ಡೋಪಿಂಗ್ | ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ನಾಲ್ಕು ವರ್ಷ ಅಮಾನತು

Date:

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ಡೋಪಿಂಗ್ ವಿಚಾರವಾಗಿ ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.

ಕಳೆದ ಮಾರ್ಚ್ 10ರಂದು ಹರಿಯಾಣದ ಸೋನೆಪತ್‌ನಲ್ಲಿ ನಡೆದ ಕುಸ್ತಿ ಆಯ್ಕೆ ಟ್ರಯಲ್ಸ್‌ನಲ್ಲಿ ನಿಷೇಧಿತ ಉದ್ದೀಪನ ಮದ್ದು ಪರೀಕ್ಷೆಗಾಗಿ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದಕ್ಕಾಗಿ ಪೂನಿಯಾ ಅವರನ್ನು ಏಪ್ರಿಲ್ 23ರಂದು ‘ನಾಡಾ’ ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು. ಅದನ್ನು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಸಂಸ್ಥೆಯೂ ಅಂಗೀಕರಿಸಿತ್ತು.

ಅಮಾನತು ಕ್ರಮ ಪ್ರಶ್ನಿಸಿ ಪೂನಿಯಾ ನಾಡಾಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಕಳೆದ ಸೆಪ್ಟೆಂಬರ್ 20 ಹಾಗೂ ಅಕ್ಟೋಬರ್ 4 ರಂದು ಅಂತಿಮ ವಿಚಾರಣೆ ನಡೆಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ ಮಂಗಳವಾರ ಪೂನಿಯಾ ಅವರನ್ನು ನಾಲ್ಕು ವರ್ಷ ಕುಸ್ತಿಯಿಂದ ಅಮಾನತು ಮಾಡಿ ಕ್ರಮ ಕೈಗೊಂಡಿದೆ. ಈ ಆದೇಶದ ಪ್ರಕಾರ ಪೂನಿಯಾ ಅವರು ಇನ್ನು ನಾಲ್ಕು ವರ್ಷ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕುಸ್ತಿ ಆಡುವಂತಿಲ್ಲ. ಈ ಅನರ್ಹತೆ 2024 ಏಪ್ರಿಲ್ 23ರಿಂದಲೇ ಅನ್ವಯವಾಗುತ್ತದೆ ಎಂದು ನಾಡಾ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಕುಸ್ತಿಪಟುಗಳ ಅಸಮಾಧಾನದ ಕಟ್ಟೆ ಒಡೆದು, ಕುಸ್ತಿಪಟು ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಯವರಿಗೆ ಹಿಂದಿರುಗಿಸುತ್ತಿರುವುದಾಗಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡು ಸುದ್ದಿಯಾಗಿದ್ದರು.

ಬಜರಂಗ್ ಪೂನಿಯಾ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿ, ಸದ್ಯ ಆ ಪಕ್ಷದ ರೈತ ಘಟಕದ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಜರಂಗ್ ಪೂನಿಯಾ ಕಾಂಗ್ರೆಸ್‌ ಸೇರಿದ ಮೇಲೆ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಕಾಂಗ್ರೆಸ್‌ ತೊರೆಯುವಂತೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ಪೊಲೀಸ್‌ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...