ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

Date:

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42 ಲೋಕಸಭಾ ಕ್ಷೇತ್ರದಲ್ಲಿಯೂ ಟಿಎಂಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘ಚುನಾವಣೆಯಲ್ಲಿ ಮೈತ್ರಿಗಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಇಂದಿಗೂ ಬಾಗಿಲು ತೆರೆದಿದೆ’ ಎಂದು ಹೇಳಿದ್ದಾರೆ.

ಪಾಟ್ನಾದಲ್ಲಿ ಪ್ರತಿಪಕ್ಷಗಳ ರ‍್ಯಾಲಿಗೆ ಮುನ್ನ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಜೈರಾಮ್ ರಮೇಶ್, ನಾವು ಇನ್ನೂ ಭರವಸೆ ಹೊಂದಿದ್ದೇವೆ. ಬಿಜೆಪಿಯನ್ನು ಸೋಲಿಸುವುದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದ್ಯತೆಯಾಗಿದೆ. ಹಾಗಿದ್ದಾಗ ಭಾರತದ ಮೈತ್ರಿಯಲ್ಲಿ ನಾನು ಸೇರುತ್ತೇನೆ ಎಂದು ಅವರು ಹೇಳುವ ಭರವಸೆಯಿದೆ ಎಂದು ತಿಳಿಸಿದ್ದಾರೆ.

ಟಿಎಂಸಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಇಂದಿಗೂ ಮೈತ್ರಿಯ ಬಾಗಿಲನ್ನು ಮುಚ್ಚಿಲ್ಲ. ಮಮತಾರ ಟಿಎಂಸಿ ಎಲ್ಲಾ 42 ಸ್ಥಾನಗಳಲ್ಲಿ (ಪಶ್ಚಿಮ ಬಂಗಾಳದಲ್ಲಿ) ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿದೆ, ಆದರೆ ಅವರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬ ಘೋಷಣೆ ಮಾಡಿಲ್ಲ. ಮೈತ್ರಿಯ ಮಾತುಕತೆ ಮುಂದುವರೆದಿದೆ, ಟಿಎಂಸಿಗೆ ಬಾಗಿಲು ತೆರೆದಿದೆ. ಮಮತಾ ಅಂತಿಮ ಮಾತು ಹೇಳುವವರೆಗೂ ನಾವು ಅಂತಿಮವಾಗಿ ಏನು ಹೇಳಲಾಗದು,” ಎಂದು ಹೇಳಿದರು.

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ರ‍್ಯಾಲಿಯ ಬಗ್ಗೆ ಈ ಸಂದರ್ಭದಲ್ಲೇ ಮಾತನಾಡಿದ ರಮೇಶ್, ಇದು ಜಂಟಿ ವಿರೋಧ ಪಕ್ಷದ ರ‍್ಯಾಲಿಯಾಗಿದ್ದು, ಶನಿವಾರ ಪ್ರಧಾನಿ ಪಾಟ್ನಾಗೆ ಹೋದ ಬಳಿಕವೇ ಶುರುವಾಗಲಿದೆ. ಇದು ಬಹಳ ಮಹತ್ವದ ರಾಜಕೀಯ ರ‍್ಯಾಲಿಯಾಗಿದೆ ಮತ್ತು ಇದು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಸೋಲಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನವಾಗಿದೆ ಎಂದರು.

ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ ಭಾರತ್ ಜೋಡೋ ಯಾತ್ರೆಗೆ ವಿರಾಮ ನೀಡಿದ್ದಾರೆ ಎಂದು ರಮೇಶ್ ತಿಳಿಸಿದರು. ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ರ‍್ಯಾಲಿಗಾಗಿ ಪಾಟ್ನಾಗೆ ಹೋಗಬೇಕಾಗಿದೆ. ಆದ್ದರಿಂದ ಸ್ವಲ್ಪ ಬದಲಾವಣೆಯಾಗಿದೆ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಅದರಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಲೋಕದಳದ ಭಾಗವಹಿಸುವಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರಮೇಶ್, ಅಲಿಗಢದಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರನ್ನು ‘ನಿಜವಾದ’ ಲೋಕದಳ ಸ್ವಾಗತಿಸಿತು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಇಂದಿರಾ ಗಾಂಧಿ ಮತ್ತು ಲೋಕದಳದ ಪೋಸ್ಟರ್‌ಗಳು, ಬ್ಯಾನರ್‌ಗಳು ಮತ್ತು ಹೋರ್ಡಿಂಗ್‌ಗಳು ಅಲ್ಲಿದ್ದವು ಎಂದರು.

“ಅದು ನಿಜವಾದ ಲೋಕದಳ, ಅಸಲಿ ಲೋಕದಳ, ಆರ್‌ಎಲ್‌ಡಿ (ರಾಷ್ಟ್ರೀಯ ಲೋಕದಳ) ನಕಲಿ ಲೋಕದಳ,” ಎಂದು ಪ್ರತಿಪಾದಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ ಗೌರವಿಸಿದ ನಂತರ ಆರ್‌ಎಲ್‌ಡಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರ್ಪಡೆಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...