ಬಾಗಿಲು ಸದಾ ತೆರೆದಿರುತ್ತದೆ; ನಿತೀಶ್‌ಗೆ ಲಾಲು ಮತ್ತೆ ಆಹ್ವಾನ

Date:

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್‌ಜೆಡಿ ಸಖ್ಯ ಬಿಟ್ಟು ಬಿಜೆಪಿ ಜೊತೆ ಸೇರಿ ಪುನಃ ಸರ್ಕಾರ ರಚಿಸಿದ್ದರು.

ಜೆಡಿಯು ಹಾಗೂ ಆರ್‌ಜೆಡಿ ಮೈತ್ರಿಕೂಟ ಸರ್ಕಾರ ಬಿದ್ದ ನಂತರದಿಂದ ಲಾಲು ಪ್ರಸಾದ್ ಯಾದವ್‌ ಅವರು ಮೌನಕ್ಕೆ ಜಾರಿದ್ದರು. ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

ಇಬ್ಬರು ನಾಯಕರು ಗುರುವಾರ ಬಿಹಾರ ವಿದಾನಸೌಧದ ಆವರಣದಲ್ಲಿ ಸಾಂಪ್ರದಾಯಿಕವಾಗಿ ಹಸ್ತಲಾಘವ ಮಾಡಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಮೂತ್ರಕೋಶ ಕಸಿ ಚಿಕಿತ್ಸೆಯ ನಂತರ ಲಾಲು ಪ್ರಸಾದ್ ಯಾದವ್ ಅವರು ಹೆಚ್ಚಾಗಿ ಮನೆಯಲ್ಲಿಯೇ ಇರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುತ್ತಿರುವ ಮನೋಜ್‌ ಝಾ ಹಾಗೂ ಸಂಜಯ್ ಯಾದವ್ ಅವರಿಗೆ ನೈತಿಕ ಸ್ಥೈರ್ಯ ತುಂಬುವುದಕ್ಕಾಗಿ ನಾಮಪತ್ರ ಸಲ್ಲಿಕೆಯ ದಿನದಂದು ಅವರ ಜೊತೆ ಕಾಣಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಪತ್ರಕರ್ತರು ಲಾಲು ಅವರನ್ನು ವಿಧಾನಸಭೆ ಆವರಣದಲ್ಲಿ ಪ್ರಶ್ನಿಸಿದಾಗ ಅವರು ವಾಪಸ್ ಬರಲಿ,ಆನಂತರ ನಾವು ನೋಡೋಣ ಎಂದಿದ್ದರು.

ನಿತೀಶ್ ಅವರು ಆರ್‌ಜೆಡಿ ಮೈತ್ರಿ ಬಿಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಲಾಲು ಪ್ರಸಾದ್ ಯಾದವ್‌ ಅವರ ಪುತ್ರ ತೇಜಸ್ವಿ ಯಾದವ್‌ ಜೆಡಿಯು ದೂರವಾದ ನಂತರ ಎರಡು ಬಾರಿಯು ಡಿಸಿಎಂ ಸ್ಥಾನ ಕಳೆದುಕೊಂಡಿದ್ದರು.

ಲಾಲು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ವಕ್ತಾರ ನೀರಜ್ ಕುಮಾರ್, ಲಾಲು ಅವರು ಬಾಗಿಲು ತೆರೆದಿದೆ ಎಂದು ಹೇಳುತ್ತಾರೆ. ನಮ್ಮ ನಾಯಕ ನಿತೀಶ್ ಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಆರ್‌ಜೆಡಿಯೊಂದಿಗೆ ಅಧಿಕಾರ ಹಂಚಿಕೊಂಡರೆ ಭ್ರಷ್ಟಚಾರದೊಂದಿಗೆ ಭಾಗಿಯಾಗಬೇಕಾಗುತ್ತದೆ. ವಾಪಸ್‌ ಹೋಗುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...