ದೃಶ್ಯಂ ಸಿನಿಮಾ ಪ್ರೇರಣೆ | ಗಂಡನನ್ನು ಕೊಲೆ ಮಾಡಿ ಶವವನ್ನು ಮನೆಯಲ್ಲೇ ಹೂತಿಟ್ಟ ಪತ್ನಿ

Date:

ಜೀತು ಜೋಸೆಫ್‌ ನಿರ್ದೇಶನದಲ್ಲಿ 2013ರಲ್ಲಿ ಮಲಯಾಳಂ ಸಿನಿಮಾ ದೃಶ್ಯಂ ತೆರೆಗೆ ಬಂದಿತ್ತು. ಈ ಚಿತ್ರ ಸೂಪರ್‌ ಹಿಟ್‌ ಆದ ನಂತರ ದಕ್ಷಿಣ ಭಾರತ ಹಾಗೂ ಹಿಂದಿಯಲ್ಲಿ ರಿಮೇಕ್‌ಗಳಾಗಿ ಸೂಪರ್‌ ಹಿಟ್‌ ಆಗಿದ್ದವು. ಕೊಲೆ ಮಾಡಿ ಶವವನ್ನು ಹೂತ್ತಿಟ್ಟದ ಕತೆ ಅದಾಗಿತ್ತು. ಈಗ ಅದೇ ಸಿನಿಮಾ ರೀತಿಯಲ್ಲಿ ಮಹಾರಾಷ್ಟ್ರದಲ್ಲಿ ಅಪರಾಧ ಕೃತ್ಯವೊಂದು ವರದಿಯಾಗಿದೆ.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಸ್ನೇಹಿತನ ಸಹಾಯದಿಂದ ತನ್ನ ಗಂಡನನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿದ್ದಾರೆ.

ವಿಜಯ್‌ ಚವಾಣ್‌ – ಕೋಮಲ್‌ ಚವಾಣ್‌ ದಂಪತಿಗೆ 8 ವರ್ಷದ ಪುತ್ರನಿದ್ದಾನೆ. 35 ವರ್ಷದ ವಿಜಯ್ ಚವಾಣ್ ಕಳೆದ 15 ದಿನಗಳಿಂದ ಕಾಣೆಯಾಗಿದ್ದರು. ಅವರು ಮುಂಬೈನಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ನಲಸೋಪರ ಪೂರ್ವದ ಗದ್ಗಪದ ಪ್ರದೇಶದಲ್ಲಿ ತಮ್ಮ 28 ವರ್ಷದ ಪತ್ನಿ ಕೋಮಲ್ ಚವಾಣ್ ಅವರೊಂದಿಗೆ ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ವಿಜಯ್‌ ಕಾಣೆಯಾಗಿದ್ದಾರೆ ಎನ್ನುವುದನ್ನು ಅರಿತ ಅವರ ಸಹೋದರರು ಕಳೆದ ಕೆಲ ದಿನಗಳಿಂದ ಅವರಿಗಾಗಿ ಹುಡಕಾಟ ನಡೆಸುತ್ತಿದ್ದರು. ಸೋಮವಾರ (ಜು.21) ರಂದು ವಿಜಯ್‌ ಅವರ ಸಹೋದರ ಗದ್ಗಪದಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಈ ವೇಳೆ ಮನೆಯ ನೆಲದ ಟೈಲ್ಸ್‌ಗಳ ಕೆಲ ಭಾಗವು ಹೊಸದಾಗಿ ಹಾಕಲ್ಪಟ್ಟಿದ್ದು ಮತ್ತು ಬಣ್ಣದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿರುವುದನ್ನು ಗಮನಿಸಿದ್ದಾರೆ. ಟೈಲ್ಸ್‌ ಎತ್ತಿ ಪರಿಶೀಲಿಸಿದಾಗ ಅಲ್ಲಿಂದ ಕೆಟ್ಟ ವಾಸನೆ ಬರಲು ಶುರುವಾಗಿದೆ. ಆ ಬಳಿಕ ಬಟ್ಟೆಯ ತುಂಡೊಂದು ಪತ್ತೆಯಾಗಿದೆ. ಇದರಿಂದ ಅನುಮಾನ ಇನ್ನಷ್ಟು ಹೆಚ್ಚಾಗಿದೆ. ಕೊನೆಗೆ ಇನ್ನಷ್ಟು ಅಳದಲ್ಲಿ ನೋಡಿದಾಗ ಅದರಲ್ಲಿ ವಿಜಯ್‌ ಅವರ ದೇಹ ಹೂತು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಜಯ್‌ ಅವರ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ, ತನಿಖೆ ಶುರುವಾಗಿದೆ. ಕೋಮಲ್‌ ಪಕ್ಕದ ಮನೆಯ ಮೋನು ಎಂಬಾತನ ಜತೆ ಕೆಲ ದಿನಗಳ ಹಿಂದೆ ಹೋಗಿದ್ದು ವಾಪಸ್‌ ಬಾರದ ಹಿನ್ನೆಲೆ ಈ ಕೃತ್ಯವನ್ನು ಅವರಿಬ್ಬರು ಸೇರಿಕೊಂಡು ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಶೌಚಾಲಯದ ಡ್ರೈನೇಜ್ ಮುಚ್ಚಿಹೋಗಿದೆ ಎಂದು ಕೋಮಲ್ ಹೇಳಿಕೊಂಡಿದ್ದರು ಮತ್ತು ಆ ಪ್ರದೇಶವನ್ನು ಅಗೆಯಲು ಕಾರ್ಮಿಕರನ್ನು ಕರೆದಿದ್ದರು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಅನುಮಾನ ಮತ್ತಷ್ಟು ದೃಢವಾಗಿದೆ. ಸದ್ಯ ಕೋಮಲ್‌ – ಮೋನುಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...