥೆ ಹಸಿವು ಸೂಚ್ಯಂಕವನ್ನು ಹೇಗೆ ತಯಾರಿಸುತ್ತದೆ? 140 ಕೋಟಿ ಜನಸಂಖ್ಯೆಯ ದೇಶದಲ್ಲಿ 30,000 ಜನರಿಗೆ ಫೋನ್ ಕರೆ ಮೂಲಕ ‘ಹಸಿದಿದೆಯೇ’ ಎಂದು ಕೇಳಿ ಸೂಚ್ಯಂಕ ನಿರ್ಧರಿಸಲಾಗುತ್ತದೆ. ಈಗ ನನ್ನ ಬಗ್ಗೆಯೆ ನಂಬಿ, ನಾನು ದೆಹಲಿಯಲ್ಲಿರುವ ನನ್ನ ಮನೆಯಿಂದ ಬೆಳಗ್ಗೆ 4 ಗಂಟೆಗೆ ಹೊರಟಿದ್ದೇನೆ. ನಾನು ಕೊಚ್ಚಿಗೆ ಹೋಗಲು 5 ​​ಗಂಟೆಗೆ ವಿಮಾನವನ್ನು ಹಿಡಿಯುತ್ತೇನೆ. ವಿಮಾನದಿಂದ ಊಟದ ಸಮಯಕ್ಕೆ ಬರುವಷ್ಟರಲ್ಲಿ 10 ಗಂಟೆ ಆಗಿರುತ್ತದೆ. ನೀವು ಈ ದಿನದ ಯಾವುದೇ ಸಮಯದಲ್ಲಿ ನನಗೆ ಕರೆ ಮಾಡಿ ನಿಮಗೆ ಹಸಿವಾಗಿದೆಯೇ ಎಂದು ಕೇಳಿದರೆ, ನಾನು ಹೌದು, ಎಂದು ಹೇಳುತ್ತೇನೆ” ಎಂದು ಸೂಚ್ಯಂಕದ ಬಗ್ಗೆ ತಮಾಷೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏತನ್ಮಧ್ಯೆ, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, ಇರಾನಿ ಅವರ ಹೇಳಿಕೆಗಳ ಬಗ್ಗೆ ವಾಗ್ದಾಳಿ ನಡೆಸಿ, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ. ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೀಲತೆಯನ್ನು ಸಭೆಯೊಂದರಲ್ಲಿ ಪ್ರದರ್ಶಿಸುತ್ತಿದ್ದೀರಾ? ನೀವು ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿರುವುದಕ್ಕೆ ನಾಚಿಕೆಯಾಗಬೇಕು. ನಿಮ್ಮ ಮಾತುಗಳನ್ನು ಕೇಳಲು ಅಸಹ್ಯವಾಗುತ್ತದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾಗತಿಕ ಹಸಿವು ಸೂಚ್ಯಂಕ | ಹಸಿದವರ ದೇಶವಾದ ಭಾರತ; ಪಾಕಿಸ್ತಾನಕ್ಕಿಂತ ಕೆಳಕ್ಕೆ ಕುಸಿತ

“ಮಾನ್ಯ ಸಚಿವರೆ, ದೇಶದ ಹಸಿವು ಸೂಚ್ಯಂಕವನ್ನು ಅಪೌಷ್ಟಿಕತೆ, ಮಕ್ಕಳ ಬೆಳವಣೆಗೆ ಕುಂಠಿತ, ಶಿಶುವಿನ ಮರಣ ಪ್ರಮಾಣ ಮುಂತಾದ ಅಂಶಗಳಿಂದ ನಿರ್ಧರಿಸಲಾಗಿದೆ. ದಯವಿಟ್ಟು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ. ನೀವು ಭಾರತ ಸರ್ಕಾರದ ಪ್ರಭಾವಶಾಲಿ ಮಂತ್ರಿ. ನೀವು ಭೇಟಿ ನೀಡುವ ಸ್ಥಳಗಳಲ್ಲಿ ಸಾಕಷ್ಟು ಮತ್ತು ಹೆಚ್ಚಿನ ಆಹಾರ ಸೇವೆ ಲಭ್ಯವಿರುತ್ತವೆ” ಎಂದು ಕುಟುಕಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ 2023ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು 125 ದೇಶಗಳಲ್ಲಿ 111 ನೇ ಸ್ಥಾನದಲ್ಲಿತ್ತು. ಇದು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಶ್ರೀಲಂಕಾಕ್ಕಿಂತ ಕೆಳಗೆ ಕುಸಿದಿತ್ತು.

ಸೂಚ್ಯಂಕದಲ್ಲಿ ನೆರೆ ರಾಷ್ಟ್ರಗಳಾದ ಪಾಕಿಸ್ತಾನ 102ನೇ ಸ್ಥಾನ, ಬಾಂಗ್ಲಾದೇಶ 81ನೇ ಸ್ಥಾನ, ನೇಪಾಳ 69ನೇ ಸ್ಥಾನ ಮತ್ತು ಶ್ರೀಲಂಕಾ 60ನೇ ಸ್ಥಾನ ಪಡೆದಿವೆ.

ಹಸಿವು ಸೂಚ್ಯಂಕದಲ್ಲಿ ಭಾರತ 28.7 ಅಂಕ ಪಡೆದಿದೆ. ಇದು ಗಂಭೀರ ಮಟ್ಟದ ಹಸಿವನ್ನು ಸೂಚಿಸುತ್ತದೆ. ಇನ್ನು ದೇಶದಲ್ಲಿ ನ್ಯೂನಪೋಷಣೆ ಪ್ರಮಾಣ ಶೇ 16.6ರಷ್ಟಿದೆ. ಐದು ವರ್ಷಕ್ಕಿಂತ ಒಳಗಿನವರ ಮರಣ ಪ್ರಮಾಣ ಶೇ 3.1 ಇದೆ. 15 ರಿಂದ 24 ವರ್ಷದ ಒಳಗಿನ ಮಹಿಳೆಯರಲ್ಲಿನ ಅನೀಮಿಯಾ ಸಮಸ್ಯೆ ಶೇ 58.1ರಷ್ಟಿದೆ ಎಂದು ವರದಿಯಲ್ಲಿ ತಿಳಿಸಿದೆ.

ಜಾಗತಿಕ ಹಸಿವು ಸೂಚ್ಯಂಕ ಅಂಕಗಳ ಲೆಕ್ಕಾಚಾರದಲ್ಲಿ ಬಳಸುವ ಸೂಚಕಗಳಲ್ಲಿ ಒಂದಾದ ಅಪೌಷ್ಟಿಕತೆಯ ಹರಡುವಿಕೆಯು ಹೆಚ್ಚುತ್ತಿದೆ. ಅಪೌಷ್ಟಿಕತೆಯ ಸಂಖ್ಯೆಯು 572 ಮಿಲಿಯನ್‌ನಿಂದ ಸುಮಾರು 735 ಮಿಲಿಯನ್‌ಗೆ ಏರಿದೆ ಎಂದು ಸೂಚ್ಯಂಕ ವರದಿ ಹೇಳಿತ್ತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...