ಪ್ರೋಟೋಕಾಲ್ ಉಲ್ಲಂಘನೆ: ಬೈಡನ್‌ ಜಿ20 ಬೆಂಗಾವಲು ಪಡೆಯ ಚಾಲಕನ ಬಂಧನ

Date:

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಜಿ20 ಬೆಂಗಾವಲು ಪಡೆಯಲ್ಲಿದ್ದ ಚಾಲಕನನ್ನು ಪ್ರೋಟೋಕಾಲ್ ಉಲ್ಲಂಘನೆಗಾಗಿ ಶನಿವಾರ ದೆಹಲಿಯಲ್ಲಿ ಬಂಧಿಸಲಾಯಿತು.

ನಿರ್ಲಕ್ಷ್ಯದ ಚಾಲನೆಯ ಮೇಲೆ ಬಂಧಿಸಿ ವಿಚಾರಣೆಗೊಳಪಡಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

ನವದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿರುವುದರಿಂದ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯಿಂದ ಬಂದ ಕಾರು ಪ್ರವೇಶಿಸಿದ ನಂತರ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿನಲ್ಲಿ ಹಲವು ಸ್ಟಿಕ್ಕರ್‌ಗಳು ಇದ್ದ ಕಾರಣ ಸ್ಥಳದಲ್ಲಿದ್ದ ಭದ್ರತಾ ಅಧಿಕಾರಿಗಳು ಪರಿಶೀಲನೆ ನಡೆಸಿ ವಿಚಾರಿಸಿದಾಗ, ಬೈಡನ್‌ ತಂಗಿದ್ದ ಐಟಿಸಿ ಮೌರ್ಯ ಹೊಟೇಲಿಗೆ ಇಂದು ಬೆಳಗ್ಗೆ 9.30ಕ್ಕೆ ಬರಬೇಕಿತ್ತು. ಆದರೆ ಚಾಲಕ ಲೋಧಿ ಎಸ್ಟೇಟ್ ಪ್ರದೇಶದಿಂದ ಬಂದ ಉದ್ಯಮಿಯೊಬ್ಬರನ್ನು ತಾಜ್‌ಗೆ ಬಿಡಬೇಕಾಗಿದ್ದರಿಂದ ತಾಜ್‌ ಹೋಟೆಲ್‌ಗೆ ಆಗಮಿಸಿದರು. ಚಾಲಕನಿಗೆ ಪ್ರೋಟೋಕಾಲ್ ಬಗ್ಗೆ ತಿಳಿದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಹಾಳು ಮಾಡಲು ಭ್ರಷ್ಟ ಜಯ್‌ ಶಾ ಸಾಕು ಎಂದಿದ್ದ ಮಾಜಿ ಕ್ರಿಕೆಟಿಗ ವೆಂಕಿ: ಕೆಲವೇ ನಿಮಿಷದಲ್ಲಿ ಪೋಸ್ಟ್‌ ಡಿಲೀಟ್!

ಬೆಂಗಾವಲು ಪಡೆಯಿಂದ ಕಾರನ್ನು ಭದ್ರತಾ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಚಾಲಕನನ್ನು ಬಿಡುಗಡೆ ಮಾಡಲಾಯಿತು.

ವಿಯೆಟ್ನಾಂಗೆ ಹೊರಟ ಬೈಡನ್

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜಿ 20 ಶೃಂಗ ಸಭೆ ಮುಗಿಸಿ ವಾಪಸ್ ಆದರು. ಭಾನುವಾರ ಅವರು ದೆಹಲಿಯಿಂದ ವಿಯೆಟ್ನಾಂಗೆ ಪ್ರಯಾಣ ಬೆಳೆಸಿದರು. ಶುಕ್ರವಾರ ಸಂಜೆ ಅವರು ನವದೆಹಲಿಗೆ ಆಗಮಿಸಿದ್ದರು.

ಜೋ ಬೈಡಲ್ ಅಮೆರಿಕದ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದರು. ಎರಡು ದಿನದ ಪ್ರವಾಸದಲ್ಲಿ ಅವರು ಹಲವು ಸಭೆಗಳಲ್ಲಿ ಪಾಲ್ಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಹಲವು ನಾಯಕರನ್ನು ಭೇಟಿಯಾದರು.

ನವದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ಜಿ20 ಶೃಂಗಸಭೆ ನಡೆಯುತ್ತಿದೆ. ಶೃಂಗಸಭೆಗೆ 12.30ಕ್ಕೆ ತೆರೆ ಬೀಳಲಿದೆ. ಇದಕ್ಕೂ ಮೊದಲೇ ಅಮೆರಿಕ ಅಧ್ಯಕ್ಷರು ತಮ್ಮ ಎಲ್ಲ ಕಾರ್ಯಕ್ರಮ ಮುಗಿಸಿ, ವಿಯೆಟ್ನಾಂಗೆ ತೆರಳಿದರು.

ದೆಹಲಿಯಲ್ಲಿ ವಿಮಾನ ಹತ್ತುವ ಮೊದಲು ಜೋ ಬೈಡನ್ ವಿಮಾನ ನಿಲ್ದಾಣದಲ್ಲಿ ಭಾರತದಲ್ಲಿ ನೆಲೆಸಿರುವ ಅಮೆರಿಕದ ಪ್ರಜೆಗಳೊಂದಿಗೆ ಮಾತುಕತೆ ನಡೆಸಿದರು. ಶುಕ್ರವಾರ ಸಂಜೆ ಭಾರತಕ್ಕೆ ಆಗಮಿಸಿದ್ದ ಬೈಡನ್ ಶೃಂಗ ಸಭೆ ಮುಗಿಸಿ ವಾಪಸ್ ಆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...